Home / ಕವನ / ಕವಿತೆ / ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವ

ಮುಳುಗುತಿಹ ನೇಸರನು ಮುದಿಸಿಂಹನಂತಾಗಿ
ಪಶ್ಚಿಮಾದ್ರಿಯ ಗವಿಯ ಸೇರುತಿಹನು;
ತನ್ನ ಸರ್ವಾಧಿಕಾರತ್ವ ಕೊನೆಗೊಳ್ಳುತಿರೆ
ಲೋಗರೆಡೆ ಕೆಕ್ಕರಿಸಿ ನೋಡುತಿಹನು.

ಸಂಜೆ ಕಕ್ಕರಮಬ್ಬು ಗಗನ ಸಿಂಹಾಸನದಿ
ಕಪ್ಪು ಬಾವುಟವೆತ್ತಿ ತೋರಿಸಿಹುದು;
ಪಕ್ಷಿಸಂಕುಲ ಕೆಲೆದು ಬಿಡುಗಡೆಯ ಹಿಗ್ಗಿನಲಿ
ಹಾಡಿ ಜಯಜಯಕಾರ ಗೈಯುತಿಹುದು.

ಹಗಲ ಉರಿವಿಸಿಲ ಸಾಮ್ರಾಜ್ಯಶಾಹಿಯು ಉರುಳಿ
ಪಡುವ ಕಡಲಿನ ಹಡಗವೇರುತಿರಲು
ಸಂಧ್ಯಾಸಮೀರನದೊ ಸ್ವಾತಂತ್ರ್‍ಯಸಂದೇಶ
ಹೊತ್ತು ನಾಲ್ದೆಸೆಗಳಲಿ ಹರಡುತಿಹನು.

ಬಿತ್ತರದ ಬಾನಿನಲಿ ಮತ್ತೆ ಜನತಾ ರಾಜ್ಯ
ಮೆರೆಯುತಿದೆ ಚಿಕ್ಕೆಯ ಪ್ರಜಾಪ್ರಭುತ್ವ:
ವ್ಯಕ್ತಿಶಕ್ತಿಯ ಗುಣವಿಕಾಸ ಪ್ರಕಾಶದಲಿ
ಜಗವ ಬೆಳಗುವುದದರ ಮೂಲತತ್ವ.

ಆಕಾಶಗಂಗೆ ಶಾಸನ ಸಭೆಯನೇರ್ಪಡಿಸಿ
ಮಂತ್ರಿಮಂಡಲವನ್ನು ನಿರ್ಮಿಸಿಹುದು;
ಬುಧ ಬೃಹಸ್ಪತಿ ಶುಕ್ರ ಶನಿ ಮಂಗಳಾದ್ಯರನು
ವಿವಿಧ ಮಂತ್ರಿಗಳಾಗಿ ನೇಮಿಸಿಹುದು.

ಕೃತ್ತಿಕೆಯು ಮೃಗಶಿರವು ಸಪ್ತರ್ಷಿ ಮಂಡಲವು
ರಾಜಕೀಯದ ಪಕ್ಷಪಂಗಡವೆನೆ
ದಕ್ಷಿಣೋತ್ತರ ಧ್ರುವದ ರಾಯಭಾರಿತ್ವದಲಿ
ಮುಖ್ಯಮಂತ್ರಿಯು ಚಂದ್ರನಾಗಿರುವನೆ?

ಬಿಡುಗಡೆಯ ಸೌಭಾಗ್ಯ ಪಡೆದ ಬಾನಿನೊಳಿಂತು
ಶಾಂತಿ ಸಮದರ್ಶಿತ್ವ ತಂಪಿನಿರುಳು
ಬಡವ ಬಲ್ಲಿದರೆನದೆ ಸಮತೆಯಲಿ ತಣಿಸಿಹುದು
ಸರ್ವರಿಗು ಸಮಪಾಲು ಬೆಳದಿಂಗಳು.

***

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