Home / ಕವನ / ಕವಿತೆ / ಪ್ರಾರ್‍ಥನೆ

ಪ್ರಾರ್‍ಥನೆ

ನಾನು ಯಾವ ನೆಲದಲ್ಲಾದರೂ ನಡೆದಾಡಲಿ
ನನ್ನ ಮಾತೃಭೂಮಿಯ ಮಣ್ಣವಾಸನೆಯೇ ಸೂಸಿಬರಲಿ
ನಾನು ಕಾಶ್ಮೀರ ಕಣಿವೆಯ ಸುವಾಸನೆ ಮೂಸಿರುವೆನು.
ದ್ವೇಷದ ವಿಷಗಾಳಿ ವರ್‍ಜವಾಗಿದೆ ನನಗೆ
ಸ್ಫೋಟಕ ಮದ್ದಿನ ಘಮಟು ವಾಸನೆ ಒಗ್ಗಲಾರದು
ನನಗೆ ಹಿಮಚ್ಛಾದಿತ ಹಿಮಾಲಯವೇ ಅಚ್ಚು ಮೆಚ್ಚು
ಆದರೂ ಅವರೇಕೆ ಹೇಳುತ್ತಿದ್ದಾರೆ?
ನನಗೆ ರಾಸ ಪರ್‍ವತವೇ ಪ್ರಿಯವೆಂದು.

ನಾನು ಹಜ್ ಯಾತ್ರೆ ಕೈಕೊಂಡರೂ
ಮದೀನಾದ ನೆಲದಲ್ಲಿ ಪ್ರಾರ್‍ಥಿಸಿದರೂ
ಭಾರತದ ಏಳೆಗಾಗಿಯೇ ಪ್ರಾರ್‍ಥಿಸುವೆನು.
ನನ್ನ ದೇಶದ ಸುಖ ಸಮೃದ್ಧಿಯನೇ ಬಯಸುವೆನು
ನನಗೆ ಆಡಲು ಮಡಿಲು ನೀಡಿದ
ನೀರು, ಆಹಾರ, ಗಾಳಿ ಕೊಟ್ಟು ಪೋಷಿಸಿದ
ಮಾತೃ ಭೂಮಿಯ ಶ್ರೇಯಸ್ಸು ಬಯಸುವೆ.
ನನ್ನ ದೇಹದ ಹನಿ ಹನಿ ರಕ್ತದಲ್ಲೂ
ಭಾರತದ ಹೆಸರೇ ಪ್ರತಿಧ್ವನಿಸುತ್ತಿರುತ್ತದೆ.
ಆದರೂ ಅವರೇಕೆ ಹೇಳುತ್ತಿದ್ದಾರೆ
ನಾನು ಗಡಿಯಾಚೆಯವಳೆಂದು?.

ನನ್ನ ದೇಶದಲ್ಲಿ ನಿರಂತರ ಹರಿಯುತ್ತಿವೆ
ಗಂಗೆ, ಯಮುನೆ, ಕೃಷ್ಣ, ಕಾವೇರಿಯರು
ಪ್ರೀತಿಯ ತಾಜಮಹಲು ನನ್ನ ದೇಶದಲ್ಲಿಯೇ ಇದೆ.
ಚಾರ್‌ಮಿನಾರ್, ಕುತುಬ್‌ ಮೀನಾರ್‌ಗಳು.
ಬದುಕಿರುವೆನು ನಾನು ಕಾಶೀ, ಮಥುರಾ
ಅಜ್ಮೀರ್‌ಬಾಬಾನ ಸೌಹಾರ್‍ದ ನೆಲೆಗಳಲ್ಲಿ
ಸೌಹಾರ್‍ದ ತಾಣ ಸುಂದರ ಹೂಬನ
ಪೋಷಿಸಿದವಳು ನಾನು.
ಆದರೂ ಅವರೇಕೆ ಹೇಳುತ್ತಿದ್ದಾರೆ
ನಾನು ಕೋಮಲ ಹೂಗಳ ದ್ವೇಷಿಯೆಂದು?

ನಾನು ಲೋಕದ ಯಾವ
ಮೂಲೆಯಲ್ಲಾದರೂ ಕೊನೆಯುಸಿರೆಳೆಯಲಿ
ದೂರದಿಂದಲಾದರೂ ನನ್ನ ಭಾರತದ
ಗಡಿ ಕಾಣುತ್ತಿರಲಿ ಎಂದು ಬಯಸುವೆನು.
ಯಾವ ದೇಶದ ನೀರೇ ಕುಡಿಯಲಿ
ಪವಿತ್ರ ಝಂಝಂ ಸೇವಿಸಿದರೂ ಸಹ
ಅದರಲ್ಲಿ ಗಂಗೆಯ ಸ್ವಾದ ಹುಡುಕುವೆನು.
ಪ್ರಾರ್‍ಥನೆಗೆ ಕೈ ಎತ್ತಿದ ಪ್ರತಿ ಬಾರಿಯೂ
ನನ್ನ ದೇಶದ ಎಳ್ಗೆಯನೇ ಬಯಸುವೆನು.
ಆದರೂ ಅವರೇಕೆ ಹೇಳುತ್ತಿದ್ದಾರೆ
ನಿನ್ನ ಬದ್ಧತೆಯನ್ನು ಸಾಬೀತು ಪಡಿಸು ಎಂದು?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...