Home / ಕವನ / ಕವಿತೆ / ಇತಿಹಾಸದ ದಾರಿ

ಇತಿಹಾಸದ ದಾರಿ

ಇತಿಹಾಸದ ದಾರಿ ನೇರವಾಗಿತ್ತೆ ಎಂದಾದರೂ
ಎಡವಿಕೊಂಡೇ ಬಂದಿತೆ ಅದು ಇಲ್ಲೀವರೆಗೆ
ಇಲ್ಲಿಂದ ಇನ್ನೆಲ್ಲಿಗೆ ಕೋ ವಾಡಿಸ್ ಎನ್ನುತ್ತ ಪ್ರತಿಯೊಂದು ಬಾರಿ?
ದಾರಿ ಇದ್ದಿದ್ದರೆ ತಾನೆ ಅದಕ್ಕೆ ದಾರಿ ಕೇಳುವುದಕ್ಕು? ದಾರಿಯಿಲ್ಲದಲ್ಲಿ
ಸಾಗುವುದು ಇತಿಹಾಸ
ನನಗಿಷ್ಟೆ ಗೊತ್ತು

ಸಹಸ್ರಾರು ಗಾಯಗಳು ಗಾಯದ ಮೇಲೆ ಬರೆಗಳು
ಕೆಲವು ಮಾಯ್ದಿವೆ ಕಾಲಾಂತರದಲ್ಲಿ ಕಾಣಿಸದಾಗಿವೆ
ಕೆಲವು ವ್ರಣಗಳಿನ್ನೂ ಸೋರುತ್ತಿವೆ

ಇತಿಹಾಸದ ಬೃಹತ್ತು ತಾಳುವಂಥದು ನಮಗೆ
ಗೊತ್ತಾಗುವುದಿಲ್ಲ
ಇತಿಹಾಸದ ಸುಸ್ತೆನ್ನುವುದಿದೆ ಹೆಬ್ಬಂಡೆಗಳ ಮೇಲೆ ಕುಳಿತು
ದಣಿವಾರಿಸಿಕೊಳ್ಳುವುದು ದೈತ್ಯ ಇಗುವಾನ ಕುಳಿತ ಹಾಗೆ
ಸತ್ತಂತೆ ಸತ್ತಿತೆಂದರೆ ತಲೆಯಾಡಿಸುವುದು
ಅದರ ಹಿನ್ನೋಟ ಅಂಥ ಕಾಲದಲಿ

ಭೀಕರ ಚಂಡಮಾರುತಕ್ಕೆ ಅಪ್ಪಳಿಸುವ ಮರ
ಅಲ್ಲಲ್ಲಿ ಗೂಡುಕಟ್ಟಿರುವ ಇರುವೆಗಳು
ಕೆಲವು ಬಿದ್ದು ಸಾಯುತ್ತವೆ ನೆಲದಲ್ಲಿ
ಇನ್ನುಳಿದವು ಹಾಗೇ ನೋಡುತ್ತವೆ ಬೆಪ್ಪಾಗಿ

ಎಲ್ಲಿ ಅಡಗಿರುತ್ತದೆ ಇತಿಹಾಸದ ಕ್ರತುಶಕ್ತಿ
ಎಂದು ಕೇಳುತ್ತೇನೆ
ರಾಜನಲ್ಲಿ ಅಥವ ವಿದೂಷಕನಲ್ಲಿ?

ಆಟದ ಗೆಲುವು ಎಲ್ಲಿರುತ್ತದೆ ಇದೊಂದು
ಆಟವೆ ಆಗಿದ್ದಲ್ಲಿ
ಆಡಿದವನ ಕೈಯಲ್ಲಿ ಅಥವ ಕಾಯಿಯ ವಕ್ರತೆಯಲ್ಲಿ?

ನದಿ ಮತ್ತು ಸೇತು ಗಿರಿ ಮತ್ತು ಸುರಂಗ
ಹಡಗವೂ ತುಫಾನವೂ ಯಾವುದು
ಯಾವುದು?

ಇಷ್ಟು ದೂರಕ್ಕೆ ವಕ್ರತೆಯೆನ್ನುವುದೇ ಇಲ್ಲ
ಎಲ್ಲ ವಕ್ರತೆಗಳೂ ಸರಳ ರೇಖೆಗಳೆ ಯಾಕೆಂದರೆ ನಾವು ಅನಂತತೆಯ
ಅಂಚಿನಲ್ಲಿದ್ದೇವೆ ಇಣುಕುತ್ತ
ಚಂದ್ರನ ಆಳಗಳೂ ದೃಷ್ಟಿ ಬೊಟ್ಟುಗಳೆ

ಸರಿ ತಪ್ಪು ನ್ಯಾಯಾನ್ಯಾಯಗಳು ಮೆನೆಖಿಯನ್ ವಿಂಗಡನೆ
ಇಂದು ಕಾರಣ ನೀಡಿದಷ್ಟೂ ದ್ವಂದ್ವಗಳು ನಾಶ
ಇತಿಹಾಸವೊಂದು ಕಂಟಿನ್ಯೂವಂ
ಅಥವ ತರಂಗಾಂತರಂಗ?

ಕತ್ತಲಿಲ್ಲದ ಬೆಳಕಿಲ್ಲದ ಮಬ್ಬಿನ ಪ್ರದೇಶ
ಯಾರು ಸಂಜ್ಞಾದೇವಿ ಯಾರು ಛಾಯಾದೇವಿ
ಪುರಾಣಗಳ ನಾಶಪಡಿಸಿದ ಇತಿಹಾಸ ಬೇರ್ಪಡಿಸುವಂತಿಲ್ಲ
ಕಾಯದಿಂದ ಛಾಯೆಯ

ಅದು ಹಿಂದೆ ನೋಡಿದಾಗ ತನ್ನ ಕಣ್ಣನ್ನೆ ಕಂಡ ಹಾಗೆ
ಮುಂದೆ ನೋಡಿದಾಗ ಅದಕ್ಕೆ ಕಣ್ಣುಗಳೆ ಇಲ್ಲ
*****

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...