Home / ಕವನ / ಕವಿತೆ / ಇತಿಹಾಸದ ದಾರಿ

ಇತಿಹಾಸದ ದಾರಿ

ಇತಿಹಾಸದ ದಾರಿ ನೇರವಾಗಿತ್ತೆ ಎಂದಾದರೂ
ಎಡವಿಕೊಂಡೇ ಬಂದಿತೆ ಅದು ಇಲ್ಲೀವರೆಗೆ
ಇಲ್ಲಿಂದ ಇನ್ನೆಲ್ಲಿಗೆ ಕೋ ವಾಡಿಸ್ ಎನ್ನುತ್ತ ಪ್ರತಿಯೊಂದು ಬಾರಿ?
ದಾರಿ ಇದ್ದಿದ್ದರೆ ತಾನೆ ಅದಕ್ಕೆ ದಾರಿ ಕೇಳುವುದಕ್ಕು? ದಾರಿಯಿಲ್ಲದಲ್ಲಿ
ಸಾಗುವುದು ಇತಿಹಾಸ
ನನಗಿಷ್ಟೆ ಗೊತ್ತು

ಸಹಸ್ರಾರು ಗಾಯಗಳು ಗಾಯದ ಮೇಲೆ ಬರೆಗಳು
ಕೆಲವು ಮಾಯ್ದಿವೆ ಕಾಲಾಂತರದಲ್ಲಿ ಕಾಣಿಸದಾಗಿವೆ
ಕೆಲವು ವ್ರಣಗಳಿನ್ನೂ ಸೋರುತ್ತಿವೆ

ಇತಿಹಾಸದ ಬೃಹತ್ತು ತಾಳುವಂಥದು ನಮಗೆ
ಗೊತ್ತಾಗುವುದಿಲ್ಲ
ಇತಿಹಾಸದ ಸುಸ್ತೆನ್ನುವುದಿದೆ ಹೆಬ್ಬಂಡೆಗಳ ಮೇಲೆ ಕುಳಿತು
ದಣಿವಾರಿಸಿಕೊಳ್ಳುವುದು ದೈತ್ಯ ಇಗುವಾನ ಕುಳಿತ ಹಾಗೆ
ಸತ್ತಂತೆ ಸತ್ತಿತೆಂದರೆ ತಲೆಯಾಡಿಸುವುದು
ಅದರ ಹಿನ್ನೋಟ ಅಂಥ ಕಾಲದಲಿ

ಭೀಕರ ಚಂಡಮಾರುತಕ್ಕೆ ಅಪ್ಪಳಿಸುವ ಮರ
ಅಲ್ಲಲ್ಲಿ ಗೂಡುಕಟ್ಟಿರುವ ಇರುವೆಗಳು
ಕೆಲವು ಬಿದ್ದು ಸಾಯುತ್ತವೆ ನೆಲದಲ್ಲಿ
ಇನ್ನುಳಿದವು ಹಾಗೇ ನೋಡುತ್ತವೆ ಬೆಪ್ಪಾಗಿ

ಎಲ್ಲಿ ಅಡಗಿರುತ್ತದೆ ಇತಿಹಾಸದ ಕ್ರತುಶಕ್ತಿ
ಎಂದು ಕೇಳುತ್ತೇನೆ
ರಾಜನಲ್ಲಿ ಅಥವ ವಿದೂಷಕನಲ್ಲಿ?

ಆಟದ ಗೆಲುವು ಎಲ್ಲಿರುತ್ತದೆ ಇದೊಂದು
ಆಟವೆ ಆಗಿದ್ದಲ್ಲಿ
ಆಡಿದವನ ಕೈಯಲ್ಲಿ ಅಥವ ಕಾಯಿಯ ವಕ್ರತೆಯಲ್ಲಿ?

ನದಿ ಮತ್ತು ಸೇತು ಗಿರಿ ಮತ್ತು ಸುರಂಗ
ಹಡಗವೂ ತುಫಾನವೂ ಯಾವುದು
ಯಾವುದು?

ಇಷ್ಟು ದೂರಕ್ಕೆ ವಕ್ರತೆಯೆನ್ನುವುದೇ ಇಲ್ಲ
ಎಲ್ಲ ವಕ್ರತೆಗಳೂ ಸರಳ ರೇಖೆಗಳೆ ಯಾಕೆಂದರೆ ನಾವು ಅನಂತತೆಯ
ಅಂಚಿನಲ್ಲಿದ್ದೇವೆ ಇಣುಕುತ್ತ
ಚಂದ್ರನ ಆಳಗಳೂ ದೃಷ್ಟಿ ಬೊಟ್ಟುಗಳೆ

ಸರಿ ತಪ್ಪು ನ್ಯಾಯಾನ್ಯಾಯಗಳು ಮೆನೆಖಿಯನ್ ವಿಂಗಡನೆ
ಇಂದು ಕಾರಣ ನೀಡಿದಷ್ಟೂ ದ್ವಂದ್ವಗಳು ನಾಶ
ಇತಿಹಾಸವೊಂದು ಕಂಟಿನ್ಯೂವಂ
ಅಥವ ತರಂಗಾಂತರಂಗ?

ಕತ್ತಲಿಲ್ಲದ ಬೆಳಕಿಲ್ಲದ ಮಬ್ಬಿನ ಪ್ರದೇಶ
ಯಾರು ಸಂಜ್ಞಾದೇವಿ ಯಾರು ಛಾಯಾದೇವಿ
ಪುರಾಣಗಳ ನಾಶಪಡಿಸಿದ ಇತಿಹಾಸ ಬೇರ್ಪಡಿಸುವಂತಿಲ್ಲ
ಕಾಯದಿಂದ ಛಾಯೆಯ

ಅದು ಹಿಂದೆ ನೋಡಿದಾಗ ತನ್ನ ಕಣ್ಣನ್ನೆ ಕಂಡ ಹಾಗೆ
ಮುಂದೆ ನೋಡಿದಾಗ ಅದಕ್ಕೆ ಕಣ್ಣುಗಳೆ ಇಲ್ಲ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...