ಅಮೃತ ಹಸ್ತ

ಭೂಮಿ ಆ ಅಡಿಗಲ್ಲುಗಳನ್ನು ಎಷ್ಟೋ ದಿನಗಳಿಂದ ನೋಡುತ್ತಲೇ ಇತ್ತು.  ಶಾಲೆ, ಹಾಸ್ಟಲ್ಲು, ಆಸ್ಪತ್ರೆ, ಮಾರ್ಕೆಟ್ಟು, ಕಾಂಪ್ಲೆಕ್ಸ್, ಸಮುದಾಯ ಭವನಗಳ ನಿರ್ಮಾಣಕ್ಕೆಂದು ಶಾಸಕರು, ಸಂಸದರು, ಮಂತ್ರಿಗಳು ಸಂಭ್ರಮದಿಂದ ಅನಾವರಣ ಮಾಡಿದ ಅಡಿಗಲ್ಲುಗಳನ್ನು ಭೂಮಿ ಸಂತೋಷದಿಂದಲೇ ಗಮನಿಸಿತ್ತು.  ಆಗೆಲ್ಲಾ ಅತ್ಯಂತ ಉತ್ಸಾಹದಿಂದ ಬೀಗಿಕೊಂಡಿದ್ದ ಅಡಿಗಲ್ಲುಗಳು ದಿನಗಳೆದಂತೆ ಅನಾಥ ಪ್ರಜ್ಞೆಯಿಂದ ನರಳತೊಡಗಿದ್ದವು.

ಋತುಮಾನದ ವೈಪರೀತ್ಯಗಳಿಗೆ ಸಿಕ್ಕು ಕೆಲವು ಅಡಿಗಲ್ಲಗಳು ಸೊರಗಿದ್ದರೆ ಇನ್ನೂ ಕೆಲವು ವಿಧ್ವಂಸಕರ ದಾಳಿಗೆ ಸಿಕ್ಕು ವಿರೂಪಗೊಂಡಿದ್ದವು.  ಅವುಗಳಿಗೆ ಆಧಾರವಾಗಿದ್ದ ಗೋಡೆಗಳು ಕುಸಿದು ಹೋಗಿದ್ದವು.  ಅಸ್ತಿತ್ವಕ್ಕಾಗಿ ಚಡಪಡಿಸುತ್ತ ಅವಶೇಷಗಳಂತೆ ನಿಂತಿರುವ ಅಡಿಗಲ್ಲುಗಳಿಗೆ ದನಕರುಗಳು ಮೈತಿಕ್ಕಿ ತಮ್ಮ ತುರಿಕೆಯನ್ನು ಶಮನಗೊಳಿಸಿಕೊಳ್ಳುತ್ತಿದ್ದವು.  ನಾಯಿಗಳು ಆರಾಮಾಗಿ ಬಂದು ಉಚ್ಚೆ ಹೊಯ್ದರೆ, ಕಾಗೆಗಳು ಮಲ ವಿಸರ್ಜಿಸುತ್ತಿದ್ದವು.

ಅದನ್ನೆಲ್ಲವನ್ನು ಮೌನವಾಗಿ ಅನುಭವಿಸುತ್ತಿರುವ ಅಡಿಗಲ್ಲುಗಳನ್ನು ಕಂಡು ಭೂಮಿ ಒಂದಿನ “ಅಡಿಗಲ್ಲುಗಳೇ, ಏನಿದು ನಿಮ್ಮ ಅವಸ್ಥೆ?  ನಿಮ್ಮ ಸ್ಥಿತಿ ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ” ಎಂದು ಮರುಕ ವ್ಯಕ್ತಪಡಿಸಿತು.

“ನಮ್ಮ ಹಣೆಯ ಬರಹ ಇದು.  ಎನು ಮಾಡುವುದು?”  ಅಡಿಗಲ್ಲು ತಹತಹಿಸಿದ್ದವು.

“ಬಹಳ ವರ್ಷಗಳ ಹಿಂದೆಯೇ ನೀವು ಭವ್ಯ ಕಟ್ಟಡಗಳ ಭಿತ್ತಿಗಳಲ್ಲಿ ಕಂಗೊಳಿಸಬೇಕಾಗಿತ್ತು.”

“ದೇವರು ನಮಗೆ ಅಂಥ ಭಾಗ್ಯ ನೀಡಲಿಲ್ಲ.”

“ನೀವು ಶಾಸನ ಪ್ರಭುಗಳ ಅಮೃತಹಸ್ತಗಳಿಂದ ಪ್ರತಿಪ್ಠಾಪನೆಗೊಂಡಿದ್ದೀರಿ” ಅಭಿಮಾನ ವ್ಯಕ್ತಪಡಿಸಿತು ಭೂಮಿ.

“ಹೌದು, ನಾವು ಶಾಪಗ್ರಸ್ಥರಾಗಿ ಇಲ್ಲಿ ಬಿದ್ದಿರುವುದಕ್ಕೆ ರಾಜಕಾರಣಿಗಳಮೃತಹಸ್ತಗಳೇ ಕಾರಣ” ನಿಟ್ಟುಸಿರಿದವು ಅಡಿಗಲ್ಲು.

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೧೯
Next post ಅಂತರಂಗ

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…