Home / ಕವನ / ಕವಿತೆ / ನೀರಿಗೆ ಬಿದ್ದ ಹೆಣ್ಣು

ನೀರಿಗೆ ಬಿದ್ದ ಹೆಣ್ಣು

ನೀರಿಗೆ ಬಿದ್ದ ಹೆಣ್ಣು ತಾವರೆಯ ತೆನೆಯಾಗಿ
ಹೂವಾಗಲಿಲ್ಲ ಕೆಂಪಾಗಿ.
ಸಾವಿನಲಿ ಶಾಂತಿ ಉರುಳಿತ್ತು ತಲೆಕೆಳಗಾಗಿ
ಆ ಎಲ್ಲ ನೋವು ತಂಪಾಗಿ.

ನೀರಿಗೆ ಬಿದ್ದ ಹೆಣ್ಣು ಒಂದೇ ಮುಳುಗು ಮುಳುಗಿ
ಕಂಡಿತ್ತು ಸಾವಿನ ಯುಗಾದಿ.
ಸುತ್ತೆಲ್ಲ ಕಿತ್ತು ಬಿದ್ದಿತ್ತು ಆಸೆಯ ಜೋಲಿ
ತೆರೆದಿತ್ತು ಹುಡಿಮಣ್ಣು ಹಾದಿ.

ನೀರಿಗೆ ಬಿದ್ದ ಹೆಣ್ಣು ಯಾರಿಗೂ ಹೇಳದೆಯೆ
ಆಗಿತ್ತು ಕೆರೆಗೆ ಆಹುತಿ.
ಹಾಲ ಕಾಣದ ಬದುಕು ಕುಡಿದಿತ್ತು ಕೆರೆಯನೆ;
ಅಲ್ಲಿತ್ತು ಅದರ ಸದ್ಗತಿ.

ಗಂಡ ಬಂದನು ಕಡೆಗೆ ನಡೆಬಂದ ಕಂಬದೊಲು;
ಹತ್ತು ಜನ ಅಲ್ಲೆ ಒದಗಿದರು.
ಬೆಂಕಿ ಹೆಣವನು ನುಂಗಿ ಬೆಂಬೂದಿಯಾಗಿರಲು,
ಉಳಿದವರು ಊರ ಸೇರಿದರು.

ನೀರು ಮುಗಿಸಿದ ಕಥೆಗೆ ಬೆಂಕಿ ಮಂಗಳ ಹಾಡಿ
ನಡೆದಿತ್ತು ದೈವ ಸಂಕಲ್ಪ.
ಇಂಥ ಬಾಳಿಗೆ ಸಾವೆ ನಂದನದ ಕೆರೆ-ಕೋಡಿ;
ಮಸಣದಲಿ ಮಾತ್ರ ಸುಖತಲ್ಪ.

ಹೆಣ್ಣು ಸತ್ತಳು ಏಕೆ? ನೆರೆಯ ನಿರ್ಭಾಗ್ಯರಿಗೆ
ಸಂಶಯದ ಮೇಲೆ ಸಂಶಯ.
ಕಾರಣದ ಬಂಗಾರ ಬೇಟೆ ಫಲಿಸದೆ ಕಡೆಗೆ
ಸತ್ತವಳ ಮೇಲೆ ಸಂಶಯ.

ಕಯ್ಯಾರ ಕೆರೆಗೆ ತಳ್ಳಿದನೆ ಮಡೆದಿಯನಿವನು?
ನ್ಯಾಯದಲಿ ತೀರ್ಪು: ನಿರ್ದೋಷಿ.
ಗದ್ದಲದ ಗಡಸು ನಾಲಗೆಯ ಗಂಡಲ್ಲಿವನು;
ಊರು ಕಂಡಂತೆ ಮಿತಭಾಷಿ.

ಸತ್ತವಳ ಮೇಲೆ ಸಂಶಯ -ಊರಿಗಿವನಂಥ
ಮಾದರಿಯ ಗಂಡ ಆಭರಣ.
ಸತ್ತವಳು ಇಳಿದು ಸತ್ಯವನೊದರುವಂತಿಲ್ಲ ;
ಸಂಗತಿಗೆ ಮೌನದಾವರಣ.

ನೀರಿಗೆ ಬಿದ್ದ ಹೆಣ್ಣ ಗಂಡನ ಹಣೆಯ ಮೇಲೆ
ಬಿಡುಗಡೆಯ ನಿರ್ಭಯದ ತಿಲಕ.
ಎದೆಯಲಿ ಏನೊ ಎಂತೊ, ತೋರುವ ಮುಖದ ಮೇಲೆ
ಎಷ್ಟೊಂದು ನೋವು, ನಾಟಕ!

ಸತ್ತಳು ಏಕೆ ಹೆಣ್ಣು (ಊರಿಗೆ ಇಲ್ಲ ಕಣ್ಣು):
ಅಂತು ಕೇಳಿದವನೊಬ್ಬ ಕುಂಟ.
ಸತ್ತರೆ ಏನು ನಷ್ಟ? ಕಾದಿದೆ ಬೇರೆ ಹೆಣ್ಣು;
ಇಂತು ಹೇಳಿದನೊಬ್ಬ ನಂಟ.

ಕನಿಕರದಿಂದ ಬಂದ ಕುರಿಯೊಂದು ನುಡಿದಿತ್ತು :
ಮುಂಗಿದಿತ್ತು ಹೆಣ್ಣ ಹಣೆ-ಬರಹ.
ಮಾನವ ಜನ್ಮಧಾರಿ ನರಿಯೊಂದು ನಕ್ಕಿತ್ತು :
ನೀರಿಗೆ ಜಾರಿ ಬಿದ್ದ ವಿಷಯ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...