Home / ಕವನ / ಕವಿತೆ / ಕೆಲವು ದೇಶಗಳು ರಶಿಯದ ಹಾಗೆ

ಕೆಲವು ದೇಶಗಳು ರಶಿಯದ ಹಾಗೆ

ಕೆಲವು ದೇಶಗಳು ರಶಿಯದ ಹಾಗೆ ಬಹಳ ಬೃಹತ್ತಾಗಿ
ಕೆಲವು ಮಾಲಿಯ ಹಾಗೆ ಸಂಕ್ಷಿಪ್ತ

ದೊಡ್ಡ ದೇಶದ ಜನ ಒಬ್ಬರಿಗೊಬ್ಬರು ಅಪರಿಚಿತ
ಒಂದು ಕೊನೆಯಿಂದ ಇನ್ನೊಂದು ಕೊನೆ ತನಕ
ತಲುಪಲು ದಿನಗಳು ವಾರಗಳು ಮಾಸಗಳು ಬೇಕು

ಪ್ರತಿ ಯಾತ್ರೆಯೂ ಒಂದು ಮಹಾಯಾತ್ರೆ
ಅಥವಾ ಶಿಕ್ಷೆ
ಮೋಸ್ಕೋದಿಂದ ಸೈಬೀರಿಯಾಕ್ಕೆ
ಕವಿಗಳು ಹೋದರು ಕ್ರಾಂತಿಕಾರಿಗಳು ಹೋದರು

ಚಿಕ್ಕ ದೇಶಗಳಲ್ಲಿ ಎಲ್ಲರಿಗೆ ಎಲ್ಲರೂ ಗೊತ್ತು
ಸುದ್ದಿಯೆಂದರೆ ಅದು ಬಾವಿಕಟ್ಟೆಯಲಿ ನೆರೆಕರೆಯ ಪಿಸುಮಾತು

ಸಾಗುವುದಕ್ಕೆ ಆರಂಭ ಅಂತ್ಯವೆಂಬುದಿಲ್ಲ
ಅದು ಗದ್ದೆ ಸುತ್ತಿದ ಹಾಗೆ ನಮ್ಮ ಹಳ್ಳಿಯಲ್ಲಿ ದಿನಾ

ದೊಡ್ಡ ದೇಶಗಳಲ್ಲಿ ಏಕ ಕಾಲಕ್ಕೆ ಒಂದೆಡೆ ಬೀಳುವುದು ಹಿಮ
ಇನ್ನೊಂದೆಡೆ ಬಿಸಿಲ ಝಳ
ಬೆಟ್ಟದ ತಪ್ಪಲಲ್ಲಿ ಕುರಿಗಳ ಹಿಂಡು

ಕರಾವಳಿಯಲ್ಲಿ ಬೆಸ್ತರ ದಂಡು
ಅವರ ಭಾಷೆಗಳು ಬೇರೆ ಅರ್ಥವಾಗುವುದು ಸ್ವಲ್ಪ ಸ್ವಲ್ಪ

ಚಿಕ್ಕ ದೇಶಗಳಲ್ಲಿ ಹವೆಯೊಂದೇ ಭಾಷೆಯೊಂದೇ
ಉಡುತೊಡುವ ರೀತಿ ಒಂದೇ ಊಟ ಒಂದೇ

ಚರಿತ್ರೆ ಹಣ್ಣು ಕತ್ತರಿಸುವಂತೆ ಕತ್ತರಿಸಿ ಇಡಲಿಲ್ಲ
ಮಾನವ ಜನಾಂಗವನ್ನು ಒಂದೆ ತಾಟಿನಲ್ಲಿ ನೀಟಾಗಿ

ನದಿಯೂ ಹರಿಯಲಿಲ್ಲ ನೇರ ಗೆರೆಗಳಲ್ಲಿ ಪರ್ವತಗಳೂ
ಇದ್ದುವು ತಮ್ಮ ಖುಷಿಯಲ್ಲಿ

ಸರಿಪಡಿಸುವ ಎಲ್ಲ ಪ್ರಯತ್ನಗಳೂ ತತ್ತರಿಸಿ ಬೀಳುತ್ತಿವೆ
ಸರಿ ಯಾವುದು ತಪ್ಪು ಯಾವುದು ಎಂದು ಗೊತ್ತಿಲ್ಲದಿರುತ್ತ

ವಲಸೆ ಬಂದ ಹಕ್ಕಿಗಳೇ
ನೀವೇನು ಹೇಳುವಿರಿ ಎಷ್ಟು ದೇಶಗಳ ಕಂಡವರು
ಮಾತಾಡದೆ ಇರುವಿರಿ
*****

Tagged:

Leave a Reply

Your email address will not be published. Required fields are marked *

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...