Home / ಕಥೆ / ಸಣ್ಣ ಕಥೆ / ಕೆಂಬಲ್ಲಿನ ಗೆಲುವು

ಕೆಂಬಲ್ಲಿನ ಗೆಲುವು

ರಾಜ ಒಡೆಯರವರು ಶ್ರೀರಂಗಪಟ್ಟಣದಲ್ಲಿದ್ದ ತಿರುಮಲ ರಾಯನ ಆಸ್ಥಾನಕ್ಕೆ ಹೋಗುತ್ತಲಿರಬೇಕಾಗಿತ್ತು. ಏಕೆಂದರೆ ಆಗಿನಕಾಲದ ಪಾಳಯಗಾರರೂ ಒಡೆಯರೂ ವಿಜಯನಗರದ ಅರಸರಿಗೆ ಅಧೀನರಾಗಿದ್ದು ಶ್ರೀರಂಗಪಟ್ಟಣದಲ್ಲಿದ್ದ ಅವರ ಪ್ರತಿನಿಧಿಯ ವಶವರ್ತಿಗಳಾಗಿದ್ದರು. ಶ್ರೀರಂಗಪಟ್ಟಣಕ್ಕೆ ಹೋಗುವ ಮಾರ್ಗದಲ್ಲಿ ಒಡೆಯರೂ ಪಾಳಯಗಾರರೂ ಪರಸ್ಪರ ಸೇರಿ ಜಗಳವಾಡುವುದು ಸಾಮಾನ್ಯವಾಗಿತ್ತು.

ಶ್ರೀರಂಗಪಟ್ಟಣಕ್ಕೆ ರಾಜ ಒಡೆಯರು ತಮ್ಮ ಮೈಗಾವಲಿನ ಭಟರೊಡನೆಯೂ ವಾಲಗ ಮೇಳದೊಡನೆಯೂ ಹೊರಟರು. ದಾರಿಯಲ್ಲಿ ಕೆಂಬಲ್ಲೆಂಬ ಗ್ರಾಮದ ಒಡೆಯನೂ ಅದೇ ರೀತಿಯಲ್ಲಿ ಮೇಳತಾಳಗಳೊಡನೆ ಹೋಗುತ್ತಿದ್ದನು. ರಾಜ ಒಡೆಯರಿಗೆ ಇದು ಅವಮಾನವಾಗಿ ತೋರಿತು. “ಮೇಳತಾಳಗಳೊಡನೆ ನಮ್ಮೆದುರಿಗೆ ಯಾರು ಹೋಗುತ್ತಿರುವವರು” ಎಂದು ಕೇಳಲು “ಕೆಂಬಲ್ಲಿನ ಒಡೆಯರು” ಎಂಬ ಉತ್ತರ ಬಂತು. ಕೂಡಲೆ ರಾಜ ಒಡೆಯರು ತಮ್ಮ ವಾದ್ಯಗಳನ್ನು ನಿಲ್ಲಿಸುವಂತೆ ಆಜ್ಞೆ ಮಾಡಿದರು. ಸದ್ದಿಲ್ಲದೆ ಶ್ರೀರಂಗಪಟ್ಟಣವನ್ನು ಸೇರಿ ತಿರುಮಲರಾಯರ ಆಸ್ಥಾನವನ್ನು ಹೊಕ್ಕರು. ಇದನ್ನು ಕಂಡು ತಿರುಮಲರಾಯರು “ಇದೇನು ರಾಜ ಒಡೆಯರೇ ತಮ್ಮ ಪದವಿಗೆ ತಕ್ಕಂತೆ ಮೇಳತಾಳಗಳೊಡನೆ ಪ್ರವೇಶಮಾಡದೆ ಮೌನದಿಂದ ಬಂದಿರಿ?” ಎಂದು ಕೇಳಲು ರಾಜ ಒಡೆಯರು ಕ್ರೋಧದಿಂದ “ಮೇಳತಾಳಗಳನ್ನು ನಮಗಿಂತಲೂ ಕೀಳಾದವರೂ ಇಟ್ಟುಕೊಳ್ಳುವಾಗ ಅದರಿಂದ ನಮ್ಮ ಪದವಿಗೇನು ಗೌರವ?” ಎಂದು ನುಡಿದರು. ಇದನ್ನು ಕೇಳಿದ ಕಂಬಲ್ಲಿನ ಒಡೆಯನು ಕೋಪದಿಂದ ಕಣು ಕೆರಳಿಸಿದನು. ಅದನ್ನು ಕಂಡು ರಾಜ ಒಡೆಯರು “ಏಕೆ? ಒಡೆಯರೇ? ನಿಮಗಿಷ್ಟವಾದರೆ ಈಗಲೇ ಯಾರು ಶ್ರೇಷ್ಟರೆಂದು ಕಾಣುವ! ತಾಳಮೇಳಗಳು ಯಾರಿಗೆ ಸಲ್ಲತಕ್ಕದ್ದೆಂದು ನಿರ್ಣಯವಾಗಲಿ ” ಎಂದರು. ತಿರುಮಲರಾಯರು “ನೀವಿಬ್ಬರೂ ಹೀಗೆ ಕಲಹವಾಡಬಾರದು” ಎನ್ನಲು ಅವರೆದುರಿಗೇನೂ ಮಾಡಲಾರದೆ ಇಬ್ಬರೂ ರೋಷವನ್ನು ನುಂಗಿಕೊಂಡು ಸುಮ್ಮನಿದ್ದರು. ಮಾರನೆ ದಿವಸ ಬಂದಕೂಡಲೆ ರಾಜ ಒಡೆಯರು ಕೆಂಬಲ್ಲಿನ ಮೇಲೆ ಪಡೆಸಹಿತ ಹೊರಟು ಆ ಒಡೆಯರನ್ನು ಸೋಲಿಸಿ ಕೆಂಬಲ್ಲನ್ನು ವಶಪಡಿಸಿಕೊಂಡರು.
*****
[ವಿಲ್ಕ್ಸ್, ಸಂ. ೧. ಪುಟ ೨೪]

Tagged:

Leave a Reply

Your email address will not be published. Required fields are marked *

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...