Home / ಕವನ / ಕವಿತೆ / ಧಾರಾವಾಹಿ

ಧಾರಾವಾಹಿ

ರಕ್ಕಸರಿನ್ನೂ ಮುಗಿದಿಲ್ಲ
ರಕ್ಕಸರಿನ್ನೂ ಬರುತಿದ್ದಾರೆ
ಬರಲೇಬೇಕು
ರಕ್ಕಸರಿನ್ನೂ ಬರದಿದ್ದರೆ
ಮುಂದುವರಿಯುವುದು ಹೇಗೆ ?
ರಕ್ಕಸರಿರ್‍ತಾರೆ ಖಳನಾಯಕರಿರ್‍ತಾರೆ
ಚೌಕಿಯಲ್ಲಿ ವೇಷ ತೊಟ್ಟುಕೊಂಡು
ಮಲಗಿರ್‍ತಾರೆ ಇಲ್ಲವೆ ಚಕ್ಕಂದ
ಆಡಿಹಾಡಿರ್‍ತಾರೆ ಹಾಡಿಕೊಂಡಿರ್‍ತಾರೆ
ಸಮಯಕ್ಕೆ ಸರಿಯಾಗಿ ಎದ್ದು ಬರುತ್ತಾರೆ
ದುಷ್ಟ ವೇಷ ಪುಂಡು ವೇಷ ಪ್ರಚಂಡ ವೇಷ
ಬಣ್ಣದ ವೇಷ
ಹಾ ಎಂಥಾವೇಶ
ರಕ್ಕಸರೂ ಕೆಲ ಛದ್ಮವೇಷ
ಬಡ ಬಡ ಬ್ರಾಹ್ಮಣ ಕಳ್ಳ ಸನ್ಯಾಸಿ
ದಾರಿಹೋಕ ಇಲ್ಲವೆ ತೀರಾ ತಲೆಹೋಕ
ಹಾವಾಡಿಗ ವರ್‍ತಕ ಅಥವಾ
ಜನಸಾಮಾನ್ಯ
ವಂಚಿಸಿದ ನಂತರ ಅವರು ನಿಜ ವೇಷವ
ತೋರುವರು
ಅದೇನು ಅಕರಾಳ ವಿಕರಾಳ
ಏನು ರಾಳದ ಪುಡಿ ಎಡಬಲ ದೊಂದಿ
ಬಯಲ ಕೊನೆಯಿಂದ ಎದ್ದು ಬರುತಾರೆ
ಅದೇನಟ್ಟಹಾಸ ಅದೇನು ಹೂಂಕಾರ
ನಿದ್ದೆ ತೂಗುತ ಇದ್ದ ಜನ ಈಗ ಎಚ್ಚರ
ನೋಡಿದರಿದೋ ಎದುರಿಗೇ ಇದೆ ಒಂದು ಘೋರಾಕಾರ
ಜನ ತತ್ತರ
ಒಮ್ಮೆಲೆ ಹಾಹಾಕಾರ
ಏನಿದು ಉಪಟಳ ಏನಿದು ಹಿಂಸೆ
ಏನಿದು ಜನಾಂಗ ಹತ್ಯೆ
ಈಗುಳಿದುದು ಒಂದೇ
ದೇವರ ಪ್ರಾರ್‍ಥನೆ
ಅಯ್ಯ ಬಾರೋ ಅಪ್ಪ ಬಾರೋ
ಹೇಗಾದರೂ ನಮ್ಮ ಕಾಪಾಡೋ
ಅವನೂ ಬರುತಾನೆ ಶಂಖ ಊದಿ
ಬರದೇನು ಮಾಡ್ತಾನೆ ಧರ್‍ಮಗ್ಲಾನಿ
ನಿವಾರಿಸಬೇಕು ತಾನೆ
ಹತ್ತವತಾರಿ ಇದೆಷ್ಟನೆ ಬಾರಿ
ಬಾರಿ ಬಾರಿಗೂ ರಕ್ಕಸರ ತಲೆ ಹಾರಿಸಿ
ದುಷ್ಟನಿಗ್ರಹ ಶಿಷ್ಟ ಅನುಗ್ರಹ
ಎಷ್ಟಾದರು ಅವತಾರ
ಅದೂ ಮುಗಿಯದು ಲೋಕವೆ ಹಾಗೆ
ನಿರಂತರ ಧಾರಾವಾಹಿ
ಇತ್ತ ವಿದೂಷಕ ವಿಧವಿಧ ವೇಷ
ಧರಿಸಿ ಪ್ರವೇಶಿಸುತಾನೆ
ಮಧ್ಯಂತರದಲಿ
ಅಥವಾ ಕೆಲವು ಸಲ ಸಣ್ಣ ಪಾತ್ರದಲಿ
ಉದಾಹರಣೆಗೆ ದೂತ
ಅಥವಾ ಅಂಬಿಗ
ರಾಯರ ಕೆಲಸ ದೇವರ ಕೆಲಸ
ಹೈರಾಣಾದ ಪ್ರೇಕ್ಷಕರನ್ನ
ನಗಿಸೋದೂ ಅವನ ಕೆಲಸ
ಆದರೆ ನಗಿಸೋದು ಯಾರು
ಖುದ್ದು ಈ ವಿದೂಷಕನ
ಅವನೆಂದೂ ನಗಲೇಬಾರದು
ಹೆಂಡ್ತಿಗೆ ಕಾಯಿಲೆ ಮಕ್ಕಳು ದಡ್ಡರು
ಇವನಿಗೊ ನಿದ್ದೇನೆ ಇಲ್ಲದೆ
ನೆತ್ತಿಗೇರಿದೆ ಕಪಿತ್ಥ ಜಂಬೂ
ಓ ದೇವರೆ, ನಿನ್ನ ಲೀಲೆಯಲಿ
ಈ ಇವನಿಗೇನು ಬೆಲೆ
ಈ ನಮಗೇನು ನೆಲೆ
ಬರಿನೆಲದಲ್ಲಿ ಕೂತವರು ನಾವು
*****

Tagged:

Leave a Reply

Your email address will not be published. Required fields are marked *

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲಿ ಮನಸ್ಸು, ದೇಹ ಎಲ್ಲವೂ ಕೊರಡಿನಂತಾ...