Home / ಕಥೆ / ಸಣ್ಣ ಕಥೆ / ತಿರುಚನಾಪಳ್ಳಿಯ ಜಟ್ಟಿ

ತಿರುಚನಾಪಳ್ಳಿಯ ಜಟ್ಟಿ

ಪಟ್ಟವಾಗುವುದಕ್ಕೆ ಮುಂಚೆ ಕಂಠೀರವ ಒಡೆಯರು ತಮ್ಮ ತಂದೆಗಳಾದ ಚಾಮರಾಜ ಒಡೆಯರ ಬಳಿಯಲ್ಲಿ ತೆರಕಣಾಂಬಿಯಲ್ಲಿದ್ದರು. ಆ ಕಾಲದಲ್ಲಿ ರಾಮೇಶ್ವರದ ತೀರ್ಥಯಾತ್ರೆ ಮಾಡಿಕೊಂಡು ಬರುತ್ತಿದ್ದ ಒಬ್ಬ ಬ್ರಾಹ್ಮಣನು ಈ ಒಡೆಯರನ್ನು ಕಂಡು ಫಲ ಮಂತ್ರಾಕ್ಷತೆಯನ್ನು ಒಪ್ಪಿಸಿ “ತಿರುಚನಾಪಳ್ಳಿಯಲ್ಲಿ ಮಹಾ ಪರಾಕ್ರಮಶಾಲಿಯಾದ ಶೂರ ಜಟ್ಟಿಯೊಬ್ಬನಿರುವನು. ಆತನು ತನ್ನ ಸಮಾನ ಕಾಳಗವಾಡುವವರು ಯಾರೂ ಇಲ್ಲವೆಂದು ಹೆಮ್ಮೆ ಹೊಂದಿದ್ದಾನೆ. ತನ್ನ ದಟ್ಟಿ ಚಲ್ಲಣಗಳನ್ನು ಆ ಊರಿನ ಕೋಟೆ ಬಾಗಲಿಗೆ ಕಟ್ಟಿದರೆ ಸರ್ವಜನರೂ ತನ್ನ ಕಾಲಕೆಳಗೆ ಸಂಚಾರಮಾಡಿದಂತೆ ಆಗುವುದೆಂದು ಆ ಊರ ಅರಸನ ಅನುಮತಿಯನ್ನು ಪಡೆದು ದುರಹಂಕಾರಿಂದ ಅವುಗಳನ್ನು ಕಟ್ಟಿದ್ದಾನೆ. ಆ ಊರಿನ ಅರಸರು ಬ್ರಾಹ್ಮಣರು ಮಾತ್ರ ಮತ್ತೊಂದು ಬಾಗಲಿನಲ್ಲಿ ಸಂಚಾರಮಾಡುವ ಹಾಗೆಯೂ ಉಳಿದವರೆಲ್ಲರೂ ಆ ಬಾಗಲಿನಲ್ಲಿಯೇ ಸಂಚರಿಸುವಂತೆಯೂ ಕಟ್ಟುಮಾಡಿದ್ದಾರೆ” ಎಂದು ಹೇಳಿದನು. ಆ ಮಾತನ್ನು ಕೇಳಿ ಈ ಕಂಠೀರವಒಡೆಯರು ಜಟ್ಟಿಯ ವೇಷವನ್ನು ಧರಿಸಿ, ಯಾರೂ ಅರಿಯದಂತೆ ಆ ಬ್ರಾಹ್ಮಣನನ್ನು ಸಂಗಡ ಕರೆದುಕೊಂಡು ತಿರುಚನಾಪಳ್ಳಿಗೆ ಹೊರಟು, ಅಲ್ಲಿ ಕೋಟಿ ಬಾಗಲಿಗೆ ಕಟ್ಟಿದ್ದ ದಟ್ಟಿ ಚಲ್ಲಣಗಳನ್ನು ತಮ್ಮ ಆಳಿನ ಕೈಕೋಲಿನಿಂದ ತೆಗೆಸಿ, ಅನಂತರ ಕೋಟೆಯೊಳಕ್ಕೆ ಪ್ರವೇಶಮಾಡಿದರು.

