Home / ಕವನ / ಕವಿತೆ / ಏನೆಂದು ಹೇಳಲಿ ಅಕ್ಕ

ಏನೆಂದು ಹೇಳಲಿ ಅಕ್ಕ

ಏನೆಂದು ಹೇಳಲಿ ಅಕ್ಕ
ಮುತ್ತಿನ ಕತೆಯ
ಏನೆಂದು ಹೇಳಲಿ ಅದ
ಕಿತ್ತವನ ಕತೆಯ

ಬೃಂದಾವನ ತುಂಬ ಸುರಿಯಿತು ಮುತ್ತು
ಅದು ಸುರಿದರು ಇನ್ನೂ ಮುಗಿಯದೆ ಇತ್ತು

ಅತ್ತು ಕೇಳಿದ ಕೃಷ್ಣ
ಮತ್ತೂ ಕೇಳಿದ ಕೃಷ್ಣ
ಒತ್ತಾಯಿಸಿ ಕೇಳಿದ
ಸತ್ತಾಯಿಸಿ ಕೇಳಿದ
ಒಬ್ಬೊಬ್ಬ ಗೋಪಿಕೆಯ
ಹತ್ತು ಸಲ ಕೇಳಿದ
ಏನೆಂದು ಹೇಳಲಿ ಅಕ್ಕ
ಈ ಮುತ್ತಿನ ಕತೆಯ

ಒಬ್ಬೊಬ್ಬಳಿಂದಲು
ಒಂದೊಂದು ಮುತ್ತು
ದಿನವು ಬೇಡಿದನೆ
ಇನ್ನೊಂದು ಮುತ್ತು

ತುಟಿಗೊಂದು ಮುತ್ತು
ಕೆನ್ನೆಗೊಂದ್ಮುತ್ತು
ಹಣೆಗೊಂದು ಮುತ್ತು
ಹುಬ್ಬಿಗೆರಡಿತ್ತು

ನಗುತಿದ್ದರೊಂದು ಮುತ್ತು
ನಾಚುತಿದ್ದರು ಒಂದು ಮುತ್ತು
ಸುಮ್ಮನೆ ಹೋಗುತಿದ್ದರೆ ಮುತ್ತು
ಬಿಮ್ಮನೆ ಇದ್ದರೆ ಮುತ್ತೇ ಮುತ್ತು

ಮರೆಗಿದ್ದರೊಂದು ಮುತ್ತು
ಮಾತಾಡುತಿದ್ದರೆರಡು ಮುತ್ತು
ಹಾಡುತಿದ್ದರೆ ಹತ್ತು ಮುತ್ತು
ಮೌನವಾಗಿದ್ದರೆ ಮುನ್ನೂರು ಮುತ್ತು

ಹಾಲು ಕರೆಯುತ್ತಿದ್ದರೆ
ಕೇಳಿದಷ್ಟು ಮುತ್ತು
ನೀರು ತರುತಿದ್ದರೆ
ನೂರೊಂದು ಮುತ್ತು
ಐನೀರಿಗೈನೂರು ಮುತ್ತು
ರಂಗಿನಾಟಕೆ ಸಾವಿರ ಮುತ್ತು

ನಿನ್ನೆ ಬೇಕೆಂದನೆ
ಈ ದಿನ ಬೇಕೆಂದನೆ
ಈಗ ಬೇಕೆಂದನೆ
ಆಗ ಬೇಕೆಂದನೆ
ಯಾವತ್ತಿಗೂ ಅದು
ಸಾಕಾಗುವುದೆಂದನೆ
ಯಾವತ್ತಿಗೂ ಅದು
ಸಾಕಾಗದೆಂದನೆ

ಮುತ್ತು ಕೊಟ್ಟೇ ದಾರಿ
ಹೋಗಬೇಕೆಂದನೆ
ಶುದ್ಧ ಮುತ್ತೇ
ಆಗಬೇಕೆಂದನೆ
ಇದ್ದಷ್ಟೂ ಅವು
ಸಾಲದೆಂದನೆ
ಉದ್ದ ಮುತ್ತುಗಳೇ
ಒಳ್ಳೆಯದೆಂದನೆ
ಕದ್ದಾದರೂ ಅವ
ಕೊಡಬೇಕೆಂದನೆ

ಕೊಟ್ಟುದನೆಲ್ಲವ
ಚೆಲ್ಲಾಡಿ ಕೇಳಿದನೆ
ಕಳೆದುಹೋದುವು ಎಂದು
ಗೋಳಾಡಿ ಕೇಳಿದನೆ
ಆಡಿ ಕೇಳಿದನೆ ಕುಣಿ-
ದಾಡಿ ಕೇಳಿದನೆ
ಎಲ್ಲೆಂದರಲ್ಲಿ ಕಾಡಿ ಕೇಳಿದನೆ
ನಗಾಡಿ ಕೇಳಿದನೆ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...