Home / ಕವನ / ಕವಿತೆ / ೨೬-೧-೫೦

೨೬-೧-೫೦

ತಲೆಯ ಮೇಲಿನ ಹೆಜ್ಜೆ ಎಂದೋ ತೆರಳಿತು
ಪಡುವಲಿನ ಬಿಳಿ ಕೆಂಪು ನೀಲಿ ನೀರನು ದಾಟಿ,
ಮರಕತ ದ್ವೀಪದಮನೆಗೆ. ದಣಿಗೂ ದಣಿವು!
ಇತ್ತ ಈ ಬಿಡುಗಡೆಯೂ ಮೈಮುರಿದು ಪರಶಿವನ
ತ್ರಿಶೂಲದಂತಾಯ್ತು ನೋಡುನ ಕಣ್ಣಿಗೆ!

ತಲೆಯ ಮೇಲಿನ ಹೆಜ್ಜೆ. -ಈ ಮಾತು ಮುಗಿಯಿತು;
`ಹೆಜ್ಜೆಯೇ ಅಲ್ಲ ಮಕುಟದ ಮುತ್ತು ಅದು,
ಇರಲಿ ರಾಜತ್ವ ನೆಪಮಾತ್ರ’ ಎನುವಂತಿಲ್ಲ,-
ಮಕುಟ ರಹಿತ ಸಾಮ್ರಾಜ್ಞಿ ಭಾರತಲಕ್ಷ್ಮಿ,
ರಾಜತ್ವ ರಹಿತ ರಾಜ್ಯಾಂಗ ಮನೋಮಂದಿರೆ.

ನೆನೆ ನೆನೆ ಓ ಮನನೆ ನಿನ್ನ ಎದೆಗತ್ತಲೆಯೆ
ಬಲಿಗೊಟ್ಟ ತಂದೆ ಬಾಳಿನ ಚಂದ್ರಬಿಂಬವನು.
ಆ ನೋಟ ನಿನ್ನ ಕಣ್ಣಾಗಿ, ಅಮೃತವೆ ತುಂಬಿ,
ಗಾಂಧಿಜಿಯ ಮಂದಹಾಸವೆ ಗುರುವಾಗಲಿ !

ಬಾಂಬಿನ ಅಲಂಕಾರ ನಿನಗಿಲ್ಲ, ತಾಯೆ,
ಶಾಂತಿ ಪ್ರಿಯೆ, ಚಂದ್ರಕಾಂತಿ ಪ್ರಿಯೆ,
ಗಂಗಾ ಯಮುನಾ ನದನದೀ ಸ್ನಾತೆ,
ಉಪನಿಷದ್ವಿಪಿನ ಹೋಮಾಗ್ನಿ ಸಂಜಾತೆ !

ಚಳಿಗಾಲ ಬಂದಿರಲು, ಮುದುಕಿ ಮುಮ್ಮೂಲೆಯಲಿ
ಒಂದು ಕಿಡಿ ಕೆಂಡದೆದುರಿನಲಿ ಮೈ ಹಿಡಿಯಾಗಿ
ಬೆದರಿ ಕುಳಿತಂತೆ, ಚಿಂತೆಗೆ ಆತ್ಮನನು ತೆತ್ತು
ಸಂಗ್ರಾಮ ಭೀತಿಯಲಿ ಸೋತು ಸೊರಗಿ ಜಗತ್ತು
ದೂರ ಸಭೆಗಳಲಿ ಮುಗಿಯುವ ಮುನ್ನ ಎಚ್ಚರಿಸು.
ನಿನ್ನ ಗಂಭೀರವಾಣಿಯ ಪಾರಿವಾಳಗಳ
ಬೆಳ್ಗರಿಯ ಬೀಸಿ ಶಾಂತಿಯ ಶಿಶುವನುಪಚರಿಸು;
ಅದು ಬೆಳೆದು ಲೋಕನಾಯಕನಾಗಿ ರಾರಾಜಿಸಲಿ!

ಜಗಜ್ಜನನಿಯಲ್ಲ ನೀನು; ಜಗನ್ಮೋಹಿನಿಯೂ ಅಲ್ಲ;
ಜಗದ್ಧಾತ್ರಿಯಾಗಿರು ನೀನು; ಅಹಿಂಸಾವತ್ಸಲೆ,
ನಿನ್ನ ಶಾಸನವಿದು (ನಡೆ ನಗಾರಿಯ ಮೇಲೆ;
ಈ ಧರ್ಮ ನಿನ್ನ ಬಾವುಟದ ಇನ್ನೂ ಮೇಲೆ):

“ವಯಂ ಪುನಃ ಏವಂ ಆಚಕ್ಷಾಮಹೇ,
ಏನಂ ಭಾಷಾಮಹೇ, ಏವಂ ಪ್ರರೂಯಾಮಃ,
ಏವಂ ಪ್ರಜ್ಞಾಪಯಾಮಃ,-
ಸರ್ವೇ ಪ್ರಾಣಾಃ, ಸರ್ವೇ ಭೂತಾಃ, ಸರ್ವೇ ಜೀವಾಃ,
ಸರ್ವೇ ಸತ್ವಾಃ,
ನ ಹಂತಾವ್ಯಾಃ
ನ ಆಜ್ಞಾಪರಿಯಿತವ್ಯಾಃ
ನ ಪರಿಗ್ರಹೀತವ್ಯಾಃ
ನ ಪರಿತಾಪಯಿತವ್ಯಾಃ
ನ ಉಪದ್ರೋತವ್ಯಾಃ
ಆರ್ಯವಚನಮೇತತ್
ಓಂ ತತ್‍ಸತ್.”
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...