Home / ಕವನ / ಕವಿತೆ / ೨೬-೧-೫೦

೨೬-೧-೫೦

ತಲೆಯ ಮೇಲಿನ ಹೆಜ್ಜೆ ಎಂದೋ ತೆರಳಿತು
ಪಡುವಲಿನ ಬಿಳಿ ಕೆಂಪು ನೀಲಿ ನೀರನು ದಾಟಿ,
ಮರಕತ ದ್ವೀಪದಮನೆಗೆ. ದಣಿಗೂ ದಣಿವು!
ಇತ್ತ ಈ ಬಿಡುಗಡೆಯೂ ಮೈಮುರಿದು ಪರಶಿವನ
ತ್ರಿಶೂಲದಂತಾಯ್ತು ನೋಡುನ ಕಣ್ಣಿಗೆ!

ತಲೆಯ ಮೇಲಿನ ಹೆಜ್ಜೆ. -ಈ ಮಾತು ಮುಗಿಯಿತು;
`ಹೆಜ್ಜೆಯೇ ಅಲ್ಲ ಮಕುಟದ ಮುತ್ತು ಅದು,
ಇರಲಿ ರಾಜತ್ವ ನೆಪಮಾತ್ರ’ ಎನುವಂತಿಲ್ಲ,-
ಮಕುಟ ರಹಿತ ಸಾಮ್ರಾಜ್ಞಿ ಭಾರತಲಕ್ಷ್ಮಿ,
ರಾಜತ್ವ ರಹಿತ ರಾಜ್ಯಾಂಗ ಮನೋಮಂದಿರೆ.

ನೆನೆ ನೆನೆ ಓ ಮನನೆ ನಿನ್ನ ಎದೆಗತ್ತಲೆಯೆ
ಬಲಿಗೊಟ್ಟ ತಂದೆ ಬಾಳಿನ ಚಂದ್ರಬಿಂಬವನು.
ಆ ನೋಟ ನಿನ್ನ ಕಣ್ಣಾಗಿ, ಅಮೃತವೆ ತುಂಬಿ,
ಗಾಂಧಿಜಿಯ ಮಂದಹಾಸವೆ ಗುರುವಾಗಲಿ !

ಬಾಂಬಿನ ಅಲಂಕಾರ ನಿನಗಿಲ್ಲ, ತಾಯೆ,
ಶಾಂತಿ ಪ್ರಿಯೆ, ಚಂದ್ರಕಾಂತಿ ಪ್ರಿಯೆ,
ಗಂಗಾ ಯಮುನಾ ನದನದೀ ಸ್ನಾತೆ,
ಉಪನಿಷದ್ವಿಪಿನ ಹೋಮಾಗ್ನಿ ಸಂಜಾತೆ !

ಚಳಿಗಾಲ ಬಂದಿರಲು, ಮುದುಕಿ ಮುಮ್ಮೂಲೆಯಲಿ
ಒಂದು ಕಿಡಿ ಕೆಂಡದೆದುರಿನಲಿ ಮೈ ಹಿಡಿಯಾಗಿ
ಬೆದರಿ ಕುಳಿತಂತೆ, ಚಿಂತೆಗೆ ಆತ್ಮನನು ತೆತ್ತು
ಸಂಗ್ರಾಮ ಭೀತಿಯಲಿ ಸೋತು ಸೊರಗಿ ಜಗತ್ತು
ದೂರ ಸಭೆಗಳಲಿ ಮುಗಿಯುವ ಮುನ್ನ ಎಚ್ಚರಿಸು.
ನಿನ್ನ ಗಂಭೀರವಾಣಿಯ ಪಾರಿವಾಳಗಳ
ಬೆಳ್ಗರಿಯ ಬೀಸಿ ಶಾಂತಿಯ ಶಿಶುವನುಪಚರಿಸು;
ಅದು ಬೆಳೆದು ಲೋಕನಾಯಕನಾಗಿ ರಾರಾಜಿಸಲಿ!

ಜಗಜ್ಜನನಿಯಲ್ಲ ನೀನು; ಜಗನ್ಮೋಹಿನಿಯೂ ಅಲ್ಲ;
ಜಗದ್ಧಾತ್ರಿಯಾಗಿರು ನೀನು; ಅಹಿಂಸಾವತ್ಸಲೆ,
ನಿನ್ನ ಶಾಸನವಿದು (ನಡೆ ನಗಾರಿಯ ಮೇಲೆ;
ಈ ಧರ್ಮ ನಿನ್ನ ಬಾವುಟದ ಇನ್ನೂ ಮೇಲೆ):

“ವಯಂ ಪುನಃ ಏವಂ ಆಚಕ್ಷಾಮಹೇ,
ಏನಂ ಭಾಷಾಮಹೇ, ಏವಂ ಪ್ರರೂಯಾಮಃ,
ಏವಂ ಪ್ರಜ್ಞಾಪಯಾಮಃ,-
ಸರ್ವೇ ಪ್ರಾಣಾಃ, ಸರ್ವೇ ಭೂತಾಃ, ಸರ್ವೇ ಜೀವಾಃ,
ಸರ್ವೇ ಸತ್ವಾಃ,
ನ ಹಂತಾವ್ಯಾಃ
ನ ಆಜ್ಞಾಪರಿಯಿತವ್ಯಾಃ
ನ ಪರಿಗ್ರಹೀತವ್ಯಾಃ
ನ ಪರಿತಾಪಯಿತವ್ಯಾಃ
ನ ಉಪದ್ರೋತವ್ಯಾಃ
ಆರ್ಯವಚನಮೇತತ್
ಓಂ ತತ್‍ಸತ್.”
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...