Home / ಕವನ / ಕವಿತೆ / ಗೀತೆಯ ಹುಟ್ಟು

ಗೀತೆಯ ಹುಟ್ಟು

ಧರ್ಮಕ್ಷೇತ್ರದ ಭೂಮಿ
ಅಸಮ ಬಲ ಇಕ್ಕಡೆಯೊ-
ಳದಮಧ್ಯೆ ಗಂಭೀರ-ಶ್ರೀಕೃಷ್ಣನು.
ಕುರುಕ್ಷೇತ್ರ ಕುರುಸೇನೆ
ಕೌರವನ ರಣಘೋಷ-
ಸೇನಾನಿ ಫಲ್ಗುಣನು ಬಾಣಸಹಿತ.

ಕುರುಸೇನಾ ಕಡಲಲ್ಲಿ
ತೇಲುತಿಹ ಅರ್ಜುನನ
ರಥವೊಂದು-ಸಾರಥಿಯು ಶ್ರೀಕೃಷ್ಣನು;
ರೋಷ ಸಹನೆಯ ಮಧ್ಯೆ
ಬೇಕೊ ಬೇಡೆಂಬುದರ
ದ್ವಂದ್ವದಲಿ-ಜೀಕಲಾಡುತಯಿರ್ದುದು!

ಭಾರತದ ವಿಧಿನಿಯಮ-
ವನ್ನು ನಡೆಸುವ ಭರದಿ
ಸೇರಿರುವ ಪ್ರಶಾಂತ ಸೂರ್ಯೋದಯ
ಸೂರ್ಯಕಾಂತಿಯ ನಲ್ಮೆ
ಪಾರ್ಥಚಿತ್ರದ ಒಲ್ಮೆ
ಒಂದಾಗಿ ಸೇರಿದುವು ಕುರುಕ್ಷೇತ್ರದಿ.

ನೋಡಿದನು ಬಂಧುಗಳ,
ಗುರುಗಳನು ಹಿರಿಯರನು-
ಬೆಂದಮನ ಸಂತೈಸೆ ಚಕ್ರಧಾರಿ!
ಉಸುರಿದನು ಗೀತೆಯನು-
ವಿಶ್ವಯೋಗದ ಗುಟ್ಟು
ಬಿಚ್ಚಿದನು-ಅರ್ಜುನಗೆ ಅತಿಕಾಮಿಗೆ.

ಕೌರವನ ಹಠಯೋಗ
ಭಾರತದ ಬಲತ್ಯಾಗ-
ಕುರುಕ್ಷೇತ್ರ ಋಣಮುಕ್ತ ಧರ್ಮಕ್ಷೇತ್ರ!
ಗಂಭೀರ ಶಾಂತಿಯದು,
ಮೂಕವಾಗಿಹ ಸೇನೆ,
ರಥಗಾಲಿ ಸ್ತಬ್ಧತೆಯಿಂ ಗೀತಮಂತ್ರ!

ಕರ್ಮಯೋಗಿಯು ಕೃಷ್ಣ
ರಾಜಯೋಗಿಯು ಪಾರ್ಥ
‘ಕಿಂ ಕರ್ಮಾಕರ್ಮ’ಗಳ ವಾದಗಳಲಿ,
ಸತ್ವ ರಾಜಸ ತಮದ
ಹುಟ್ಟು ಸಾವಿನ ಬಲದ
ವಿಶ್ವರೂಪದ ಗೂಢ ರಹಸ್ಯಗಳನು.

ಚೊಕ್ಕ ಭಾಷೆಯ ಶ್ಲೋಕ,
ಪ್ರಶ್ನೆಗುತ್ತರ ಮಾತು-
ಏಸು ಸೊಗವೊ ಅವರ ಗುರುಶಿಷ್ಯತೆ!
ತುಂಬು ಕೂರ್ಮೆಯ ಮಾತು!
ಉಪನಿಷತ್ಕಲಶದ ಮಧುವು!
ವಿಶ್ವವ್ಯಾಪಿತ ವಾಣಿ-ಅಮರಗೀತೆ.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...