Home / ಕಥೆ / ಕಿರು ಕಥೆ / ಅಮೃತ ಹಸ್ತ

ಅಮೃತ ಹಸ್ತ

ಭೂಮಿ ಆ ಅಡಿಗಲ್ಲುಗಳನ್ನು ಎಷ್ಟೋ ದಿನಗಳಿಂದ ನೋಡುತ್ತಲೇ ಇತ್ತು.  ಶಾಲೆ, ಹಾಸ್ಟಲ್ಲು, ಆಸ್ಪತ್ರೆ, ಮಾರ್ಕೆಟ್ಟು, ಕಾಂಪ್ಲೆಕ್ಸ್, ಸಮುದಾಯ ಭವನಗಳ ನಿರ್ಮಾಣಕ್ಕೆಂದು ಶಾಸಕರು, ಸಂಸದರು, ಮಂತ್ರಿಗಳು ಸಂಭ್ರಮದಿಂದ ಅನಾವರಣ ಮಾಡಿದ ಅಡಿಗಲ್ಲುಗಳನ್ನು ಭೂಮಿ ಸಂತೋಷದಿಂದಲೇ ಗಮನಿಸಿತ್ತು.  ಆಗೆಲ್ಲಾ ಅತ್ಯಂತ ಉತ್ಸಾಹದಿಂದ ಬೀಗಿಕೊಂಡಿದ್ದ ಅಡಿಗಲ್ಲುಗಳು ದಿನಗಳೆದಂತೆ ಅನಾಥ ಪ್ರಜ್ಞೆಯಿಂದ ನರಳತೊಡಗಿದ್ದವು.

ಋತುಮಾನದ ವೈಪರೀತ್ಯಗಳಿಗೆ ಸಿಕ್ಕು ಕೆಲವು ಅಡಿಗಲ್ಲಗಳು ಸೊರಗಿದ್ದರೆ ಇನ್ನೂ ಕೆಲವು ವಿಧ್ವಂಸಕರ ದಾಳಿಗೆ ಸಿಕ್ಕು ವಿರೂಪಗೊಂಡಿದ್ದವು.  ಅವುಗಳಿಗೆ ಆಧಾರವಾಗಿದ್ದ ಗೋಡೆಗಳು ಕುಸಿದು ಹೋಗಿದ್ದವು.  ಅಸ್ತಿತ್ವಕ್ಕಾಗಿ ಚಡಪಡಿಸುತ್ತ ಅವಶೇಷಗಳಂತೆ ನಿಂತಿರುವ ಅಡಿಗಲ್ಲುಗಳಿಗೆ ದನಕರುಗಳು ಮೈತಿಕ್ಕಿ ತಮ್ಮ ತುರಿಕೆಯನ್ನು ಶಮನಗೊಳಿಸಿಕೊಳ್ಳುತ್ತಿದ್ದವು.  ನಾಯಿಗಳು ಆರಾಮಾಗಿ ಬಂದು ಉಚ್ಚೆ ಹೊಯ್ದರೆ, ಕಾಗೆಗಳು ಮಲ ವಿಸರ್ಜಿಸುತ್ತಿದ್ದವು.

ಅದನ್ನೆಲ್ಲವನ್ನು ಮೌನವಾಗಿ ಅನುಭವಿಸುತ್ತಿರುವ ಅಡಿಗಲ್ಲುಗಳನ್ನು ಕಂಡು ಭೂಮಿ ಒಂದಿನ “ಅಡಿಗಲ್ಲುಗಳೇ, ಏನಿದು ನಿಮ್ಮ ಅವಸ್ಥೆ?  ನಿಮ್ಮ ಸ್ಥಿತಿ ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ” ಎಂದು ಮರುಕ ವ್ಯಕ್ತಪಡಿಸಿತು.

“ನಮ್ಮ ಹಣೆಯ ಬರಹ ಇದು.  ಎನು ಮಾಡುವುದು?”  ಅಡಿಗಲ್ಲು ತಹತಹಿಸಿದ್ದವು.

“ಬಹಳ ವರ್ಷಗಳ ಹಿಂದೆಯೇ ನೀವು ಭವ್ಯ ಕಟ್ಟಡಗಳ ಭಿತ್ತಿಗಳಲ್ಲಿ ಕಂಗೊಳಿಸಬೇಕಾಗಿತ್ತು.”

“ದೇವರು ನಮಗೆ ಅಂಥ ಭಾಗ್ಯ ನೀಡಲಿಲ್ಲ.”

“ನೀವು ಶಾಸನ ಪ್ರಭುಗಳ ಅಮೃತಹಸ್ತಗಳಿಂದ ಪ್ರತಿಪ್ಠಾಪನೆಗೊಂಡಿದ್ದೀರಿ” ಅಭಿಮಾನ ವ್ಯಕ್ತಪಡಿಸಿತು ಭೂಮಿ.

“ಹೌದು, ನಾವು ಶಾಪಗ್ರಸ್ಥರಾಗಿ ಇಲ್ಲಿ ಬಿದ್ದಿರುವುದಕ್ಕೆ ರಾಜಕಾರಣಿಗಳಮೃತಹಸ್ತಗಳೇ ಕಾರಣ” ನಿಟ್ಟುಸಿರಿದವು ಅಡಿಗಲ್ಲು.

*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...