Home / ಕವನ / ಕವಿತೆ / ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವ

ಮುಳುಗುತಿಹ ನೇಸರನು ಮುದಿಸಿಂಹನಂತಾಗಿ
ಪಶ್ಚಿಮಾದ್ರಿಯ ಗವಿಯ ಸೇರುತಿಹನು;
ತನ್ನ ಸರ್ವಾಧಿಕಾರತ್ವ ಕೊನೆಗೊಳ್ಳುತಿರೆ
ಲೋಗರೆಡೆ ಕೆಕ್ಕರಿಸಿ ನೋಡುತಿಹನು.

ಸಂಜೆ ಕಕ್ಕರಮಬ್ಬು ಗಗನ ಸಿಂಹಾಸನದಿ
ಕಪ್ಪು ಬಾವುಟವೆತ್ತಿ ತೋರಿಸಿಹುದು;
ಪಕ್ಷಿಸಂಕುಲ ಕೆಲೆದು ಬಿಡುಗಡೆಯ ಹಿಗ್ಗಿನಲಿ
ಹಾಡಿ ಜಯಜಯಕಾರ ಗೈಯುತಿಹುದು.

ಹಗಲ ಉರಿವಿಸಿಲ ಸಾಮ್ರಾಜ್ಯಶಾಹಿಯು ಉರುಳಿ
ಪಡುವ ಕಡಲಿನ ಹಡಗವೇರುತಿರಲು
ಸಂಧ್ಯಾಸಮೀರನದೊ ಸ್ವಾತಂತ್ರ್‍ಯಸಂದೇಶ
ಹೊತ್ತು ನಾಲ್ದೆಸೆಗಳಲಿ ಹರಡುತಿಹನು.

ಬಿತ್ತರದ ಬಾನಿನಲಿ ಮತ್ತೆ ಜನತಾ ರಾಜ್ಯ
ಮೆರೆಯುತಿದೆ ಚಿಕ್ಕೆಯ ಪ್ರಜಾಪ್ರಭುತ್ವ:
ವ್ಯಕ್ತಿಶಕ್ತಿಯ ಗುಣವಿಕಾಸ ಪ್ರಕಾಶದಲಿ
ಜಗವ ಬೆಳಗುವುದದರ ಮೂಲತತ್ವ.

ಆಕಾಶಗಂಗೆ ಶಾಸನ ಸಭೆಯನೇರ್ಪಡಿಸಿ
ಮಂತ್ರಿಮಂಡಲವನ್ನು ನಿರ್ಮಿಸಿಹುದು;
ಬುಧ ಬೃಹಸ್ಪತಿ ಶುಕ್ರ ಶನಿ ಮಂಗಳಾದ್ಯರನು
ವಿವಿಧ ಮಂತ್ರಿಗಳಾಗಿ ನೇಮಿಸಿಹುದು.

ಕೃತ್ತಿಕೆಯು ಮೃಗಶಿರವು ಸಪ್ತರ್ಷಿ ಮಂಡಲವು
ರಾಜಕೀಯದ ಪಕ್ಷಪಂಗಡವೆನೆ
ದಕ್ಷಿಣೋತ್ತರ ಧ್ರುವದ ರಾಯಭಾರಿತ್ವದಲಿ
ಮುಖ್ಯಮಂತ್ರಿಯು ಚಂದ್ರನಾಗಿರುವನೆ?

ಬಿಡುಗಡೆಯ ಸೌಭಾಗ್ಯ ಪಡೆದ ಬಾನಿನೊಳಿಂತು
ಶಾಂತಿ ಸಮದರ್ಶಿತ್ವ ತಂಪಿನಿರುಳು
ಬಡವ ಬಲ್ಲಿದರೆನದೆ ಸಮತೆಯಲಿ ತಣಿಸಿಹುದು
ಸರ್ವರಿಗು ಸಮಪಾಲು ಬೆಳದಿಂಗಳು.

***

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...