Home / ಕಥೆ / ಕಿರು ಕಥೆ / ಅಮೃತ ಹಸ್ತ

ಅಮೃತ ಹಸ್ತ

ಭೂಮಿ ಆ ಅಡಿಗಲ್ಲುಗಳನ್ನು ಎಷ್ಟೋ ದಿನಗಳಿಂದ ನೋಡುತ್ತಲೇ ಇತ್ತು.  ಶಾಲೆ, ಹಾಸ್ಟಲ್ಲು, ಆಸ್ಪತ್ರೆ, ಮಾರ್ಕೆಟ್ಟು, ಕಾಂಪ್ಲೆಕ್ಸ್, ಸಮುದಾಯ ಭವನಗಳ ನಿರ್ಮಾಣಕ್ಕೆಂದು ಶಾಸಕರು, ಸಂಸದರು, ಮಂತ್ರಿಗಳು ಸಂಭ್ರಮದಿಂದ ಅನಾವರಣ ಮಾಡಿದ ಅಡಿಗಲ್ಲುಗಳನ್ನು ಭೂಮಿ ಸಂತೋಷದಿಂದಲೇ ಗಮನಿಸಿತ್ತು.  ಆಗೆಲ್ಲಾ ಅತ್ಯಂತ ಉತ್ಸಾಹದಿಂದ ಬೀಗಿಕೊಂಡಿದ್ದ ಅಡಿಗಲ್ಲುಗಳು ದಿನಗಳೆದಂತೆ ಅನಾಥ ಪ್ರಜ್ಞೆಯಿಂದ ನರಳತೊಡಗಿದ್ದವು.

ಋತುಮಾನದ ವೈಪರೀತ್ಯಗಳಿಗೆ ಸಿಕ್ಕು ಕೆಲವು ಅಡಿಗಲ್ಲಗಳು ಸೊರಗಿದ್ದರೆ ಇನ್ನೂ ಕೆಲವು ವಿಧ್ವಂಸಕರ ದಾಳಿಗೆ ಸಿಕ್ಕು ವಿರೂಪಗೊಂಡಿದ್ದವು.  ಅವುಗಳಿಗೆ ಆಧಾರವಾಗಿದ್ದ ಗೋಡೆಗಳು ಕುಸಿದು ಹೋಗಿದ್ದವು.  ಅಸ್ತಿತ್ವಕ್ಕಾಗಿ ಚಡಪಡಿಸುತ್ತ ಅವಶೇಷಗಳಂತೆ ನಿಂತಿರುವ ಅಡಿಗಲ್ಲುಗಳಿಗೆ ದನಕರುಗಳು ಮೈತಿಕ್ಕಿ ತಮ್ಮ ತುರಿಕೆಯನ್ನು ಶಮನಗೊಳಿಸಿಕೊಳ್ಳುತ್ತಿದ್ದವು.  ನಾಯಿಗಳು ಆರಾಮಾಗಿ ಬಂದು ಉಚ್ಚೆ ಹೊಯ್ದರೆ, ಕಾಗೆಗಳು ಮಲ ವಿಸರ್ಜಿಸುತ್ತಿದ್ದವು.

ಅದನ್ನೆಲ್ಲವನ್ನು ಮೌನವಾಗಿ ಅನುಭವಿಸುತ್ತಿರುವ ಅಡಿಗಲ್ಲುಗಳನ್ನು ಕಂಡು ಭೂಮಿ ಒಂದಿನ “ಅಡಿಗಲ್ಲುಗಳೇ, ಏನಿದು ನಿಮ್ಮ ಅವಸ್ಥೆ?  ನಿಮ್ಮ ಸ್ಥಿತಿ ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ” ಎಂದು ಮರುಕ ವ್ಯಕ್ತಪಡಿಸಿತು.

“ನಮ್ಮ ಹಣೆಯ ಬರಹ ಇದು.  ಎನು ಮಾಡುವುದು?”  ಅಡಿಗಲ್ಲು ತಹತಹಿಸಿದ್ದವು.

“ಬಹಳ ವರ್ಷಗಳ ಹಿಂದೆಯೇ ನೀವು ಭವ್ಯ ಕಟ್ಟಡಗಳ ಭಿತ್ತಿಗಳಲ್ಲಿ ಕಂಗೊಳಿಸಬೇಕಾಗಿತ್ತು.”

“ದೇವರು ನಮಗೆ ಅಂಥ ಭಾಗ್ಯ ನೀಡಲಿಲ್ಲ.”

“ನೀವು ಶಾಸನ ಪ್ರಭುಗಳ ಅಮೃತಹಸ್ತಗಳಿಂದ ಪ್ರತಿಪ್ಠಾಪನೆಗೊಂಡಿದ್ದೀರಿ” ಅಭಿಮಾನ ವ್ಯಕ್ತಪಡಿಸಿತು ಭೂಮಿ.

“ಹೌದು, ನಾವು ಶಾಪಗ್ರಸ್ಥರಾಗಿ ಇಲ್ಲಿ ಬಿದ್ದಿರುವುದಕ್ಕೆ ರಾಜಕಾರಣಿಗಳಮೃತಹಸ್ತಗಳೇ ಕಾರಣ” ನಿಟ್ಟುಸಿರಿದವು ಅಡಿಗಲ್ಲು.

*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...