Home / ಕವನ / ಕವಿತೆ / ಏನೆಂದು ಹೇಳಲಿ ಅಕ್ಕ

ಏನೆಂದು ಹೇಳಲಿ ಅಕ್ಕ

ಏನೆಂದು ಹೇಳಲಿ ಅಕ್ಕ
ಮುತ್ತಿನ ಕತೆಯ
ಏನೆಂದು ಹೇಳಲಿ ಅದ
ಕಿತ್ತವನ ಕತೆಯ

ಬೃಂದಾವನ ತುಂಬ ಸುರಿಯಿತು ಮುತ್ತು
ಅದು ಸುರಿದರು ಇನ್ನೂ ಮುಗಿಯದೆ ಇತ್ತು

ಅತ್ತು ಕೇಳಿದ ಕೃಷ್ಣ
ಮತ್ತೂ ಕೇಳಿದ ಕೃಷ್ಣ
ಒತ್ತಾಯಿಸಿ ಕೇಳಿದ
ಸತ್ತಾಯಿಸಿ ಕೇಳಿದ
ಒಬ್ಬೊಬ್ಬ ಗೋಪಿಕೆಯ
ಹತ್ತು ಸಲ ಕೇಳಿದ
ಏನೆಂದು ಹೇಳಲಿ ಅಕ್ಕ
ಈ ಮುತ್ತಿನ ಕತೆಯ

ಒಬ್ಬೊಬ್ಬಳಿಂದಲು
ಒಂದೊಂದು ಮುತ್ತು
ದಿನವು ಬೇಡಿದನೆ
ಇನ್ನೊಂದು ಮುತ್ತು

ತುಟಿಗೊಂದು ಮುತ್ತು
ಕೆನ್ನೆಗೊಂದ್ಮುತ್ತು
ಹಣೆಗೊಂದು ಮುತ್ತು
ಹುಬ್ಬಿಗೆರಡಿತ್ತು

ನಗುತಿದ್ದರೊಂದು ಮುತ್ತು
ನಾಚುತಿದ್ದರು ಒಂದು ಮುತ್ತು
ಸುಮ್ಮನೆ ಹೋಗುತಿದ್ದರೆ ಮುತ್ತು
ಬಿಮ್ಮನೆ ಇದ್ದರೆ ಮುತ್ತೇ ಮುತ್ತು

ಮರೆಗಿದ್ದರೊಂದು ಮುತ್ತು
ಮಾತಾಡುತಿದ್ದರೆರಡು ಮುತ್ತು
ಹಾಡುತಿದ್ದರೆ ಹತ್ತು ಮುತ್ತು
ಮೌನವಾಗಿದ್ದರೆ ಮುನ್ನೂರು ಮುತ್ತು

ಹಾಲು ಕರೆಯುತ್ತಿದ್ದರೆ
ಕೇಳಿದಷ್ಟು ಮುತ್ತು
ನೀರು ತರುತಿದ್ದರೆ
ನೂರೊಂದು ಮುತ್ತು
ಐನೀರಿಗೈನೂರು ಮುತ್ತು
ರಂಗಿನಾಟಕೆ ಸಾವಿರ ಮುತ್ತು

ನಿನ್ನೆ ಬೇಕೆಂದನೆ
ಈ ದಿನ ಬೇಕೆಂದನೆ
ಈಗ ಬೇಕೆಂದನೆ
ಆಗ ಬೇಕೆಂದನೆ
ಯಾವತ್ತಿಗೂ ಅದು
ಸಾಕಾಗುವುದೆಂದನೆ
ಯಾವತ್ತಿಗೂ ಅದು
ಸಾಕಾಗದೆಂದನೆ

ಮುತ್ತು ಕೊಟ್ಟೇ ದಾರಿ
ಹೋಗಬೇಕೆಂದನೆ
ಶುದ್ಧ ಮುತ್ತೇ
ಆಗಬೇಕೆಂದನೆ
ಇದ್ದಷ್ಟೂ ಅವು
ಸಾಲದೆಂದನೆ
ಉದ್ದ ಮುತ್ತುಗಳೇ
ಒಳ್ಳೆಯದೆಂದನೆ
ಕದ್ದಾದರೂ ಅವ
ಕೊಡಬೇಕೆಂದನೆ

ಕೊಟ್ಟುದನೆಲ್ಲವ
ಚೆಲ್ಲಾಡಿ ಕೇಳಿದನೆ
ಕಳೆದುಹೋದುವು ಎಂದು
ಗೋಳಾಡಿ ಕೇಳಿದನೆ
ಆಡಿ ಕೇಳಿದನೆ ಕುಣಿ-
ದಾಡಿ ಕೇಳಿದನೆ
ಎಲ್ಲೆಂದರಲ್ಲಿ ಕಾಡಿ ಕೇಳಿದನೆ
ನಗಾಡಿ ಕೇಳಿದನೆ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...