ಕಾರಣ ಯಾರಿಗೆ ಗೊತ್ತು ?

ಮದುವೆಯ ಹೆಣ್ಣು; ನಾಳೆಯೆ ಮದುವೆ; ಇವಳೇಕೆ
ಮೂಲೆಯ ಹಿಡಿದು ಮಲಗಿಹಳು?
ಬಿಳಿವಲ್ಲಿ ಬೆನ್ನ ಹತ್ತಿರವಿಹುದು; ಹೂದಂಡೆ
ಹೆರೆಳಲ್ಲಿ ; ಮಾತಿಲ್ಲ; ಉಸಿರು.

ಥಳ ಥಳಿಸುನ ಕಣ್ಣ ಮುಚ್ಚಿ, ಕೆದರಿದ ಕುರುಳ
ಹತ್ತಾರು ದಿಕ್ಕಿಗೆ ಹರಿಸಿ,
ಹೊದಿಕೆಯ ಹೊರಗೆ ಮುಂಗೈ ಬೀಸಿ, ನಡುಬೆರಳ
ಉಂಗುರದ ನಡುಹರಳ ಜ್ವಲಿಸಿ,

ಬೆನ್ನ ಸೆರಗಿನ ಮೇಲೆ ಅರಿಯದೆ ತಂಗಿದ
ಜರತಾರಿ ಹೂವನು ಮರೆತು,
ತಲೆಯಿಟ್ಟ ತುಂಬುದಿಂಬಿನ ಮೇಲೆ ಹಣೆಗಿಟ್ಟ
ಕುಂಕುಮದ ಒತ್ತನು ಕುರಿತು,

ಏನೇನೊ ಮಾತು- ದೇವರು ಬಲ್ಲ !- ಮಾತೆಲ್ಲ
ಹೊಂದದೆ ಒಡೆದ ಕಿರುಮುತ್ತು;
ಮನಸಿನ ಮೇಲುಮಾಳಿಗೆಯಲ್ಲಿ ಬೆಳೆಕಿಲ್ಲ.
ಕಾರಣ ಯಾರಿಗೆ ಗೊತ್ತು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉಭಯ ಸಂಕಟ
Next post ಸಣ್ಣ ಸಂಗತಿ

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ನೆಮ್ಮದಿ

    ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್‍ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…