Home / ಕವನ / ಕವಿತೆ / ನನ್ನ ಜನಗಳು

ನನ್ನ ಜನಗಳು

ಕೈಯಲ್ಲಿ ಕೋವಿ ಹಿಡಿದವರು
ನನ್ನ ಜನಗಳಲ್ಲ ಸ್ವಾಮಿ
ಭತ್ತದ ಗದ್ದೆಯಲಿ ನಡು ಬಗ್ಗಿಸಿ
ಕುಡುಗೋಲು ಹಿಡಿದವರು ಅವರು.
ನನ್ನವರ ಎದೆಯಲ್ಲಿ ಕಾವ್ಯವಿದೆ
ಎತ್ತಿನ ಗೆಜ್ಜೆನಾದ, ಹಂತಿ ಹಾಡುಗಳಿವೆ
ನೋವು ಮರೆತು ಹಾಡುತ್ತಾರೆ.
ಸಂಘರ್‍ಷದ ಬದುಕು ಬದುಕುತ್ತಾರೆ.
ಮನದಲ್ಲಿ ಛಲ ಹೊತ್ತ ನನ್ನವರ
ಎದೆ ತುಂಬ ಗಾಯಗಳು.
ಹರಿದು ಸೋರಿದ ಕೀವು ರಕ್ತ
ಹಾಡಿನ ಹೊನಲಾಗಿ ಹರಿಯುವವು.
ದೀಪವಿಲ್ಲದ ಕತ್ತಲ-ಹಳ್ಳಿಗಳಲ್ಲಿ
ಅಜ್ಞಾತ ಬದುಕು ಬದುಕುತ್ತಿರುವವರು
ಕೊಡ ನೀರಿಗಾಗಿ ಮೈಲು ನಡೆದವರು.
ಅವರು ಆತ್ಮವಿಶ್ವಾಸದ ಪರ್‍ವತಗಳು ಸ್ವಾಮಿ
ನನ್ನ ಜನಗಳು ಕನಸುಗಾರರು
ಪ್ರಾಮಾಣಿಕ ಬದುಕು ಬದುಕುತ್ತಿರುವವರು
ಸರಳತೆಯ ಜೀವನ ಸಾಗಿಸುತ್ತಿರುವವರು.
ನವಿಲ ಗರಿಯಂಥ ಹುಲ್ಲ ಗರಿಕೆಗಳ
ಹೊತ್ತ ಗುಡಿಸಲುಗಳ ಹೊದಿಕೆಗಳ ಕೆಳಗೆ
ಸಂತರ ನಡೆನುಡಿಗಳು ಅವರದು ಸ್ವಾಮಿ,
ಕನಸಿನ ಲೋಕಕ್ಕೆ ಅವರು
ಮೆಟ್ಟಿಲುಗಳ ಕಟ್ಟಿದವರು
ಕನಸು ಕಮರಿದರೂ,
ಸ್ವಾಭಿಮಾನದ ಉನ್ನತ ಬದುಕು
ಪ್ರೀತಿಸಿದವರು.
ನನ್ನವರ ಬೇಡಿಕೆಗಳು ಸೀಮಿತ
ಮಣ್ಣ ಹಣತೆಯ ಆಯುಷ್ಯ ಅವರದು
ಆದರೂ ಬೆಳಕು ಅನಂತಕಾಲ ಸ್ವಾಮಿ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...