ಗೀತೆಯ ಹುಟ್ಟು

ಧರ್ಮಕ್ಷೇತ್ರದ ಭೂಮಿ
ಅಸಮ ಬಲ ಇಕ್ಕಡೆಯೊ-
ಳದಮಧ್ಯೆ ಗಂಭೀರ-ಶ್ರೀಕೃಷ್ಣನು.
ಕುರುಕ್ಷೇತ್ರ ಕುರುಸೇನೆ
ಕೌರವನ ರಣಘೋಷ-
ಸೇನಾನಿ ಫಲ್ಗುಣನು ಬಾಣಸಹಿತ.

ಕುರುಸೇನಾ ಕಡಲಲ್ಲಿ
ತೇಲುತಿಹ ಅರ್ಜುನನ
ರಥವೊಂದು-ಸಾರಥಿಯು ಶ್ರೀಕೃಷ್ಣನು;
ರೋಷ ಸಹನೆಯ ಮಧ್ಯೆ
ಬೇಕೊ ಬೇಡೆಂಬುದರ
ದ್ವಂದ್ವದಲಿ-ಜೀಕಲಾಡುತಯಿರ್ದುದು!

ಭಾರತದ ವಿಧಿನಿಯಮ-
ವನ್ನು ನಡೆಸುವ ಭರದಿ
ಸೇರಿರುವ ಪ್ರಶಾಂತ ಸೂರ್ಯೋದಯ
ಸೂರ್ಯಕಾಂತಿಯ ನಲ್ಮೆ
ಪಾರ್ಥಚಿತ್ರದ ಒಲ್ಮೆ
ಒಂದಾಗಿ ಸೇರಿದುವು ಕುರುಕ್ಷೇತ್ರದಿ.

ನೋಡಿದನು ಬಂಧುಗಳ,
ಗುರುಗಳನು ಹಿರಿಯರನು-
ಬೆಂದಮನ ಸಂತೈಸೆ ಚಕ್ರಧಾರಿ!
ಉಸುರಿದನು ಗೀತೆಯನು-
ವಿಶ್ವಯೋಗದ ಗುಟ್ಟು
ಬಿಚ್ಚಿದನು-ಅರ್ಜುನಗೆ ಅತಿಕಾಮಿಗೆ.

ಕೌರವನ ಹಠಯೋಗ
ಭಾರತದ ಬಲತ್ಯಾಗ-
ಕುರುಕ್ಷೇತ್ರ ಋಣಮುಕ್ತ ಧರ್ಮಕ್ಷೇತ್ರ!
ಗಂಭೀರ ಶಾಂತಿಯದು,
ಮೂಕವಾಗಿಹ ಸೇನೆ,
ರಥಗಾಲಿ ಸ್ತಬ್ಧತೆಯಿಂ ಗೀತಮಂತ್ರ!

ಕರ್ಮಯೋಗಿಯು ಕೃಷ್ಣ
ರಾಜಯೋಗಿಯು ಪಾರ್ಥ
‘ಕಿಂ ಕರ್ಮಾಕರ್ಮ’ಗಳ ವಾದಗಳಲಿ,
ಸತ್ವ ರಾಜಸ ತಮದ
ಹುಟ್ಟು ಸಾವಿನ ಬಲದ
ವಿಶ್ವರೂಪದ ಗೂಢ ರಹಸ್ಯಗಳನು.

ಚೊಕ್ಕ ಭಾಷೆಯ ಶ್ಲೋಕ,
ಪ್ರಶ್ನೆಗುತ್ತರ ಮಾತು-
ಏಸು ಸೊಗವೊ ಅವರ ಗುರುಶಿಷ್ಯತೆ!
ತುಂಬು ಕೂರ್ಮೆಯ ಮಾತು!
ಉಪನಿಷತ್ಕಲಶದ ಮಧುವು!
ವಿಶ್ವವ್ಯಾಪಿತ ವಾಣಿ-ಅಮರಗೀತೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏನಾಗಿದೆ ನನಗೆ?
Next post ಪೋಲೀ ಕಿಟ್ಟೀ

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…