Home / ಕವನ / ಕವಿತೆ / ಮಿತ್ರ ಅಥವಾ ವೈರಿ

ಮಿತ್ರ ಅಥವಾ ವೈರಿ

ಅವನ ಒಂದು ಮಾತಿಗೆ ಕಾಯುತಿದ್ದಾರೆ ಜನ
ಅವ ಮಾತ್ರ ಮಾತಾಡುವುದಿಲ್ಲ
ಭಿತ್ತಿಮುಖಿ
ತೀರ ಮೌನಿ

ಮಾತು

ಮಾತಾಡಿ ಆಗಿಲ್ಲವೇ ಸಾಕಷ್ಟು ಇಷ್ಟೂ ಕಾಲ
ಮಾತಾಡಿ ಕೊನೆ ಮುಟ್ಟಿದವರೇ ಇಲ್ಲ

ಮಾತು ಮಾತಿನ ನಡುವಣ ಶೂನ್ಯತೆಯಷ್ಟೆ
ಅರ್ಥಗರ್ಭಿತ

ಮೌನಕಣಿವೆಯ ಅಗಾಧತೆ
ಅಲ್ಲಿ ಮಾಯವಾದವರು ಹಲವು ಜನ
ಅಲ್ಲಲ್ಲಿ ತಂಗಿದರು ಕೆಲವು ಜನ
ದಾರಿ ಮಧ್ಯೆ ಹುಲ್ಲುಗಾವಲಿನ ಪಕ್ಕ ಅಥವ ಪಟ್ಟಣ
ಪ್ರದೇಶಗಳಲ್ಲಿ

ಸ್ಥಳೀಯ ಸ್ತ್ರೀಯರ ಸಂಪರ್ಕ ಬೆಳೆಸಿದರು
ಅವರ ಹೆಸರುಗಳಿಗೇ ಮುಗ್ಧರಾದರು

ಆಮೇಲೆ ಅವರು ಸಂತೆಯಲಿ ತಮ್ಮವರ ಕಂಡಾಗ ಕೂಡ
ಉಭಯ ಕುಶಲೋಪರಿ ಮುಜುಗರದ ವಿಷಯ

ಎಜ್ರಾನ ಮುಖ ಒಂದು ಅಳಿವೆಯೆನ್ನುತ್ತಾರೆ
ಎಜ್ರಾನ ಮುಖ ಒಂದು ಒಡೆದ ಗದ್ದೆಯೆನ್ನುತ್ತಾರೆ

ಹಲವು ರೇಖೆಗಳಿರುವುದು ನಿಜ ಅದರಲ್ಲಿ
ಏನು ನೋಡುತ್ತಾನೆ ಅವನು ಗೋಡೆಯಲ್ಲಿ

ನಮಗೇನೂ ಕಾಣಿಸುವುದಿಲ್ಲ
ಬಹುಶಃ ಅದೊಂದು ನಿಗೂಢ ಲಿಪಿಯಲ್ಲಿ ಬರೆದ ಪ್ರಾಕ್ತನ ಕವಿತೆ
ಬಹುಶಃ ಅವನಿಗೂ ಅರ್ಥವಾಗುವುದಿಲ್ಲ ಅರ್ಥವಾದರೂ
ಅಂತರ ಬಹಳ ನಮ್ಮ ನಡುವೆ
ಅವನು ನೋಡುವ ದಿಕ್ಕು ನಾವು ನೋಡುವ ದಿಕ್ಕು
ಒಂದೆ ಆದರೂ
ಕಾಣುವುದರಲ್ಲಿ ಬಹಳ ವ್ಯತ್ಯಾಸವಿದೆ

ಮೊದಲೇ ಬಂದ ಎಜ್ರಾ
ನಮ್ಮ ಮಿತ್ರ ಅಥವಾ ವೈರಿ
ನಮಗೆ ಮರೆತಿದೆ ಅವನೂ
ನೆನಪಿಸುವುದಿಲ್ಲ
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...