Home / ಕವನ / ಕವಿತೆ / ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವ

ಮುಳುಗುತಿಹ ನೇಸರನು ಮುದಿಸಿಂಹನಂತಾಗಿ
ಪಶ್ಚಿಮಾದ್ರಿಯ ಗವಿಯ ಸೇರುತಿಹನು;
ತನ್ನ ಸರ್ವಾಧಿಕಾರತ್ವ ಕೊನೆಗೊಳ್ಳುತಿರೆ
ಲೋಗರೆಡೆ ಕೆಕ್ಕರಿಸಿ ನೋಡುತಿಹನು.

ಸಂಜೆ ಕಕ್ಕರಮಬ್ಬು ಗಗನ ಸಿಂಹಾಸನದಿ
ಕಪ್ಪು ಬಾವುಟವೆತ್ತಿ ತೋರಿಸಿಹುದು;
ಪಕ್ಷಿಸಂಕುಲ ಕೆಲೆದು ಬಿಡುಗಡೆಯ ಹಿಗ್ಗಿನಲಿ
ಹಾಡಿ ಜಯಜಯಕಾರ ಗೈಯುತಿಹುದು.

ಹಗಲ ಉರಿವಿಸಿಲ ಸಾಮ್ರಾಜ್ಯಶಾಹಿಯು ಉರುಳಿ
ಪಡುವ ಕಡಲಿನ ಹಡಗವೇರುತಿರಲು
ಸಂಧ್ಯಾಸಮೀರನದೊ ಸ್ವಾತಂತ್ರ್‍ಯಸಂದೇಶ
ಹೊತ್ತು ನಾಲ್ದೆಸೆಗಳಲಿ ಹರಡುತಿಹನು.

ಬಿತ್ತರದ ಬಾನಿನಲಿ ಮತ್ತೆ ಜನತಾ ರಾಜ್ಯ
ಮೆರೆಯುತಿದೆ ಚಿಕ್ಕೆಯ ಪ್ರಜಾಪ್ರಭುತ್ವ:
ವ್ಯಕ್ತಿಶಕ್ತಿಯ ಗುಣವಿಕಾಸ ಪ್ರಕಾಶದಲಿ
ಜಗವ ಬೆಳಗುವುದದರ ಮೂಲತತ್ವ.

ಆಕಾಶಗಂಗೆ ಶಾಸನ ಸಭೆಯನೇರ್ಪಡಿಸಿ
ಮಂತ್ರಿಮಂಡಲವನ್ನು ನಿರ್ಮಿಸಿಹುದು;
ಬುಧ ಬೃಹಸ್ಪತಿ ಶುಕ್ರ ಶನಿ ಮಂಗಳಾದ್ಯರನು
ವಿವಿಧ ಮಂತ್ರಿಗಳಾಗಿ ನೇಮಿಸಿಹುದು.

ಕೃತ್ತಿಕೆಯು ಮೃಗಶಿರವು ಸಪ್ತರ್ಷಿ ಮಂಡಲವು
ರಾಜಕೀಯದ ಪಕ್ಷಪಂಗಡವೆನೆ
ದಕ್ಷಿಣೋತ್ತರ ಧ್ರುವದ ರಾಯಭಾರಿತ್ವದಲಿ
ಮುಖ್ಯಮಂತ್ರಿಯು ಚಂದ್ರನಾಗಿರುವನೆ?

ಬಿಡುಗಡೆಯ ಸೌಭಾಗ್ಯ ಪಡೆದ ಬಾನಿನೊಳಿಂತು
ಶಾಂತಿ ಸಮದರ್ಶಿತ್ವ ತಂಪಿನಿರುಳು
ಬಡವ ಬಲ್ಲಿದರೆನದೆ ಸಮತೆಯಲಿ ತಣಿಸಿಹುದು
ಸರ್ವರಿಗು ಸಮಪಾಲು ಬೆಳದಿಂಗಳು.

***

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...