Home / ಕವನ / ಕವಿತೆ / ಧಾರಾವಾಹಿ

ಧಾರಾವಾಹಿ

ರಕ್ಕಸರಿನ್ನೂ ಮುಗಿದಿಲ್ಲ
ರಕ್ಕಸರಿನ್ನೂ ಬರುತಿದ್ದಾರೆ
ಬರಲೇಬೇಕು
ರಕ್ಕಸರಿನ್ನೂ ಬರದಿದ್ದರೆ
ಮುಂದುವರಿಯುವುದು ಹೇಗೆ ?
ರಕ್ಕಸರಿರ್‍ತಾರೆ ಖಳನಾಯಕರಿರ್‍ತಾರೆ
ಚೌಕಿಯಲ್ಲಿ ವೇಷ ತೊಟ್ಟುಕೊಂಡು
ಮಲಗಿರ್‍ತಾರೆ ಇಲ್ಲವೆ ಚಕ್ಕಂದ
ಆಡಿಹಾಡಿರ್‍ತಾರೆ ಹಾಡಿಕೊಂಡಿರ್‍ತಾರೆ
ಸಮಯಕ್ಕೆ ಸರಿಯಾಗಿ ಎದ್ದು ಬರುತ್ತಾರೆ
ದುಷ್ಟ ವೇಷ ಪುಂಡು ವೇಷ ಪ್ರಚಂಡ ವೇಷ
ಬಣ್ಣದ ವೇಷ
ಹಾ ಎಂಥಾವೇಶ
ರಕ್ಕಸರೂ ಕೆಲ ಛದ್ಮವೇಷ
ಬಡ ಬಡ ಬ್ರಾಹ್ಮಣ ಕಳ್ಳ ಸನ್ಯಾಸಿ
ದಾರಿಹೋಕ ಇಲ್ಲವೆ ತೀರಾ ತಲೆಹೋಕ
ಹಾವಾಡಿಗ ವರ್‍ತಕ ಅಥವಾ
ಜನಸಾಮಾನ್ಯ
ವಂಚಿಸಿದ ನಂತರ ಅವರು ನಿಜ ವೇಷವ
ತೋರುವರು
ಅದೇನು ಅಕರಾಳ ವಿಕರಾಳ
ಏನು ರಾಳದ ಪುಡಿ ಎಡಬಲ ದೊಂದಿ
ಬಯಲ ಕೊನೆಯಿಂದ ಎದ್ದು ಬರುತಾರೆ
ಅದೇನಟ್ಟಹಾಸ ಅದೇನು ಹೂಂಕಾರ
ನಿದ್ದೆ ತೂಗುತ ಇದ್ದ ಜನ ಈಗ ಎಚ್ಚರ
ನೋಡಿದರಿದೋ ಎದುರಿಗೇ ಇದೆ ಒಂದು ಘೋರಾಕಾರ
ಜನ ತತ್ತರ
ಒಮ್ಮೆಲೆ ಹಾಹಾಕಾರ
ಏನಿದು ಉಪಟಳ ಏನಿದು ಹಿಂಸೆ
ಏನಿದು ಜನಾಂಗ ಹತ್ಯೆ
ಈಗುಳಿದುದು ಒಂದೇ
ದೇವರ ಪ್ರಾರ್‍ಥನೆ
ಅಯ್ಯ ಬಾರೋ ಅಪ್ಪ ಬಾರೋ
ಹೇಗಾದರೂ ನಮ್ಮ ಕಾಪಾಡೋ
ಅವನೂ ಬರುತಾನೆ ಶಂಖ ಊದಿ
ಬರದೇನು ಮಾಡ್ತಾನೆ ಧರ್‍ಮಗ್ಲಾನಿ
ನಿವಾರಿಸಬೇಕು ತಾನೆ
ಹತ್ತವತಾರಿ ಇದೆಷ್ಟನೆ ಬಾರಿ
ಬಾರಿ ಬಾರಿಗೂ ರಕ್ಕಸರ ತಲೆ ಹಾರಿಸಿ
ದುಷ್ಟನಿಗ್ರಹ ಶಿಷ್ಟ ಅನುಗ್ರಹ
ಎಷ್ಟಾದರು ಅವತಾರ
ಅದೂ ಮುಗಿಯದು ಲೋಕವೆ ಹಾಗೆ
ನಿರಂತರ ಧಾರಾವಾಹಿ
ಇತ್ತ ವಿದೂಷಕ ವಿಧವಿಧ ವೇಷ
ಧರಿಸಿ ಪ್ರವೇಶಿಸುತಾನೆ
ಮಧ್ಯಂತರದಲಿ
ಅಥವಾ ಕೆಲವು ಸಲ ಸಣ್ಣ ಪಾತ್ರದಲಿ
ಉದಾಹರಣೆಗೆ ದೂತ
ಅಥವಾ ಅಂಬಿಗ
ರಾಯರ ಕೆಲಸ ದೇವರ ಕೆಲಸ
ಹೈರಾಣಾದ ಪ್ರೇಕ್ಷಕರನ್ನ
ನಗಿಸೋದೂ ಅವನ ಕೆಲಸ
ಆದರೆ ನಗಿಸೋದು ಯಾರು
ಖುದ್ದು ಈ ವಿದೂಷಕನ
ಅವನೆಂದೂ ನಗಲೇಬಾರದು
ಹೆಂಡ್ತಿಗೆ ಕಾಯಿಲೆ ಮಕ್ಕಳು ದಡ್ಡರು
ಇವನಿಗೊ ನಿದ್ದೇನೆ ಇಲ್ಲದೆ
ನೆತ್ತಿಗೇರಿದೆ ಕಪಿತ್ಥ ಜಂಬೂ
ಓ ದೇವರೆ, ನಿನ್ನ ಲೀಲೆಯಲಿ
ಈ ಇವನಿಗೇನು ಬೆಲೆ
ಈ ನಮಗೇನು ನೆಲೆ
ಬರಿನೆಲದಲ್ಲಿ ಕೂತವರು ನಾವು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...