Home / ಕಥೆ / ಸಣ್ಣ ಕಥೆ / ಶ್ವೇತವರಾಹಸ್ವಾಮಿಯ ವಿಗ್ರಹ

ಶ್ವೇತವರಾಹಸ್ವಾಮಿಯ ವಿಗ್ರಹ

ಚಿಕ್ಕದೇವರಾಜ ಒಡೆಯರು ರಾಜ್ಯವನ್ನಾಳುತ್ತಿದ್ದಾಗ ತಂಜಾವೂರಿನಲ್ಲಿ ವೆಂಕೋಜಿಯ ಮಗ ಸಾಹುಜಿ ಎಂಬಾತನು ಆಳುತ್ತಿದ್ದನು. ಒಂದು ದಿನ ಈ ಸಾಹುಜಿಯು “ಈ ಚಿಕ್ಕದೇವರಾಜನದು ಎಷ್ಟು ಗರ್ವ! ಅವನ ಸಂಸ್ಥಾನದಲ್ಲಿ ಮೇಲುಕೋಟೆಯೊಂದು ವಿನಾ ಪ್ರಸಿದ್ದ ವಿಷ್ಣು ಕ್ಷೇತ್ರವನ್ನಾವುದೂ ಇಲ್ಲ. ನಮ್ಮ ದೇಶದಲ್ಲಾದರೋ ಶ್ರೀರಂಗ, ಶ್ರೀಮುಷ್ಟ, ಕುಂಭಕೋಣ, ಕಂಚಿ, ಮನ್ನಾರಗುಡಿ ಮುಂತಾದ ವಿಷ್ಟು ಕ್ಷೇತ್ರಗಳೇ ಅಲ್ಲದೆ ಚಿದಂಬರ, ಮಧ್ಯಾರ್ಜುನ, ಮಧುರೆ, ರಾಮೇಶ್ವರ ಮುಂತಾದ ಶಿವಕ್ಷೇತ್ರಗಳೂ ಇನ್ನೂ ಅನೇಕ ಪುಣ್ಯಸ್ಥಳಗಳೂ ಇವೆ. ಇವನದೇನು ಹೆಚ್ಚು-ಇವನ ಸಣ್ಣ ರಾಜ್ಯದ್ದೇನು ದೊಡ್ಡಸ್ತಿಕೆ?” ಎಂದು ಹಂಗಿಸಿ ಮಾತನಾಡಿದನು. ಈ ವರ್ತಮಾನವನ್ನು ಕೇಳಿ ಚಿಕ್ಕದೇವ ರಾಜಒಡೆಯರು ಖಿನ್ನತೆಯನ್ನೂ ಕೋಪವನ್ನೂ ಧರಿಸಿ ಯೋಚಿಸಿ, ಕಡೆಗೆ ಉಪಾಯದಿಂದ ಶ್ರೀಮುಷ್ಟದಲ್ಲಿದ್ದ ಶ್ವೇತವರಾಹಸ್ವಾಮಿಯ ಮೂರ್ತಿಯನ್ನು ತರಿಸಿಕೊಳ್ಳಬೇಕೆಂದು ನಿಶ್ಚಯಿಸಿದರು. ಕೂಡಲೆ ಜಾಣರೂ ಯುಕ್ತಿವಂತರೂ ಆಗಿದ್ದ ಜನರು ಕೆಲವರನ್ನು ಕರೆಯಿಸಿ, ಅವರಿಗೆ ದ್ರವ್ಯವನ್ನು ಕೊಟ್ಟು, ರಹಸ್ಯವಾಗಿ ಆ ವಿಗ್ರಹವನ್ನು ತರಲು ಕೊಟ್ಟು ಕಳುಹಿಸಿದರು. ಅವರು ಶ್ರೀಮುಷ್ಟಕ್ಕೆ ಹೋಗಿ ಅಲ್ಲಿಯ ಅರ್ಚಕ ಮುಂತಾದವರಿಗೆ ಹಣವನ್ನು ಕೊಟ್ಟು, ರಾತ್ರಿ ವೇಳೆಯಲ್ಲಿ ಯಾರೂ ಅರಿಯದಂತೆ ಆ ಶ್ವೇತವರಾಹಸ್ವಾಮಿಯ ಪ್ರತಿಮೆಯನ್ನು ಬಿಜಮಾಡಿಸಿಕೊಂಡು ಶ್ರೀರಂಗಪಟ್ಟಣವನ್ನು ಸೇರಿದರು. ಆಗ ದೊರೆಗಳು ಆನಂದಪಟ್ಟು ಅರಮನೆಯ ಬಲಗಡೆಯಲ್ಲಿ ವಿಚಿತ್ರವಾದ ಒಂದು ಗುಡಿಯನ್ನು ಕಟ್ಟಿಸಿ ಅಲ್ಲಿ ಅದನ್ನು ಪ್ರತಿಷ್ಠೆ ಮಾಡಿಸಿದರು.
*****
[ವಂಶರತ್ನಾಕರ ೧೧೦-೧೧೧, ಮತ್ತು ವಂಶಾವಳಿ ಪುಟ ೧೩೯-೧೪೦. ವಿಚಾರಕ್ಕೆ ಹೊಸ ಗೆಜಟಿಯರ್ ಸಂ. ೨, ಭಾಗ ೪ ಮತ್ತು ಡಾ|| ಯಸ್. ಕೃಷ್ಣ ಸ್ವಾಮಯ್ಯ೦ಗಾರ್ಯರು ಬರೆದ ಲೇಖನಗಳನ್ನು ನೋಡಬೇಕು.]

Tagged:

Leave a Reply

Your email address will not be published. Required fields are marked *

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲಿ ಮನಸ್ಸು, ದೇಹ ಎಲ್ಲವೂ ಕೊರಡಿನಂತಾ...