Home / ಕವನ / ಕವಿತೆ / ಕಟ್ಟುತ್ತಿರುವೆನು ಮಂದಿರವನ್ನು

ಕಟ್ಟುತ್ತಿರುವೆನು ಮಂದಿರವನ್ನು

ಕಟ್ಟುತ್ತಿರುವೆನು ಮಂದಿರವನ್ನು
ಎದೆಯ ಗೂಡಿನಲ್ಲಿ
ರಾಮ ರಹೀಮ ಕ್ರಿಸ್ತ ಅಲ್ಲಮ
ಎಲ್ಲರಿರುವರಲ್ಲಿ ||

ಆಂಜನೇಯನಿಗೂ ಏಸುಕ್ರಿಸ್ತನಿಗೂ
ಬಹಳ ನ್ಯಾಸ್ತವಿಲ್ಲಿ
ಬುದ್ಧ ನಾನಕ ಮಹಾವೀರರು
ಇವರ ಸ್ನೇಹದಲ್ಲಿ

ರಾಮ ಪವಡಿಸಿಹ ಮಸೀದಿಯಲ್ಲಿ
ಕ್ರಿಸ್ತನಾ ಕೋಣೆಯಲ್ಲಿ
ಇದಕೆ ಹೆಸರುಗಳು ಇಗರ್ಜಿ ಬಸದಿ
ನೂರು ಭಾಷೆಯಲ್ಲಿ

ಇಲ್ಲಿಯ ರಾಮ ನುಡಿವನು ಉರ್ದು
ಅಲ್ಲಾ ಸಂಸ್ಕೃತ ಬಲ್ಲ
ಕ್ರಿಸ್ತನಿಗೊ ತೆಲುಗೆಂದರೆ ಪ್ರೀತಿ
ಕನ್ನಡವಿಲ್ಲದೆ ಇಲ್ಲ

ಎಲ್ಲಾ ದೇವರು ಕ್ರಿಕೇಟಾಡುವರು
ಸೋಲು ಗೆಲುವು ಕ್ಷಣಿಕ
ಕಡೆಗೆ ಮಬ್ಬಲಿ ಒಂದೆ ಕ್ಲಬ್ಬಲಿ
ತೋರ್‍ವರೆಲ್ಲ ಪುಲಕ

ಜುಟ್ಟುಗಳಿದ್ದರೆ ಜುಟ್ಟೆಳೆದಾಟ
ಗಡ್ಡಗಳಿದ್ದರೆ ಮುಂಭಾರ
ದೇಹಕೆ ಭಾರ ಆ ಶಿವದಾರ
ಕಡಿಮೆಯಲ್ಲ ಜನಿವಾರ!

ಅವನು ಹೇಳುವನು ಕಿರೀಟ ಭಾರ
ಇವನಿಗೊ ಟೋಪಿಯು ಭಾರ
ಎಲ್ಲರು ಹಾರೈಸಿಹರು ಕ್ರಿಸ್ತಗೆ
ಶಿಲುಬೆಯಿಂದ ಪರಿಹಾರ

ಎಲ್ಲ ಚಾನೆಲಲಿ ಮತ ಮೌಢ್ಯಗಳು
ವಿಜ್ಞಾನಕೆ ಇದು ಥರವೇ
ಕಡೆಗೆ ನಮ್ಮನೂ ಎಳೆದು ತರುವಿರಿ
ನಿಮಗೆ ಇದು ಭೂಷಣವೇ

ಎದೆಯ ಗೂಡಿನಲಿ ರಾಮ ಅಳುವನು
ಪರಿವಾರದ ಜತೆಗೂಡಿ
ತಾಯಿಯ ಗರ್ಭವ ದಾಟಿದ ತಪ್ಪಿಗೆ
ಪ್ರಾಣಿ ಪಕ್ಷಿಗಳ ಕೂಡಿ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...