Home / ಕವನ / ಕವಿತೆ / ನನ್ನ ಜನಗಳು

ನನ್ನ ಜನಗಳು

ಕೈಯಲ್ಲಿ ಕೋವಿ ಹಿಡಿದವರು
ನನ್ನ ಜನಗಳಲ್ಲ ಸ್ವಾಮಿ
ಭತ್ತದ ಗದ್ದೆಯಲಿ ನಡು ಬಗ್ಗಿಸಿ
ಕುಡುಗೋಲು ಹಿಡಿದವರು ಅವರು.
ನನ್ನವರ ಎದೆಯಲ್ಲಿ ಕಾವ್ಯವಿದೆ
ಎತ್ತಿನ ಗೆಜ್ಜೆನಾದ, ಹಂತಿ ಹಾಡುಗಳಿವೆ
ನೋವು ಮರೆತು ಹಾಡುತ್ತಾರೆ.
ಸಂಘರ್‍ಷದ ಬದುಕು ಬದುಕುತ್ತಾರೆ.
ಮನದಲ್ಲಿ ಛಲ ಹೊತ್ತ ನನ್ನವರ
ಎದೆ ತುಂಬ ಗಾಯಗಳು.
ಹರಿದು ಸೋರಿದ ಕೀವು ರಕ್ತ
ಹಾಡಿನ ಹೊನಲಾಗಿ ಹರಿಯುವವು.
ದೀಪವಿಲ್ಲದ ಕತ್ತಲ-ಹಳ್ಳಿಗಳಲ್ಲಿ
ಅಜ್ಞಾತ ಬದುಕು ಬದುಕುತ್ತಿರುವವರು
ಕೊಡ ನೀರಿಗಾಗಿ ಮೈಲು ನಡೆದವರು.
ಅವರು ಆತ್ಮವಿಶ್ವಾಸದ ಪರ್‍ವತಗಳು ಸ್ವಾಮಿ
ನನ್ನ ಜನಗಳು ಕನಸುಗಾರರು
ಪ್ರಾಮಾಣಿಕ ಬದುಕು ಬದುಕುತ್ತಿರುವವರು
ಸರಳತೆಯ ಜೀವನ ಸಾಗಿಸುತ್ತಿರುವವರು.
ನವಿಲ ಗರಿಯಂಥ ಹುಲ್ಲ ಗರಿಕೆಗಳ
ಹೊತ್ತ ಗುಡಿಸಲುಗಳ ಹೊದಿಕೆಗಳ ಕೆಳಗೆ
ಸಂತರ ನಡೆನುಡಿಗಳು ಅವರದು ಸ್ವಾಮಿ,
ಕನಸಿನ ಲೋಕಕ್ಕೆ ಅವರು
ಮೆಟ್ಟಿಲುಗಳ ಕಟ್ಟಿದವರು
ಕನಸು ಕಮರಿದರೂ,
ಸ್ವಾಭಿಮಾನದ ಉನ್ನತ ಬದುಕು
ಪ್ರೀತಿಸಿದವರು.
ನನ್ನವರ ಬೇಡಿಕೆಗಳು ಸೀಮಿತ
ಮಣ್ಣ ಹಣತೆಯ ಆಯುಷ್ಯ ಅವರದು
ಆದರೂ ಬೆಳಕು ಅನಂತಕಾಲ ಸ್ವಾಮಿ.
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...