Home / ಕವನ / ಕವಿತೆ / ಹೀಗಿರಲು

ಹೀಗಿರಲು

ಈ ಕವಿತೆಗಳಲ್ಲಿ ಯಾಕೆ ಇಷ್ಟೊಂದು ಏಕಾಂತ

ಪ್ರಾಕೃತದ ಸ್ಮೃತಿಯಂತೆ
ಹೋದಲ್ಲಿ ಬರುವ ತಾಳೆ ಮರವೇ
ದಾರಿಯುದ್ದಕ್ಕೂ
ಜತೆಗಾರ

ಯಾಕಿಲ್ಲ ಅರ್ಥ ಯಾಕಿಲ್ಲ ಉದ್ದೇಶ
ಯಾಕಿಲ್ಲ ಪ್ರಮಾಣ ಹಾಗೂ ವ್ಯಾಕರಣ
ನಿನ್ನ ತಾಡಪತ್ರಗಳ ನಿಗೂಢ ಸಂಜ್ಞೆಗಳಲ್ಲಿ
ಕೇವಲ ಗೆರೆಗಳು ಮಾತ್ರ ಕಾಣಿಸುತ್ತಿವೆ ಯಾಕೆ
ಬಳಕೆಯಲ್ಲಿರದ ದಾರಿಗಳ ಹಾಗೆ
ಹುಲ್ಲು ಕಡ್ಡಿ ನಾಚಿಕೆ ಮುಳ್ಳು ಹಬ್ಬಿ

ಹಾಗೂ ಅವನು ಹೋಗದ ಜಾಗಗಳೇ ಇಲ್ಲ
ಉಗಿಬಂಡಿಯಲ್ಲೂ ಅವನ ಜತೆ ಬಸ್ಸಿನಲ್ಲೂ
ಹೊಸ ಪೇಟೆಯಲ್ಲಿ ಅವನು ಸುತ್ತಾಡಿದಾಗಲೂ
ಜನ ನಿಬಿಡತೆಯಲ್ಲಿ ಮತ್ತು ಜನ ಶೂನ್ಯತೆಯಲ್ಲಿ
ಪಂಪನ ಓದಿದಾಗಲೂ ಶೇಕ್ಸ್‌ಪಿಯರನ ಅನುವಾದಿಸಿದಾಗಲೂ
ನಾಡಿನಲ್ಲೂ ಪರದೇಶದಲ್ಲೂ
ಎಲ್ಲೆಡೆಯಲ್ಲೂ ಮಗುವಿನಂತೆ ಛಲಹಿಡಿದು

ಅದರ ಗಲಗಲ ಸದ್ದು ಇತರೆಲ್ಲ
ಸದ್ದುಗಳಿಗಿಂತ ಅವನಿಗಿಷ್ಟ ಅರ್ಥವಿಲ್ಲದೆ ಅದು ಮಾತಾಡುವ ಕ್ರಮಕ್ಕೆ
ಮನಸೋತ
ಮನುಷ್ಯ ಕಾಣದ್ದನ್ನು ಅದು ಕಾಣುವುದು ಬೆಟ್ಟದಾಚೆಗಿರುವುದನ್ನೂ ನೋಡುವುದು

ಅಷ್ಟೊಂದು ಎತ್ತರ ಅದರ ಶಿರ
ಹವಾಮಾನದ ಸಕಲ ಶಕುನಗಳನ್ನೂ ಮೊದಲು ಹಿಡಿಯುವುದು ಅದು
ಆದರೂ ಎಷ್ಟೊಂದು ಒಂಟಿ

ಕೆಲವು ಸಲ ಅದರಂತೆ ಆಗುವ ವಾಂಛೆ
ನೀಳ ಕಾಯ ಮತ್ತು ಸೂರ್ಯ ಪ್ರಭೆ
ಜಗದ ಹಂಗಿಲ್ಲದೆ ಒಬ್ಬನಾಗುವ ಇಚ್ಛೆ
ಕಾಲದ ಗಣನೆ ಮೈಮನದ ಸುಳಿಯಲ್ಲಿ
ಅಮೃತತ್ವ ಆದರ ಹಣ್ಣಿನಲ್ಲಿ

ಸುದೀರ್ಘ ನೆರಳು ಬಯಲಲ್ಲಿ ಬೆಳೆಯಲ್ಲಿ
ಬಿದ್ದು ತೇಲುವುದು ಅದರಲ್ಲಿ
ಹುಲ್ಲು ಮಲಗುವುದು
ಹಕ್ಕಿಗಳು ಹಾಯುವುವು
ಇಂದು ನಾಳೆಗಳ ಹಿಂದು ಮುಂದಾಗಿ

ಹೀಗಿರಲು
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...