Home / ಕವನ / ಕವಿತೆ / ಕ್ಷುಬ್ಧ ಸಾಗರದಂತೆ

ಕ್ಷುಬ್ಧ ಸಾಗರದಂತೆ

ಕ್ಷುಬ್ಧ ಸಾಗರದಂತೆ ಅಲ್ಲೋಲಕಲ್ಲೋಲ
ನನ್ನಂತರಂಗದಲ್ಲಿ ಹೃದಯವಿಂದು

ಕುದಿಯುತಿದೆ ಉಕ್ಕುತಿದೆ ಬತ್ತುತಿದೆ ಒಂದೊಂದು
ನನ್ನಾತ್ಮ ಬಿಂದು

ಯಾವ ತಪ್ಪಿಗೆ ಯಾವ ಶಿಕ್ಷೆಯಿದೊ ಕಾಣೆನು
ಸರ್‍ವ ಕ್ಷಮೆ ಯಾಚಿಸಲು ನಾನಿಂದು ಸಿದ್ಧನು

ಏನ ಮಾಡಲು ಹೊರಟು ಏನಾಯಿತೋ ತಿಳಿಯೆ
ಕೈ ತಪ್ಪೊ ಸಂಕಲ್ಪ ತಪ್ಪೊ ಅರಿಯೆ

ನುಡಿನುಡಿದು ಮನಃಸಾಕ್ಷಿ ಸೊರಗಿ ಹೋಗಿರುವುದು
ಒಡಕು ಕನ್ನಡಿಯಲಿ ಮುಖ ಸಹಸ್ರಾಕ್ಷ

ತೆರೆದರೂ ಮುಚ್ಚಿದರು ದೃಷ್ಟಿ ಕೈವಶವಿಲ್ಲ
ಕೇಳಿದರು ಅರ್‍ಥವಿಪ ಶಕ್ತಿ ಕಿವಿಗಿಲ್ಲ

ಭಾವಗಳ ಪ್ರಕಟಿಸಲು ಮಾತುಗಳೆ ಈಗಿಲ್ಲ
ನೆನಪುಗಳ ಕಣಜವೂ ಬರಿದಾಗಿದೆ

ಬೆಟ್ಟದಲಿ ಸುತ್ತಿದೆನು ಮರುಭೂಮಿಯಲ್ಲಿ ಅಲೆದೆನು
ಬಿಸಿಲಲ್ಲಿ ಬೆಂದೆನು ಬಯಲಲ್ಲಿ ಕಾದೆನು

ಜೀವ ನಿನ್ನದು ದೇಹ ನಿನ್ನದು ಮನವು ನಿನ್ನದು ಆದರೆ
ಪುಣ್ಯ ನಿನ್ನದು ಪಾಪ ನಿನ್ನದು ನನ್ನದಿನ್ನೇನಿದೆ
*****

Tagged:

Leave a Reply

Your email address will not be published. Required fields are marked *

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...