Home / ಕವನ / ಕವಿತೆ / ನಮ್ಮ ಗೊಮ್ಮಟ

ನಮ್ಮ ಗೊಮ್ಮಟ

ಎಲ್ಲರಂಥವನಲ್ಲ
ನಮ್ಮ ಗೊಮ್ಮಟ
ಮಳೆಯಲು ಬಿಸಿಲಲು
ಇವನೊಬ್ಬನೆ ಮನ್ಮಥ

ಏನು ಮೈ ಏನು ಮಾಟ
‘ಏನುದಾತ್ತ ನೋಟವು
ಹುಟ್ಟಿದುದಕೆ ಸಾರ್‍ಥಕವಾಯ್ತೊ
ಇವನು ನಿಂತ ಬೆಟ್ಟವು

ರಾಜ್ಯ ಬಿಟ್ಟು ವಿರಾಜಮಾನ
ಈ ವರ್‍ಧಮಾನ
ಯುಗದಗಲ ಜಗದಗಲ
ಈ ಪ್ರವರ್‍ಧಮಾನ

ಎಂಥ ಮನದ ಎಂಥ ಜನದ
ಜಿನಕಲ್ಪನವೀತನ
ಬಾಹು ಬಲಕಿಂತ ಮನೋ-
ಬಲವೆ ಬಲ ಎಂದವನ

ಪಾದ ನಾವು ತಬ್ಬುವೆವು
ಬೆರಳ ನಾವು ಮುಟ್ಟುವೆವು
ತಲೆಯೆತ್ತಿ ಬೆರಗಾಗಿ
ಎತ್ತರೆತ್ತರ ನೋಡುವೆವು

ನಿಂತರಿಂತು ನಿಲಬೇಕಯ್ಯ
ಎಂದು ಹೇಳಿಕೊಳ್ಳುವೆವು
ಗೆದ್ದರಿಂತು ಗೆಲಬೇಕಯ್ಯ
ಎಂದು ಕೊಂಡಾಡುವೆವು

ಹಾಲುತುಪ್ಪ ಕಾಡ ಜೇನು
ಮಹಾಮಸ್ತಕಾಭಿಷೇಕ
ಸುರಿದರೆಷ್ಟೊ ಉದಕವನೂ
ಇವನಿಗೆಲ್ಲ ರೂಪಕ

ಸವಣರಾಗದವರು ಯಾರು
ಇಂಥ ಜಿನನ ಮುಂದೆ
ಉಳ್ಳವರೂ ಇಲ್ಲದವರೂ
ತೊಪ್ಪದೊಂದೆ ಮುಂದೆ

ಕಾಲಚಕ್ರ ಸಾಗೀತೆ
ಇವನ ಚಿತ್ತದೆಡೆಗೆ
ಧರ್‍ಮಚಕ್ರ ಉರುಳೀತೆ
ಇವನ ಸತ್ಯದೊಳಗೆ

ಕೇಳಬೇಕು ಎಲ್ಲರೂ
ಕೇಳಿದವರೇ ಉತ್ತರ
ಇಲ್ಲದಿದ್ದರೇನು ಬಂತು
ಏರಿ ಅಷ್ಟು ಎತ್ತರ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...