Home / ಕವನ / ಕವಿತೆ / ಏನಿದು ದೆವ್ವ ಏನಿದು ಬೆಂಕಿ?

ಏನಿದು ದೆವ್ವ ಏನಿದು ಬೆಂಕಿ?

ಪುಸ್ತಕಗಳಿವೆ ಅವು ಇರಬೇಕಾದ ಜಾಗದಲ್ಲಿ ಮರದ
ಆಟಿಕೆಗಳಲ್ಲಿ ಒಪ್ಪ ಓರಣವಾಗಿ ಪೆಪಿರಸ್ ಹಾಳೆಗಳಲ್ಲಿ
ಆದರೆ ಯಾಕೆ ಕಳೆದೊಂದು ವಾರದಿಂದಲು ಯಾವ
ಓದುಗರೂ ಬಂದಿಲ್ಲ-ಒಬ್ಬ ವೃದ್ಧ ವಿದ್ವಾಂಸನ ಹೊರತು?
ಆತ ಪ್ರತಿದಿನ ಬರುವವ ಗ್ರಂಥಾಲಯ ತೆರೆಯಲು ಕಾಯುವವ
ಇಡೀ ದಿನ ಇದ್ದು
ಮುಚ್ಚುವ ವೇಳೆ ಗೊಣಗುವವ
ಅವನಿಗೋಸ್ಕರವೆ ಬರುವಂತೆ ಬರುತ್ತಾನೆ ಗ್ರಂಥಪಾಲಕ
ಗ್ರಂಥಪಾಲಕನ ಮುಖದಲ್ಲೇನೋ ಸಾರ್ಥಕತೆ ಮತ್ತು ದುಗುಡ
ಏಕ ಕಾಲಕ್ಕೆ
ಕಸ ತೆಗವ ಆ ಸುಂದರ ಹುಡುಗಿಯೂ ಬರುತ್ತಿಲ್ಲ
ಕಿಟಿಕಿ ಮುಚ್ಚಿದರೂ ಬಂದು ಬೀಳುತ್ತದೆ ಉತ್ತರದಿಂದ ಧೂಳು ಕಸ
ಕೂತುಕೊಳ್ಳುತ್ತವೆ ಪ್ರತಿ ಪುಸ್ತಕದ ಮೇಲೆ
ಆ ಹುಡುಗಿಯ ಕೈಯ ಮಖಮಲ್ಲಿನ ವಸ್ತ್ರದ ಸುಖ
ಇವುಗಳ ಮೈಗೀಗ ಇಲ್ಲ
ಏನಾಗಿದೆ ಎಲ್ಲರಿಗೆ?
ಪುಸ್ತಕಗಳಿಗೆ ಗೊತ್ತಿಲ್ಲ
ಕೊಳ್ಳಿದೆವ್ವಗಳು ಬರುತ್ತಿದ್ದಾವೆ ಕತ್ತಲ ಕೂಪದಿಂದ ಅವು ಅಕ್ಷರ ದ್ವೇಷಿಗಳು
ಇಷ್ಟೊಂದು ದೊಡ್ಡ ಭಂಡಾರ ಉರಿಯಲೂ ಸಮಯ ಬೇಕು
ದೆವ್ವಗಳಿಗೆ ಅಸಹನೆ ಒಂದೇ ಒಂದು ಹಾಳೆಯನ್ನೂ ಬಿಡದೆ
ಉರಿಸಿದರೇ ತೃಪ್ತಿ
ಕವಿಗಳು ಕಲಾವಿದರು ವಿಜ್ಞಾನಿಗಳೀಗ ಭಸ್ಮೀಭೂತ ನಾಮಿಕರು ಅನಾಮಿಕರು
ಈ ಭೂರಿ ದಹನದಿಂದ ಲೋಕ ಚೇತರಿಸಿಕೊಳ್ಳುವುದಕ್ಕೆ ಇನ್ನು
ಅದೆಷ್ಟೋ ಕಾಲ ಬೇಕು ಆದರೂ ಕೊಳ್ಳಿ ದೆವ್ವಗಳು ನಾಶವಾಗುವುದಿಲ್ಲ ಯಾವತ್ತಿಗೂ
ಅವಕ್ಕೀಗ ಇರುಳ ಆಶ್ರಯ ಬೇಡ ಹಾಡು ಹಗಲೇ ಸುತ್ತಾಡುತ್ತವೆ
ಬೆಂಕಿ ಕಾಣುವುದಿಲ್ಲ ಆದರೂ ಬೆಂಕಿಯಿದೆ
ತೂಕಡಿಸುವ ಓದುಗರ ಮೈಮನಸು ನುಗ್ಗಿ
ತೀರಿಸಿಕೊಳ್ಳಲು ತಮ್ಮ ಕಾಲಾಂತರದ ಹಗೆ
ವೃದ್ಧ ವಿದ್ವಾಂಸನಿಗದು ಗೊತ್ತಿದೆಯೇ ಇಷ್ಟೊಂದು ಓದುತ್ತ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...