Home / ಕಥೆ / ಸಣ್ಣ ಕಥೆ / ಕೆಂಬಲ್ಲಿನ ಗೆಲುವು

ಕೆಂಬಲ್ಲಿನ ಗೆಲುವು

ರಾಜ ಒಡೆಯರವರು ಶ್ರೀರಂಗಪಟ್ಟಣದಲ್ಲಿದ್ದ ತಿರುಮಲ ರಾಯನ ಆಸ್ಥಾನಕ್ಕೆ ಹೋಗುತ್ತಲಿರಬೇಕಾಗಿತ್ತು. ಏಕೆಂದರೆ ಆಗಿನಕಾಲದ ಪಾಳಯಗಾರರೂ ಒಡೆಯರೂ ವಿಜಯನಗರದ ಅರಸರಿಗೆ ಅಧೀನರಾಗಿದ್ದು ಶ್ರೀರಂಗಪಟ್ಟಣದಲ್ಲಿದ್ದ ಅವರ ಪ್ರತಿನಿಧಿಯ ವಶವರ್ತಿಗಳಾಗಿದ್ದರು. ಶ್ರೀರಂಗಪಟ್ಟಣಕ್ಕೆ ಹೋಗುವ ಮಾರ್ಗದಲ್ಲಿ ಒಡೆಯರೂ ಪಾಳಯಗಾರರೂ ಪರಸ್ಪರ ಸೇರಿ ಜಗಳವಾಡುವುದು ಸಾಮಾನ್ಯವಾಗಿತ್ತು.

ಶ್ರೀರಂಗಪಟ್ಟಣಕ್ಕೆ ರಾಜ ಒಡೆಯರು ತಮ್ಮ ಮೈಗಾವಲಿನ ಭಟರೊಡನೆಯೂ ವಾಲಗ ಮೇಳದೊಡನೆಯೂ ಹೊರಟರು. ದಾರಿಯಲ್ಲಿ ಕೆಂಬಲ್ಲೆಂಬ ಗ್ರಾಮದ ಒಡೆಯನೂ ಅದೇ ರೀತಿಯಲ್ಲಿ ಮೇಳತಾಳಗಳೊಡನೆ ಹೋಗುತ್ತಿದ್ದನು. ರಾಜ ಒಡೆಯರಿಗೆ ಇದು ಅವಮಾನವಾಗಿ ತೋರಿತು. “ಮೇಳತಾಳಗಳೊಡನೆ ನಮ್ಮೆದುರಿಗೆ ಯಾರು ಹೋಗುತ್ತಿರುವವರು” ಎಂದು ಕೇಳಲು “ಕೆಂಬಲ್ಲಿನ ಒಡೆಯರು” ಎಂಬ ಉತ್ತರ ಬಂತು. ಕೂಡಲೆ ರಾಜ ಒಡೆಯರು ತಮ್ಮ ವಾದ್ಯಗಳನ್ನು ನಿಲ್ಲಿಸುವಂತೆ ಆಜ್ಞೆ ಮಾಡಿದರು. ಸದ್ದಿಲ್ಲದೆ ಶ್ರೀರಂಗಪಟ್ಟಣವನ್ನು ಸೇರಿ ತಿರುಮಲರಾಯರ ಆಸ್ಥಾನವನ್ನು ಹೊಕ್ಕರು. ಇದನ್ನು ಕಂಡು ತಿರುಮಲರಾಯರು “ಇದೇನು ರಾಜ ಒಡೆಯರೇ ತಮ್ಮ ಪದವಿಗೆ ತಕ್ಕಂತೆ ಮೇಳತಾಳಗಳೊಡನೆ ಪ್ರವೇಶಮಾಡದೆ ಮೌನದಿಂದ ಬಂದಿರಿ?” ಎಂದು ಕೇಳಲು ರಾಜ ಒಡೆಯರು ಕ್ರೋಧದಿಂದ “ಮೇಳತಾಳಗಳನ್ನು ನಮಗಿಂತಲೂ ಕೀಳಾದವರೂ ಇಟ್ಟುಕೊಳ್ಳುವಾಗ ಅದರಿಂದ ನಮ್ಮ ಪದವಿಗೇನು ಗೌರವ?” ಎಂದು ನುಡಿದರು. ಇದನ್ನು ಕೇಳಿದ ಕಂಬಲ್ಲಿನ ಒಡೆಯನು ಕೋಪದಿಂದ ಕಣು ಕೆರಳಿಸಿದನು. ಅದನ್ನು ಕಂಡು ರಾಜ ಒಡೆಯರು “ಏಕೆ? ಒಡೆಯರೇ? ನಿಮಗಿಷ್ಟವಾದರೆ ಈಗಲೇ ಯಾರು ಶ್ರೇಷ್ಟರೆಂದು ಕಾಣುವ! ತಾಳಮೇಳಗಳು ಯಾರಿಗೆ ಸಲ್ಲತಕ್ಕದ್ದೆಂದು ನಿರ್ಣಯವಾಗಲಿ ” ಎಂದರು. ತಿರುಮಲರಾಯರು “ನೀವಿಬ್ಬರೂ ಹೀಗೆ ಕಲಹವಾಡಬಾರದು” ಎನ್ನಲು ಅವರೆದುರಿಗೇನೂ ಮಾಡಲಾರದೆ ಇಬ್ಬರೂ ರೋಷವನ್ನು ನುಂಗಿಕೊಂಡು ಸುಮ್ಮನಿದ್ದರು. ಮಾರನೆ ದಿವಸ ಬಂದಕೂಡಲೆ ರಾಜ ಒಡೆಯರು ಕೆಂಬಲ್ಲಿನ ಮೇಲೆ ಪಡೆಸಹಿತ ಹೊರಟು ಆ ಒಡೆಯರನ್ನು ಸೋಲಿಸಿ ಕೆಂಬಲ್ಲನ್ನು ವಶಪಡಿಸಿಕೊಂಡರು.
*****
[ವಿಲ್ಕ್ಸ್, ಸಂ. ೧. ಪುಟ ೨೪]

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...