Home / ಕವನ / ಕವಿತೆ / ಹೀಗಿರಲು

ಹೀಗಿರಲು

ಈ ಕವಿತೆಗಳಲ್ಲಿ ಯಾಕೆ ಇಷ್ಟೊಂದು ಏಕಾಂತ

ಪ್ರಾಕೃತದ ಸ್ಮೃತಿಯಂತೆ
ಹೋದಲ್ಲಿ ಬರುವ ತಾಳೆ ಮರವೇ
ದಾರಿಯುದ್ದಕ್ಕೂ
ಜತೆಗಾರ

ಯಾಕಿಲ್ಲ ಅರ್ಥ ಯಾಕಿಲ್ಲ ಉದ್ದೇಶ
ಯಾಕಿಲ್ಲ ಪ್ರಮಾಣ ಹಾಗೂ ವ್ಯಾಕರಣ
ನಿನ್ನ ತಾಡಪತ್ರಗಳ ನಿಗೂಢ ಸಂಜ್ಞೆಗಳಲ್ಲಿ
ಕೇವಲ ಗೆರೆಗಳು ಮಾತ್ರ ಕಾಣಿಸುತ್ತಿವೆ ಯಾಕೆ
ಬಳಕೆಯಲ್ಲಿರದ ದಾರಿಗಳ ಹಾಗೆ
ಹುಲ್ಲು ಕಡ್ಡಿ ನಾಚಿಕೆ ಮುಳ್ಳು ಹಬ್ಬಿ

ಹಾಗೂ ಅವನು ಹೋಗದ ಜಾಗಗಳೇ ಇಲ್ಲ
ಉಗಿಬಂಡಿಯಲ್ಲೂ ಅವನ ಜತೆ ಬಸ್ಸಿನಲ್ಲೂ
ಹೊಸ ಪೇಟೆಯಲ್ಲಿ ಅವನು ಸುತ್ತಾಡಿದಾಗಲೂ
ಜನ ನಿಬಿಡತೆಯಲ್ಲಿ ಮತ್ತು ಜನ ಶೂನ್ಯತೆಯಲ್ಲಿ
ಪಂಪನ ಓದಿದಾಗಲೂ ಶೇಕ್ಸ್‌ಪಿಯರನ ಅನುವಾದಿಸಿದಾಗಲೂ
ನಾಡಿನಲ್ಲೂ ಪರದೇಶದಲ್ಲೂ
ಎಲ್ಲೆಡೆಯಲ್ಲೂ ಮಗುವಿನಂತೆ ಛಲಹಿಡಿದು

ಅದರ ಗಲಗಲ ಸದ್ದು ಇತರೆಲ್ಲ
ಸದ್ದುಗಳಿಗಿಂತ ಅವನಿಗಿಷ್ಟ ಅರ್ಥವಿಲ್ಲದೆ ಅದು ಮಾತಾಡುವ ಕ್ರಮಕ್ಕೆ
ಮನಸೋತ
ಮನುಷ್ಯ ಕಾಣದ್ದನ್ನು ಅದು ಕಾಣುವುದು ಬೆಟ್ಟದಾಚೆಗಿರುವುದನ್ನೂ ನೋಡುವುದು

ಅಷ್ಟೊಂದು ಎತ್ತರ ಅದರ ಶಿರ
ಹವಾಮಾನದ ಸಕಲ ಶಕುನಗಳನ್ನೂ ಮೊದಲು ಹಿಡಿಯುವುದು ಅದು
ಆದರೂ ಎಷ್ಟೊಂದು ಒಂಟಿ

ಕೆಲವು ಸಲ ಅದರಂತೆ ಆಗುವ ವಾಂಛೆ
ನೀಳ ಕಾಯ ಮತ್ತು ಸೂರ್ಯ ಪ್ರಭೆ
ಜಗದ ಹಂಗಿಲ್ಲದೆ ಒಬ್ಬನಾಗುವ ಇಚ್ಛೆ
ಕಾಲದ ಗಣನೆ ಮೈಮನದ ಸುಳಿಯಲ್ಲಿ
ಅಮೃತತ್ವ ಆದರ ಹಣ್ಣಿನಲ್ಲಿ

ಸುದೀರ್ಘ ನೆರಳು ಬಯಲಲ್ಲಿ ಬೆಳೆಯಲ್ಲಿ
ಬಿದ್ದು ತೇಲುವುದು ಅದರಲ್ಲಿ
ಹುಲ್ಲು ಮಲಗುವುದು
ಹಕ್ಕಿಗಳು ಹಾಯುವುವು
ಇಂದು ನಾಳೆಗಳ ಹಿಂದು ಮುಂದಾಗಿ

ಹೀಗಿರಲು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...