Home / ಕಥೆ / ಸಣ್ಣ ಕಥೆ / ಪಿರಿಯ ಪಟ್ಟಣದ ವೀರರಾಜ

ಪಿರಿಯ ಪಟ್ಟಣದ ವೀರರಾಜ

ಮೈಸೂರಿಗೆ ಪಶ್ಚಿಮಕ್ಕೆ ಕೊಡಗಿನ ಕಡೆಗೆ ಪಿರಿಯ ಪಟ್ಟಣ ವೆಂಬಲ್ಲಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಕೆಲವರು ದೊರೆಗಳು ಆಳುತ್ತಿದ್ದರು. ಪಿರಿಯರಾಜನೆಂಬಾತನೇ ಪೂರ್ವದಲ್ಲಿ ಮಣ್ಣಿನಿಂದಲೇ ಕಟ್ಟಿದ್ದ ಕೋಟೆಯನ್ನು ಕಲ್ಲಿನಿಂದ ಕಟ್ಟಿಸಿ ಪೇಟೆಯನ್ನು ಸ್ಥಾಪಿಸಿದನು. ಆ ಕಾರಣದಿಂದ ಅದಕ್ಕೆ ಪಿರಿಯಪಟ್ಟಣವೆಂದು ಹೆಸರು.

ಕಂಠೀರವ ಒಡೆಯರ ಕಾಲದಲ್ಲಿ ಅಲ್ಲಿ ವೀರರಾಜನೆಂಬಾತನು ಆಳುತ್ತಿದ್ದನು. ಆತನನ್ನು ಗೆಲ್ಲಲು ಮೊದಲು ದಳವಾಯಿಗಳು ಹೋಗಿದ್ದು, ಆತನು ಬಹಳವಾದ ತೊಂದರೆ ಕೊಡಲು ಹಿಂತಿರುಗಿ ಬಂದು ರಾಜರಿಗೆ ಅರಿಕೆ ಮಾಡಿದರು. ಕಂಠೀರವ ಒಡೆಯರೇ ಸ್ವಂತವಾಗಿ ಮುತ್ತಿಗೆಯನ್ನು ನಡೆಸಲು ಹೊರಟರು. ಛಲದಿಂದ ಮುತ್ತಿಗೆಯನ್ನು ಮುಂದುವರಿಸಿದರು. ವೀರರಾಜನು ಬಹಳ ಶೌರ್ಯದಿಂದ ಕಾದಿದರೂ ಶತ್ರುಗಳು ಲಗ್ಗೆ ಹತ್ತುವುದನ್ನು ನಿಲ್ಲಿಸಿಲಾಗದೆ ಹೋಯಿತು. ಆಗ ವೀರರಾಜನು ವೀರಸಂಕಲ್ಪವನ್ನು ಮಾಡಿ ಅರಮನೆಗೆ ಹೋಗಿ ತನ್ನ ಹೆಂಡಿರು ಮಕ್ಕಳನ್ನು ತನ್ನ ಕೈಯಿಂದಲೇ ಸಂಹರಿಸಿ ತರುವಾಯ ತಾನು ಹುಚ್ಚನಂತೆ ಕೋಟೆಯ ಹೊರವಳಯದಲ್ಲಿ ಸುಗ್ಗಿ ಕಾದಾಡುತ್ತ ಮಡಿದನು.

ಅನಂತರ ಕೋಟೆಯು ಕಂಠೀರವ ಒಡೆಯರಿಗೆ ಸುಲಭವಾಗಿ ಹಸ್ತಗತವಾಯಿತು.
*****
[ವಂಶರತ್ನಾಕರ ಪುಟ ೭೦; ವಂಶಾವಳಿ ಪುಟ ೭೧ ಹೊಸ ಗೆಜಟಿಯರ್‌ ಸಂ. ೫, ಪುಟ ೮೦೦]

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...