ಚಿಂತೆಗೆ ಕಣ್ಣತೆತ್ತವಳೆ!!

ಚಿಂತೆಗೆ ಕಣ್ಣ ತೆತ್ತವಳೆ,  ಚಿಲುಕದಮೇಲೆ
ಮುಂಗೈಯನೂರಿ ನಿಂತವಳೆ,
ಬಿಂದಿಗೆ ಹೊರದೆ ಸೋತವಳೆ, ಸಣ್ಣಗೆ ಒಳಗೆ
ಚಿಂತೆ, ಏತರ ಚಿಂತೆ, ನಿನಗೆ?

ಚಿಂತೆಗೆ ಕಣ್ಣ ತೆತ್ತವಳೆ, ತುರುಬಿನ ತುದಿಗೆ
ಒಂದೆ ಹೂವನು ಮುಡಿದವಳೆ,
ಒಂದೊಂದೆ ಬಳೆಯ ತೊಟ್ಟವಳೆ, ಈ ಮನೆಯೊಳಗೆ
ಚಿಂತೆ, ಏತರ ಚಿಂತೆ, ನಿನಗೆ?

ಚಿಂತೆಗೆ ಕಣ್ಣ ತೆತ್ತವಳೆ, ಹತ್ತಿದ ದೀಪ
ಮಂಕಾಗಿ ತೋರಿ ನಿಂತವಳೆ,
ಸಂತೆಗೆ ಹೋಗಿ ಬರಿಗೈಲೆ ಬಂದೆಯ, ಪಾಪ !-
ಚಿಂತೆ, ಏತರ ಚಿಂತೆ, ನಿನಗೆ?

ನಿನಗಾವ ಚಿಂತೆ ಚಿಕ್ಕವಳೆ, ಚಿನ್ನದ ಬಳೆಗೆ
ಒಪ್ಪುವ ತುಂಬುಗೈಯವಳೆ !
ಗಾಳಿಯ ಸುಳಿಗೆ ಹೂವಾದ ಮಲ್ಲಿಗೆಯರಳೆ,
ಬಂಡಿಯ ದನಿಗೆ ಬೆಚ್ಚುವಳೆ !-

ನಿನಗಾವ ಚಿಂತೆ, ಚಿಕ್ಕವಳೆ, ತುಂಬಿದ ಮನೆಗೆ
ಘನವಾಗಿ ಬಂದ ಗುಣದವಳೆ,
ನುಡಿದೊಂದು ಮಾತು ಸಾಕೆನುವ ಇನಿದನಿಯವಳೆ,
ತಲೆತಗ್ಗಿ ನಾಚಿ ನಡೆಯುವಳೆ?

ಮಳೆ ಬಿದ್ದು, ಕೆರೆ ತುಂಬಿ ನೀರು! ಮಿಂಚುವ ನೀರು,
ಬರಿ ನೀರೆ? ಥೇಟು ಪನ್ನೀರು !
ಅತ್ತಿತ್ತ ನೆಲ ಹೂವ ತೇರು; ಅಲ್ಲಿಗೆ ಬಾನು
ಇದ್ದೀತು ಒಂದೆರಡು ಮಾರು !

ಮನೆಗಿಂತ ಬಾನು ಎತ್ತರವೆ? ಆದರೆ ಏನು?
ಬಾನಿಗೆ ತಾರೆ ಹತ್ತಿರವೆ?
ಏನಂಥ ಬೆಟ್ಟ ಹೊತ್ತಿರುವೆ? ಸುಮ್ಮನೆ ನೀನು
ಸೊಂಪಾಗಿ ನಿಲುವುದುತ್ತರವೆ ?

ತೋಟದ ಮೇಲೆಲ್ಲ ತೆಂಗು; ತೆಂಗಿನ ಮೇಲೆ
ತೆರೆದ ಹೊಂಬಾಳೆಯ ರಂಗು!
ಗೊನೆ ಬಿಟ್ಟ ರಸಬಾಳೆ ಕಂದು; ಹಣ್ಣಿನ ಮೇಲೆ
ಹುದುಗಿತ್ತು ಗಿಣಿಯೊಂದು ಬಂದು.

ವೀಣೆಗೆ ತಂತಿಯ ಚೆಂತೆ; ತಂತಿಗೆ ತನ್ನ
ಹುಡುಕುವ ಬೆರಳಿನ ಚಿಂತೆ ;
ಬೆರಳಿಗೆ ಉಂಗುರದ ಚಿಂತೆ ; ಚಿಂತೆಗೆ ತನ್ನ
ಮಡಿಲ ತುಂಬುವುದೊಂದೆ ಚಿಂತೆ.

ಇಲ್ಲದ ಸಲ್ಲದ ಚಿಂತೆ ; ಅದು ಬಂದಂತೆ
ಹೋದೀತು ಇರಲೊಂದು ಗಳಿಗೆ !
ಸಂಶಯ ನನಗಿಲ್ಲ, ಚೆಲುವೆ; ಚೆಲುವಿಗೆ ಚಿಂತೆ;
ಚಿಂತೆಯಿಲ್ಲದ ಚೆಲುವು ಚೆಲುವೆ ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಾವ ಜೀವ
Next post ಬಂಡಾಯ

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

cheap jordans|wholesale air max|wholesale jordans|wholesale jewelry|wholesale jerseys