Home / ಕವನ / ಕವಿತೆ / ನೀರಿಗೆ ಬಿದ್ದ ಹೆಣ್ಣು

ನೀರಿಗೆ ಬಿದ್ದ ಹೆಣ್ಣು

ನೀರಿಗೆ ಬಿದ್ದ ಹೆಣ್ಣು ತಾವರೆಯ ತೆನೆಯಾಗಿ
ಹೂವಾಗಲಿಲ್ಲ ಕೆಂಪಾಗಿ.
ಸಾವಿನಲಿ ಶಾಂತಿ ಉರುಳಿತ್ತು ತಲೆಕೆಳಗಾಗಿ
ಆ ಎಲ್ಲ ನೋವು ತಂಪಾಗಿ.

ನೀರಿಗೆ ಬಿದ್ದ ಹೆಣ್ಣು ಒಂದೇ ಮುಳುಗು ಮುಳುಗಿ
ಕಂಡಿತ್ತು ಸಾವಿನ ಯುಗಾದಿ.
ಸುತ್ತೆಲ್ಲ ಕಿತ್ತು ಬಿದ್ದಿತ್ತು ಆಸೆಯ ಜೋಲಿ
ತೆರೆದಿತ್ತು ಹುಡಿಮಣ್ಣು ಹಾದಿ.

ನೀರಿಗೆ ಬಿದ್ದ ಹೆಣ್ಣು ಯಾರಿಗೂ ಹೇಳದೆಯೆ
ಆಗಿತ್ತು ಕೆರೆಗೆ ಆಹುತಿ.
ಹಾಲ ಕಾಣದ ಬದುಕು ಕುಡಿದಿತ್ತು ಕೆರೆಯನೆ;
ಅಲ್ಲಿತ್ತು ಅದರ ಸದ್ಗತಿ.

ಗಂಡ ಬಂದನು ಕಡೆಗೆ ನಡೆಬಂದ ಕಂಬದೊಲು;
ಹತ್ತು ಜನ ಅಲ್ಲೆ ಒದಗಿದರು.
ಬೆಂಕಿ ಹೆಣವನು ನುಂಗಿ ಬೆಂಬೂದಿಯಾಗಿರಲು,
ಉಳಿದವರು ಊರ ಸೇರಿದರು.

ನೀರು ಮುಗಿಸಿದ ಕಥೆಗೆ ಬೆಂಕಿ ಮಂಗಳ ಹಾಡಿ
ನಡೆದಿತ್ತು ದೈವ ಸಂಕಲ್ಪ.
ಇಂಥ ಬಾಳಿಗೆ ಸಾವೆ ನಂದನದ ಕೆರೆ-ಕೋಡಿ;
ಮಸಣದಲಿ ಮಾತ್ರ ಸುಖತಲ್ಪ.

ಹೆಣ್ಣು ಸತ್ತಳು ಏಕೆ? ನೆರೆಯ ನಿರ್ಭಾಗ್ಯರಿಗೆ
ಸಂಶಯದ ಮೇಲೆ ಸಂಶಯ.
ಕಾರಣದ ಬಂಗಾರ ಬೇಟೆ ಫಲಿಸದೆ ಕಡೆಗೆ
ಸತ್ತವಳ ಮೇಲೆ ಸಂಶಯ.

ಕಯ್ಯಾರ ಕೆರೆಗೆ ತಳ್ಳಿದನೆ ಮಡೆದಿಯನಿವನು?
ನ್ಯಾಯದಲಿ ತೀರ್ಪು: ನಿರ್ದೋಷಿ.
ಗದ್ದಲದ ಗಡಸು ನಾಲಗೆಯ ಗಂಡಲ್ಲಿವನು;
ಊರು ಕಂಡಂತೆ ಮಿತಭಾಷಿ.

ಸತ್ತವಳ ಮೇಲೆ ಸಂಶಯ -ಊರಿಗಿವನಂಥ
ಮಾದರಿಯ ಗಂಡ ಆಭರಣ.
ಸತ್ತವಳು ಇಳಿದು ಸತ್ಯವನೊದರುವಂತಿಲ್ಲ ;
ಸಂಗತಿಗೆ ಮೌನದಾವರಣ.

ನೀರಿಗೆ ಬಿದ್ದ ಹೆಣ್ಣ ಗಂಡನ ಹಣೆಯ ಮೇಲೆ
ಬಿಡುಗಡೆಯ ನಿರ್ಭಯದ ತಿಲಕ.
ಎದೆಯಲಿ ಏನೊ ಎಂತೊ, ತೋರುವ ಮುಖದ ಮೇಲೆ
ಎಷ್ಟೊಂದು ನೋವು, ನಾಟಕ!

ಸತ್ತಳು ಏಕೆ ಹೆಣ್ಣು (ಊರಿಗೆ ಇಲ್ಲ ಕಣ್ಣು):
ಅಂತು ಕೇಳಿದವನೊಬ್ಬ ಕುಂಟ.
ಸತ್ತರೆ ಏನು ನಷ್ಟ? ಕಾದಿದೆ ಬೇರೆ ಹೆಣ್ಣು;
ಇಂತು ಹೇಳಿದನೊಬ್ಬ ನಂಟ.

ಕನಿಕರದಿಂದ ಬಂದ ಕುರಿಯೊಂದು ನುಡಿದಿತ್ತು :
ಮುಂಗಿದಿತ್ತು ಹೆಣ್ಣ ಹಣೆ-ಬರಹ.
ಮಾನವ ಜನ್ಮಧಾರಿ ನರಿಯೊಂದು ನಕ್ಕಿತ್ತು :
ನೀರಿಗೆ ಜಾರಿ ಬಿದ್ದ ವಿಷಯ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...