Home / ಕಥೆ / ಸಣ್ಣ ಕಥೆ / ಕೆಂಬಲ್ಲಿನ ಗೆಲುವು

ಕೆಂಬಲ್ಲಿನ ಗೆಲುವು

ರಾಜ ಒಡೆಯರವರು ಶ್ರೀರಂಗಪಟ್ಟಣದಲ್ಲಿದ್ದ ತಿರುಮಲ ರಾಯನ ಆಸ್ಥಾನಕ್ಕೆ ಹೋಗುತ್ತಲಿರಬೇಕಾಗಿತ್ತು. ಏಕೆಂದರೆ ಆಗಿನಕಾಲದ ಪಾಳಯಗಾರರೂ ಒಡೆಯರೂ ವಿಜಯನಗರದ ಅರಸರಿಗೆ ಅಧೀನರಾಗಿದ್ದು ಶ್ರೀರಂಗಪಟ್ಟಣದಲ್ಲಿದ್ದ ಅವರ ಪ್ರತಿನಿಧಿಯ ವಶವರ್ತಿಗಳಾಗಿದ್ದರು. ಶ್ರೀರಂಗಪಟ್ಟಣಕ್ಕೆ ಹೋಗುವ ಮಾರ್ಗದಲ್ಲಿ ಒಡೆಯರೂ ಪಾಳಯಗಾರರೂ ಪರಸ್ಪರ ಸೇರಿ ಜಗಳವಾಡುವುದು ಸಾಮಾನ್ಯವಾಗಿತ್ತು.

ಶ್ರೀರಂಗಪಟ್ಟಣಕ್ಕೆ ರಾಜ ಒಡೆಯರು ತಮ್ಮ ಮೈಗಾವಲಿನ ಭಟರೊಡನೆಯೂ ವಾಲಗ ಮೇಳದೊಡನೆಯೂ ಹೊರಟರು. ದಾರಿಯಲ್ಲಿ ಕೆಂಬಲ್ಲೆಂಬ ಗ್ರಾಮದ ಒಡೆಯನೂ ಅದೇ ರೀತಿಯಲ್ಲಿ ಮೇಳತಾಳಗಳೊಡನೆ ಹೋಗುತ್ತಿದ್ದನು. ರಾಜ ಒಡೆಯರಿಗೆ ಇದು ಅವಮಾನವಾಗಿ ತೋರಿತು. “ಮೇಳತಾಳಗಳೊಡನೆ ನಮ್ಮೆದುರಿಗೆ ಯಾರು ಹೋಗುತ್ತಿರುವವರು” ಎಂದು ಕೇಳಲು “ಕೆಂಬಲ್ಲಿನ ಒಡೆಯರು” ಎಂಬ ಉತ್ತರ ಬಂತು. ಕೂಡಲೆ ರಾಜ ಒಡೆಯರು ತಮ್ಮ ವಾದ್ಯಗಳನ್ನು ನಿಲ್ಲಿಸುವಂತೆ ಆಜ್ಞೆ ಮಾಡಿದರು. ಸದ್ದಿಲ್ಲದೆ ಶ್ರೀರಂಗಪಟ್ಟಣವನ್ನು ಸೇರಿ ತಿರುಮಲರಾಯರ ಆಸ್ಥಾನವನ್ನು ಹೊಕ್ಕರು. ಇದನ್ನು ಕಂಡು ತಿರುಮಲರಾಯರು “ಇದೇನು ರಾಜ ಒಡೆಯರೇ ತಮ್ಮ ಪದವಿಗೆ ತಕ್ಕಂತೆ ಮೇಳತಾಳಗಳೊಡನೆ ಪ್ರವೇಶಮಾಡದೆ ಮೌನದಿಂದ ಬಂದಿರಿ?” ಎಂದು ಕೇಳಲು ರಾಜ ಒಡೆಯರು ಕ್ರೋಧದಿಂದ “ಮೇಳತಾಳಗಳನ್ನು ನಮಗಿಂತಲೂ ಕೀಳಾದವರೂ ಇಟ್ಟುಕೊಳ್ಳುವಾಗ ಅದರಿಂದ ನಮ್ಮ ಪದವಿಗೇನು ಗೌರವ?” ಎಂದು ನುಡಿದರು. ಇದನ್ನು ಕೇಳಿದ ಕಂಬಲ್ಲಿನ ಒಡೆಯನು ಕೋಪದಿಂದ ಕಣು ಕೆರಳಿಸಿದನು. ಅದನ್ನು ಕಂಡು ರಾಜ ಒಡೆಯರು “ಏಕೆ? ಒಡೆಯರೇ? ನಿಮಗಿಷ್ಟವಾದರೆ ಈಗಲೇ ಯಾರು ಶ್ರೇಷ್ಟರೆಂದು ಕಾಣುವ! ತಾಳಮೇಳಗಳು ಯಾರಿಗೆ ಸಲ್ಲತಕ್ಕದ್ದೆಂದು ನಿರ್ಣಯವಾಗಲಿ ” ಎಂದರು. ತಿರುಮಲರಾಯರು “ನೀವಿಬ್ಬರೂ ಹೀಗೆ ಕಲಹವಾಡಬಾರದು” ಎನ್ನಲು ಅವರೆದುರಿಗೇನೂ ಮಾಡಲಾರದೆ ಇಬ್ಬರೂ ರೋಷವನ್ನು ನುಂಗಿಕೊಂಡು ಸುಮ್ಮನಿದ್ದರು. ಮಾರನೆ ದಿವಸ ಬಂದಕೂಡಲೆ ರಾಜ ಒಡೆಯರು ಕೆಂಬಲ್ಲಿನ ಮೇಲೆ ಪಡೆಸಹಿತ ಹೊರಟು ಆ ಒಡೆಯರನ್ನು ಸೋಲಿಸಿ ಕೆಂಬಲ್ಲನ್ನು ವಶಪಡಿಸಿಕೊಂಡರು.
*****
[ವಿಲ್ಕ್ಸ್, ಸಂ. ೧. ಪುಟ ೨೪]

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...