Home / ಕಥೆ / ಸಣ್ಣ ಕಥೆ / ರೈತರ ಬಂಡಾಯ

ರೈತರ ಬಂಡಾಯ

ಶ್ರೀರಂಗಪಟ್ಟಣವು ಕೈಸೇರಿದ ಮೇಲೆ ಒಡೆಯರ ರಾಜ್ಯವು ಕ್ರಮವಾಗಿ ಬಳೆಯಿತು; ರಾಜ್ಯವು ಹೆಚ್ಚಿದಂತೆ ವೆಚ್ಚವೂ ಹೆಚ್ಚಿತು. ರಾಜಒಡೆಯರು ಉಪಾಯದಿಂದ ನಿರ್ವಹಿಸುತ್ತಿದ್ದರು. ಕಂಠೀರವ ಒಡೆಯರು ಹಣದ ತೊಂದರೆ ಬಂದಾಗ ಒಂದು ಉಪಾಯವನ್ನು ಮಾಡಿದರು; ಧನಿಕರೆಂದು ಹೆಸರಾದವರನ್ನು ಹಿಡಿದು ಅವರಿಂದ ಹೆಚ್ಚಾದ ದ್ರವ್ಯವನ್ನು ತೆಗೆದುಕೊಳ್ಳುತ್ತಿದ್ದರು. ಅರಸರು ಬಲಿಷ್ಟರಾಗಿದ್ದುದರಿಂದ ಅವರ ವಿರೋಧವನ್ನು ಕಟ್ಟಿಕೊಳ್ಳುವುದಕ್ಕೆ ಅಂತಹವರು ಹೆದರುತ್ತಿದ್ದರು. ಚಿಕ್ಕದೇವರಾಜ ಒಡೆಯರಿಗೆ ರಾಜ-ಭಾರದಲ್ಲಿ ಬೊಕಸವನ್ನು ತುಂಬಬೇಕೆಂದು ಬಲವಾದ ಆಸೆಯಾಯಿತು.

ಕಾಲಕಳೆಯುತ್ತ ಈ ದೊರೆಗೆ ಹಣದ ಯೋಚನೆಯೇ ಬಹಳವಾಯಿತು. ರಾಜಾದಾಯ ಹೆಚ್ಚುವಂತೆ ಮೊದಲು ಈ ದೊರೆಗಳು ನೆಲಗಂದಾಯವನ್ನು ಹೆಚ್ಚಿಸಿದರು. ಆಗ ಕೆಲವು ರೈತರು “ಅರಮನೆಗೆ ಕೊಡತಕ್ಕ ಕಂದಾಯ, ವಾರದ ದವಸ ಮುಂತಾದುವನ್ನು ನಾವು ಕೊಡುವದಿಲ್ಲ. ಕಾಡಭೂಮಿಯನ್ನು ಬಸವಣ್ಣನು ಉಳುತ್ತಾನೆ. ದೇವೇಂದ್ರನು ಮಳೆಯನ್ನು ಕರೆಯುತ್ತಾನೆ, ನಾವು ಕಷ್ಟ ಪಟ್ಟು ಪೈರುಮಾಡಿ ನಿಮಗೇತಕ್ಕೆ ಕೊಡಬೇಕು” ಎನ್ನುತ್ತ ಕಂದಾಯವನ್ನು ಸಲ್ಲಿಸದೆ ದಂಗೆಯೇಳುವ ಯೋಚನೆಯಲ್ಲಿದ್ದರು. ಆಗ ಒಡೆಯರವರು ಮುಖ್ಯರಾದ ರೈತರನ್ನು ಹಿಡತರಿಸಿ ಶಿಕ್ಷೆಗೆ ಗುರಿ ಮಾಡಿಸಿದರು; ದಂಗೆಯು ಏಳುವುದಕ್ಕೆ ಮೊದಲೇ ಅಡಗಿ ಹೋಯಿತು.

ನೆಲಗಂದಾಯವೇ ಅಲ್ಲದೆ ಇತರ ಅನೇಕ ಮಾರ್ಗಗಳಲ್ಲಿ ಈ ದೊರೆಗಳು ಹಣವನ್ನು ಶೇಖರಮಾಡಿದರು. ನಿತ್ಯವೂ ೨೦೦೦ ವರಹಗಳು ನಾಮತೀರ್ಥದ ವೇಳೆಗೆ ಅರಮನೆಗೆ ಸಂದಾಯವಾಗತಕ್ಕದ್ದೆಂದು ಕಟ್ಟಳೆಮಾಡಿದ್ದರು; ಎಂದಾದರೂ ಹಣ ಬರುವುದು ಸಾವಕಾಶವಾದರೆ ದೊರೆಗಳು ರಾಮಾಯಣ ಪಾರಾಯಣದಲ್ಲಿಯೇ ಕಾಲ ಕಳೆದು ೨೦೦೦ ವರಹ ಬಂದ ಬಳಿಕ ಅವುಗಳನ್ನು ಖಾಸಾ ಬೊಕ್ಕಸಕ್ಕೆ ಕಳುಹಿಸಿ ಅನಂತರ ಆರೋಗಣೆಯನ್ನು ಒಪ್ಪಿಸಿಕೊಳ್ಳುತ್ತಿದ್ದರು.

ಇದರಿಂದ ಇವರಿಗೆ ನೆರೆನಾಡುಗಳಲ್ಲಿ ಲೋಭಿಗಳೆಂಬ ಹೆಸರು ಸಾಧಾರಣವಾಯಿತು. ಮಧುರೆಯ ರಾಜ್ಯದಲ್ಲಿ ಚಿಕ್ಕದೇವರಾಜ ಒಡೆಯರ ಹೆಸರನ್ನು ಹಂಗಿಸುವಂತಹ ಹಾಡುಗಳು ಜನರ ಬಾಯಿಗಳಲ್ಲಿ ಆಡುತ್ತಿದ್ದುವು; ಏಕೆಂದರೆ ಮಧುರೆಯಲ್ಲಿ ಅದೇ ಕಾಲದಲ್ಲಿ ಆಳುತ್ತಿದ್ದ ಮಂಗಮ್ಮನೆಂಬಾಕೆಯು ಅನೇಕ ಧರ್ಮ ಕಾರ್ಯಗಳನ್ನು ಮಾಡಿಸಿ ಔದಾರ್ಯಕ್ಕೆ ಪ್ರಸಿದ್ದಿಯಾಗಿದ್ದಳು. ಚಿಕ್ಕದೇವರಾಜ ಒಡೆಯರು ಹಣವನ್ನು ಸಂಪಾದನೆ ಮಾಡುವುದರಲ್ಲಿ ಇಂಗ್ಲೆಂಡಿನ ೭ನೆ ಹೆನ್ರಿಯಂತಿದ್ದರು. ಅವರಿಗೆ ಈ ರೀತಿ ಕೆಟ್ಟ ಹೆಸರು ಬಂದರೂ ಅವರು ಗಳಿಸಿದ ಹಣದಿಂದ ರಾಜ್ತವು ಭದ್ರವಾಯಿತು.
*****
[ವಂಶರತ್ನಾಕರ ಪುಟ ೧೨೧, ೧೨೪; ವಂಶಾವಳಿ ಪುಟ ೧೨೩, ೧೨೬; ಸತ್ಯನಾಥಯ್ಯರ್ರವರ ಮಧುರೆ ನಾಯಕರ ಚರಿತ್ರೆ ಮತ್ತು ಹೊಸ ಗೆಜಟಿಯರ್]

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...