ಕಾರಣ ಯಾರಿಗೆ ಗೊತ್ತು ?

ಮದುವೆಯ ಹೆಣ್ಣು; ನಾಳೆಯೆ ಮದುವೆ; ಇವಳೇಕೆ
ಮೂಲೆಯ ಹಿಡಿದು ಮಲಗಿಹಳು?
ಬಿಳಿವಲ್ಲಿ ಬೆನ್ನ ಹತ್ತಿರವಿಹುದು; ಹೂದಂಡೆ
ಹೆರೆಳಲ್ಲಿ ; ಮಾತಿಲ್ಲ; ಉಸಿರು.

ಥಳ ಥಳಿಸುನ ಕಣ್ಣ ಮುಚ್ಚಿ, ಕೆದರಿದ ಕುರುಳ
ಹತ್ತಾರು ದಿಕ್ಕಿಗೆ ಹರಿಸಿ,
ಹೊದಿಕೆಯ ಹೊರಗೆ ಮುಂಗೈ ಬೀಸಿ, ನಡುಬೆರಳ
ಉಂಗುರದ ನಡುಹರಳ ಜ್ವಲಿಸಿ,

ಬೆನ್ನ ಸೆರಗಿನ ಮೇಲೆ ಅರಿಯದೆ ತಂಗಿದ
ಜರತಾರಿ ಹೂವನು ಮರೆತು,
ತಲೆಯಿಟ್ಟ ತುಂಬುದಿಂಬಿನ ಮೇಲೆ ಹಣೆಗಿಟ್ಟ
ಕುಂಕುಮದ ಒತ್ತನು ಕುರಿತು,

ಏನೇನೊ ಮಾತು- ದೇವರು ಬಲ್ಲ !- ಮಾತೆಲ್ಲ
ಹೊಂದದೆ ಒಡೆದ ಕಿರುಮುತ್ತು;
ಮನಸಿನ ಮೇಲುಮಾಳಿಗೆಯಲ್ಲಿ ಬೆಳೆಕಿಲ್ಲ.
ಕಾರಣ ಯಾರಿಗೆ ಗೊತ್ತು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉಭಯ ಸಂಕಟ
Next post ಸಣ್ಣ ಸಂಗತಿ

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…