ಈ ಸುದ್ದಿಯನ್ನು ಕೇಳಿದ ತಿರುಚನಾಪಳ್ಳಿಯ ನಾಯಕನು ಇವರನ್ನು ಕರೆಯಿಸಿ, ಸನ್ಮಾನಮಾಡಿ ಇರಿಸಿಕೊಂಡಿದ್ದು, ಒಂದು ದಿನ ಎಲ್ಲರನ್ನೂ ಕರೆಸಿ ಸಭೆಮಾಡಿ, ತಾನು ಉಪ್ಪರಿಗೆಯ ಮೇಲೆ ಕುಳಿತುಕೊಂಡು, ತನ್ನ ಜಟ್ಟಿಗೂ ವೇಷಧಾರಿಗಳಾಗಿ ಬಂದಿದ್ದ ಕಂಠೀರವ ಒಡೆಯರಿಗೂ ಕಾಳಗ ಬಿಡಿಸಿದನು. ಆಗ ವಜ್ರಮುಷ್ಠಿಗಳನ್ನು ಹಿಡಿದು ಇಬ್ಬರೂ ಕಾಳಗಮಾಡುವ ಸಮಯದಲ್ಲಿ ಈ ಒಡೆಯರು ಯಾರೂ ಅರಿಯದಂತೆ ಮೊದಲೇ ಸೊಂಟದಲ್ಲಿ ಕಟ್ಟಿದ್ದ ವಿಜಯನಾರಸಿಂಹವೆಂಬ ಕತ್ತಿಯಿಂದ ಆ ಜಟ್ಟಿಯ ಕೊರಳನ್ನು ಕ್ಷಣ ಮಾತ್ರದಲ್ಲಿ ಅತಿಚಮತ್ಕಾರದಿಂದ ಕತ್ತರಿಸಿಬಿಟ್ಟು, ನಿಂತಿದ್ದ ಆ ಹೆಣದ ಮುಂದೆ ಸುಮ್ಮನೆ ನಿಂತುಕೊಂಡರು. ಇದನ್ನು ತಿಳಿಯದೆ ಅಲ್ಲಿಯ ಅರಸು “ಏತಕ್ಕೆ ಸುಮ್ಮನೆ ನಿಂತಿದ್ದೀರಿ?” ಎಂದು ಕೇಳಲು ಒಡೆಯರು ತಮ್ಮ ಎಡಗೈಯಲ್ಲಿದ್ದ ಬೆತ್ತದಿಂದ ಎದುರಾಳಿನ ಮುಖವನ್ನು ತಿವಿದರು. ಜಟ್ಟಿಯ ತಲೆಯು ಕೆಳಕ್ಕೆ ಉರುಳಿ ಬಿತ್ತು. ಆಗ ಕಾಳೆಗವನ್ನು ನೋಡಲು ಬಂದಿದ್ದ ಜನರೆಲ್ಲರೂ ಇವರ ಸಾಧನೆಯನ್ನೂ ಹಸ್ತಲಾಘವ ಚಮತ್ಕಾರಗಳನ್ನೂ ಕಂಡು ಆಶ್ಚರ್ಯ ಪಟ್ಟು ಇವರನ್ನು ಕೊಂಡಾಡುತ್ತಿದ್ದರು. ಕಾಳೆಗ ಮುಗಿಯಿತು.

ಆಗ ತಿರುಚನಾಪಳ್ಳಿಯ ಅರಸನು ಇವರಿಗೆ ವಿಶೇಷವಾದ ಸನ್ಮಾನ ಬಹುಮಾನಗಳನ್ನು ಮಾಡಬೇಕೆಂದು ಯೋಚಿಸಿ ಉಪ್ಪರಿಗೆಯನ್ನು ಬಿಟ್ಟು ಇಳಿದನು. ಆತನ ಮುಖಭಾವದಿಂದಲೇ ಆತನ ಇಂಗಿತವನ್ನು ಕಂಠೀರವಒಡೆಯರು ಈ ಸಾಮಾನ್ಯ ಪಾಳೆಯ ಗಾರನಿಂದ ಜಟ್ಟಿಯಂತೆ ಸನ್ಮಾನಮಾಡಿಸಿಕೊಳ್ಳುವುದು ಯುಕ್ತವಲ್ಲವೆಂದೆಣಿಸಿ “ನಾಳೆ ಬರುತ್ತೇವೆ” ಎಂದು ಅರಸನಿಗೆ ಹೇಳಿ ಆ ರಾತ್ರಿಯೇ ಯಾರೂ ಅರಿಯದಂತೆ ಆ ಊರ ಕೋಟೆಬಾಗಲಿಗೆ “ಮಹೀಶರ ಸಂಸ್ಥಾನದಿಂದ ಯಾರೋ ಒ೦ದು ಇ೦ಥ ಪರಾ ಕ್ರಮವನ್ನು ತೋರಿಸಿದರು” ಎಂದು ಎಲ್ಲರಿಗೂ ತಿಳಿಯುವಂತಹ ಒಂದು ಚೀಟಿಯನ್ನು ಬರೆದು ಕಟ್ಟಿ, ಜತೆಯಲ್ಲಿ ಒಂದಿದ್ದ ಬ್ರಾಹ್ಮಣನೊಡನೆ ತೆರಕಣಾಂಬಿಯ ದಾರಿಯನ್ನು ಹಿಡಿದು ಮರುದಿವಸ ಆ ಸ್ಥಳವನ್ನು ಸೇರಿದರು.
*****
[ವಂಶರತ್ನಾಕರ ಪುಟ ೬೫-೬೬; ವಂಶಾವಳಿ ಸಂ. ೧, ಪುಟ ೬೬-೬೭ ವಿಲ್ಕ್ಸ್ ಸಂ. ೧, ಪುಟ೩೦]

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...