Home / ಕವನ / ಕವಿತೆ / ಗೀತೆಯ ಹುಟ್ಟು

ಗೀತೆಯ ಹುಟ್ಟು

ಧರ್ಮಕ್ಷೇತ್ರದ ಭೂಮಿ
ಅಸಮ ಬಲ ಇಕ್ಕಡೆಯೊ-
ಳದಮಧ್ಯೆ ಗಂಭೀರ-ಶ್ರೀಕೃಷ್ಣನು.
ಕುರುಕ್ಷೇತ್ರ ಕುರುಸೇನೆ
ಕೌರವನ ರಣಘೋಷ-
ಸೇನಾನಿ ಫಲ್ಗುಣನು ಬಾಣಸಹಿತ.

ಕುರುಸೇನಾ ಕಡಲಲ್ಲಿ
ತೇಲುತಿಹ ಅರ್ಜುನನ
ರಥವೊಂದು-ಸಾರಥಿಯು ಶ್ರೀಕೃಷ್ಣನು;
ರೋಷ ಸಹನೆಯ ಮಧ್ಯೆ
ಬೇಕೊ ಬೇಡೆಂಬುದರ
ದ್ವಂದ್ವದಲಿ-ಜೀಕಲಾಡುತಯಿರ್ದುದು!

ಭಾರತದ ವಿಧಿನಿಯಮ-
ವನ್ನು ನಡೆಸುವ ಭರದಿ
ಸೇರಿರುವ ಪ್ರಶಾಂತ ಸೂರ್ಯೋದಯ
ಸೂರ್ಯಕಾಂತಿಯ ನಲ್ಮೆ
ಪಾರ್ಥಚಿತ್ರದ ಒಲ್ಮೆ
ಒಂದಾಗಿ ಸೇರಿದುವು ಕುರುಕ್ಷೇತ್ರದಿ.

ನೋಡಿದನು ಬಂಧುಗಳ,
ಗುರುಗಳನು ಹಿರಿಯರನು-
ಬೆಂದಮನ ಸಂತೈಸೆ ಚಕ್ರಧಾರಿ!
ಉಸುರಿದನು ಗೀತೆಯನು-
ವಿಶ್ವಯೋಗದ ಗುಟ್ಟು
ಬಿಚ್ಚಿದನು-ಅರ್ಜುನಗೆ ಅತಿಕಾಮಿಗೆ.

ಕೌರವನ ಹಠಯೋಗ
ಭಾರತದ ಬಲತ್ಯಾಗ-
ಕುರುಕ್ಷೇತ್ರ ಋಣಮುಕ್ತ ಧರ್ಮಕ್ಷೇತ್ರ!
ಗಂಭೀರ ಶಾಂತಿಯದು,
ಮೂಕವಾಗಿಹ ಸೇನೆ,
ರಥಗಾಲಿ ಸ್ತಬ್ಧತೆಯಿಂ ಗೀತಮಂತ್ರ!

ಕರ್ಮಯೋಗಿಯು ಕೃಷ್ಣ
ರಾಜಯೋಗಿಯು ಪಾರ್ಥ
‘ಕಿಂ ಕರ್ಮಾಕರ್ಮ’ಗಳ ವಾದಗಳಲಿ,
ಸತ್ವ ರಾಜಸ ತಮದ
ಹುಟ್ಟು ಸಾವಿನ ಬಲದ
ವಿಶ್ವರೂಪದ ಗೂಢ ರಹಸ್ಯಗಳನು.

ಚೊಕ್ಕ ಭಾಷೆಯ ಶ್ಲೋಕ,
ಪ್ರಶ್ನೆಗುತ್ತರ ಮಾತು-
ಏಸು ಸೊಗವೊ ಅವರ ಗುರುಶಿಷ್ಯತೆ!
ತುಂಬು ಕೂರ್ಮೆಯ ಮಾತು!
ಉಪನಿಷತ್ಕಲಶದ ಮಧುವು!
ವಿಶ್ವವ್ಯಾಪಿತ ವಾಣಿ-ಅಮರಗೀತೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...