Home / ಕವನ / ಕವಿತೆ / ಎರಡು ಚಿತ್ರ

ಎರಡು ಚಿತ್ರ

ಹುಡುಗ ಹಾಡುತಿತ್ತು, ಮತ್ತೆ ಆಡುತಿತ್ತು,
ನಡುನಡುವೆ ಓಡುತಿತ್ತು;
ಹುಡಗ ಕೆಲೆಯುತಿತ್ತು, ಹಾಗೆ ಕುಣಿಯುತಿತ್ತು,
ಏನೋ ತೊದಲಾಡುತಿತ್ತು.
ಏನು ತಿಳಿಯತಿತ್ತೊ! ಏನು ಹೊಳೆಯುತಿತ್ತೊ!
ಕೈಹೊಯ್ದು ನಗುತಲಿತ್ತು;
ಏನು ನಿಟ್ಟಿಸುತಿತ್ತೊ! ಏನು ದಿಟ್ಟಿಸುತಿತ್ತೊ!
ಹಿಗ್ಗೊಂದು ಮಿಗುತಲಿತ್ತು.
ಒಮ್ಮೊಮ್ಮೆ ಬಂದದ್ದೆ ‘ಅಪ್ಪ ಅಪ್ಪಾ’ ಎಂದು
ತೊಡೆಗಳನ್ನಪ್ಪುತಿತ್ತು;
ಒಮ್ಮೆ ಮುನಿದಂತೆ ದುರುದುರನೆ ನೋಡುತ್ತಿತ್ತು,
ಎಲ್ಲವೂ ಒಪ್ಪುತಿತ್ತು.
ಮತ್ತೆ ಅಳುತಲು ಇತ್ತು, ಹುಚ್ಚುಚ್ಚು ನಗುತ್ತಿತ್ತು,
ಯಾಕೇನೊ ಚೀರುತಿತ್ತು;
ಮತ್ತೇನು ಮುಗುದೇನು? ಏನು ಮಾಡಿದ್ದೆಲ್ಲ
ಚೆಂದವೇ ತೋರುತಿತ್ತು.
* * * *

ಹಿರಿಯನಡ್ಡಾಡುತಿಹ, ಮನದೆಡೆಯಲಾಡುತಿಹ,
ಎದೆ ಹೊಕ್ಕು ನೋಡುತಿಹನು;
ಹಿರಿಯ ತೀರದ ದುಃಖವನ್ನು ತಾ ತಿರುತಿರುಗಿ
ಮನದೊಳಗೆ ತೋಡುತಿಹನು.
ತುದಿಸಿಗದ ತೊಡಕನ್ನು ಬಿಡಿಸಲೆಳಸುವನೊಮ್ಮೆ
ಬಿಡಿಸದೆಯೆ ಬಿಡುತಲಿಹನು;
ಎದೆಯ ಬೀದಿಯ ಬಳಸಿ, ಮನದ ಮಾರ್‍ಗವ ತುಳಿದು,
ಹಳೆ ಹಾದಿ ಹಿಡಿಯುತಿಹನು.
ಮುಳ್ಳಹಾಸಿಗೆ ಮಂಚ, ಹೊದೆಯೆ ಚಿಂತೆಯ ಕಂತೆ,
ಮೇಲೆ ಮಳೆಗರೆವ ಮುಗಿಲು;
ದಳ್ಳುರಿಯನಿಟ್ಟುಸಿರು ಬೀಸುವದು ಒಳಗೆಲ್ಲ,
ಉಸಿರಿಲ್ಲ ಒಮ್ಮೆ ನಗಲು.
* * * *

ಕರ್‍ಮಲೇಪವು ಇಲ್ಲ, ಬಗೆಯ ತಾಪವು ಇಲ್ಲ,
ಅಂದು ಒಂದು ನೀರ ಹೂವು;
ಮರ್‍ಮಭಿನ್ನರು ಮತ್ತೆ ಹೃದಯಭಿನ್ನರು ನಾವು
ಬುಡದೊಳಿಹ ಕೆಸರಠಾವು.
ಆಗಿ ಹುಣ್ಣಿಮೆಯ ಹಗಲು, ಗೌರಿಹುಣ್ಣಿಮೆ ಇರುಳು,
ಹೀಗಿಹುದು ಅದರ ದಿನವು;
ಚಿಗರಿಯಂದದಲಿಹುದು ದಿಂಕಿಡುವ ಅದರ ಮನ
ಕಿರಿಗರಿಯ ಹಾಗೆ ತನವು.
ಇಲ್ಲ ದುಃಖದ ಮಳೆಯು, ಇಲ್ಲ ಭೀತಿಯ ಚಳಿಯು
ಚಿಂತೆ ಸಂತಾಪವಿಲ್ಲ;
ಎಲ್ಲ ಸೊಗಸಿನ ಬೆಳೆಯು, ಎಲ್ಲ ಸೊಬಗಿನ ಕಳೆಯು,
ನಲಿವೊಲವು ಚೆಲವು ಎಲ್ಲ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...