Home / ಕಥೆ / ಸಣ್ಣ ಕಥೆ / ಸರ್ವಾಧಿಕಾರಿ ನಂಜರಾಜಯ್ಯ

ಸರ್ವಾಧಿಕಾರಿ ನಂಜರಾಜಯ್ಯ

೧೭೩೪ರಲ್ಲಿ ಚಾಮರಾಜ ಒಡೆಯರನ್ನು ಹಿಡಿದು ಕಬ್ಬಾಳ ದುರ್ಗಕ್ಕೆ ಕಳುಹಿಸಿ ರಾಜದ್ರೋಹವನ್ನು ಮಾಡಿದವರು ಇಬ್ಬರು ಜ್ಞಾತಿಗಳು-ದಳವಾಯಿ ದೇವರಾಜಯ್ಯ ಮತ್ತು ಸರ್ವಾಧಿಕಾರಿ ನಂಜರಾಜಯ್ಯ.

ಬಾಲಕರಾದ ಇಮ್ಮಡಿ ಕೃಷ್ಣರಾಜ ಒಡೆಯರನ್ನು ಪಟ್ಟದಲ್ಲಿ ಕೂರಿಸಿದ ಮೇಲೆ ಈರ್ವರೂ ಪ್ರಧಾನಿಯ ಕೆಲಸದಲ್ಲಿದ್ದ ಕನ್ನಂಬಾಡಿ ವೆಂಕಟಪತಯ್ಯನೆಂಬಾತನನ್ನು ಸೇರಿಸಿಕೊಂಡು ಆಡಳಿತವನ್ನು ಮೊದಲಿಟ್ಟರು. ಮೂವರೂ ಸೇರಿ ಅರಮನೆಯ ಆದಾಯದಲ್ಲಿ ಸಾಧ್ಯವಾದಷ್ಟು ಹಣವನ್ನು ತಾವೇ ಸ್ವಂತ ವೆಚ್ಚಕ್ಕಾಗಿ ಉಪಯೋಗಿಸಿಕೊಂಡುದಲ್ಲದೆ ತನ್ನ ಊಳಿಗದವರು ಲಂಚ ತಿಂದು ಶಿಫಾರಸುಮಾಡಿದವರಿಗೆ ಕೆಲಸಗಳನ್ನು ಮಾಡಿಸುತ್ತಲಿದ್ದರು. ಅಯೋಗ್ಯರಾದವರು ಅಧಿಕಾರಿಗಳಾದುದಲ್ಲದೆ ರಾಜ್ಯದ ಆದಾಯವು ಈ ಮೂವರ ಮತ್ತು ಅವರ ಅನುಚರರ ಪಾಲಾಗುತ್ತಿತ್ತು.

ಹೀಗೆ ೫-೬ ವರ್ಷಗಳು ನಡೆದವು. ವಂಚನೆಯಿಂದ ಮೂವರೂ ಹಣವನ್ನು ಸಂಪಾದಿಸಿದ ನಂಜರಾಜಯ್ಯನೂ ಐಶ್ವರ್ಯವನ್ನು ಸೇಕರಿಸಿಕೊಂಡಿದ್ದನು. ಆತನಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅಂತ್ಯಕಾಲವು ಸಮೀಪವಾಯಿತು. ಆಗ ನಂಜರಾಜಯ್ಯನು ತಾನು ಮಾಡಿದ ನೀಚಕಾರ್ಯಕ್ಕೆ ಮನಸ್ಸಿನಲ್ಲಿ ನೊಂದುಕೊಂಡನು. ತಾನು ಗಳಿಸಿಟ್ಟ ದ್ರವ್ಯವು ರಾಜರದೇ ಆಗಿದ್ದುದರಿಂದ ತನ್ನ ಕುಟುಂಬ ಚಂದಾಯಮ್ಮಣ್ಣಿಯ ಜೀವನಕ್ಕೆ ಮಾತ್ರ ಸ್ವಲ್ಪ ಉಳಿಸಿಕೊಂಡು ಉಳಿದ ೨ ಲಕ್ಷ ವರಹಗಳಷ್ಟು ಧನವನ್ನು ದೊರೆಗಳಿಗೆ ತಂದೊಪ್ಪಿಸಿದನು. ಮಾತುಶ್ರೀಯವರನ್ನು ಕಂಡು ಯಥಾರ್ಥವನ್ನು ತಿಳಿಸಿ ದುಷ್ಟರ ವಿಷಯವಾಗಿ ಎಚ್ಚರಿಕೆ ಕೊಟ್ಟು ಪಶ್ಚಾತ್ತಾಪಡುತ್ತ ಈತನು ೧೭೩೯ರಲ್ಲಿ ಶ್ರೀರಂಗಪಟ್ಟಣದಲ್ಲಿಯೇ ಕಾಲವಾದನು. ಸಾಯುವ ಕಾಲದಲ್ಲಿ “ನನ್ನ ತರುವಾಯು ನನ್ನ ಪದವಿಗೆ ದಳವಾಯಿ ದೇವರಾಜಯ್ಯನ ತಮ್ಮ ಕರಾಚೂರಿ ನಂಜರಾಜನು ಬಂದರೆ ತೊಂದರೆಯೇ ಸಂಭವಿಸುವುದು” ಎಂದು ಎಚ್ಚರಿಸಿದ್ದನು. ಆದರೂ ಸರ್ವಾಧಿಕಾರಿತನವು ಆ ಕರಾಚರಿ ನಂಜರಾಜಯ್ಯನಿಗೇ ಪ್ರಾಪ್ತವಾಯಿತು.
*****
[ವಂಶರತ್ನಾಕರ ಪುಟ ೧೬೫ ; ವಂಶಾವಳಿ-ಪುಟ ೧೭೫-೧೭೬; ಮತ್ತು ವಿಲ್ಕ್ಸ್, ಮುಂದಿನ ಕಥೆಗಳಲ್ಲಿ ವಿಲ್ಕ್ಸ್ ಗ್ರಂಥವನ್ನೇ ಹೆಚ್ಚಾಗಿ ಅವಲಂಬಿಸಿದೆ]

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...