Home / ಕಥೆ / ಕಿರು ಕಥೆ / ಅಮೃತ ಹಸ್ತ

ಅಮೃತ ಹಸ್ತ

ಭೂಮಿ ಆ ಅಡಿಗಲ್ಲುಗಳನ್ನು ಎಷ್ಟೋ ದಿನಗಳಿಂದ ನೋಡುತ್ತಲೇ ಇತ್ತು.  ಶಾಲೆ, ಹಾಸ್ಟಲ್ಲು, ಆಸ್ಪತ್ರೆ, ಮಾರ್ಕೆಟ್ಟು, ಕಾಂಪ್ಲೆಕ್ಸ್, ಸಮುದಾಯ ಭವನಗಳ ನಿರ್ಮಾಣಕ್ಕೆಂದು ಶಾಸಕರು, ಸಂಸದರು, ಮಂತ್ರಿಗಳು ಸಂಭ್ರಮದಿಂದ ಅನಾವರಣ ಮಾಡಿದ ಅಡಿಗಲ್ಲುಗಳನ್ನು ಭೂಮಿ ಸಂತೋಷದಿಂದಲೇ ಗಮನಿಸಿತ್ತು.  ಆಗೆಲ್ಲಾ ಅತ್ಯಂತ ಉತ್ಸಾಹದಿಂದ ಬೀಗಿಕೊಂಡಿದ್ದ ಅಡಿಗಲ್ಲುಗಳು ದಿನಗಳೆದಂತೆ ಅನಾಥ ಪ್ರಜ್ಞೆಯಿಂದ ನರಳತೊಡಗಿದ್ದವು.

ಋತುಮಾನದ ವೈಪರೀತ್ಯಗಳಿಗೆ ಸಿಕ್ಕು ಕೆಲವು ಅಡಿಗಲ್ಲಗಳು ಸೊರಗಿದ್ದರೆ ಇನ್ನೂ ಕೆಲವು ವಿಧ್ವಂಸಕರ ದಾಳಿಗೆ ಸಿಕ್ಕು ವಿರೂಪಗೊಂಡಿದ್ದವು.  ಅವುಗಳಿಗೆ ಆಧಾರವಾಗಿದ್ದ ಗೋಡೆಗಳು ಕುಸಿದು ಹೋಗಿದ್ದವು.  ಅಸ್ತಿತ್ವಕ್ಕಾಗಿ ಚಡಪಡಿಸುತ್ತ ಅವಶೇಷಗಳಂತೆ ನಿಂತಿರುವ ಅಡಿಗಲ್ಲುಗಳಿಗೆ ದನಕರುಗಳು ಮೈತಿಕ್ಕಿ ತಮ್ಮ ತುರಿಕೆಯನ್ನು ಶಮನಗೊಳಿಸಿಕೊಳ್ಳುತ್ತಿದ್ದವು.  ನಾಯಿಗಳು ಆರಾಮಾಗಿ ಬಂದು ಉಚ್ಚೆ ಹೊಯ್ದರೆ, ಕಾಗೆಗಳು ಮಲ ವಿಸರ್ಜಿಸುತ್ತಿದ್ದವು.

ಅದನ್ನೆಲ್ಲವನ್ನು ಮೌನವಾಗಿ ಅನುಭವಿಸುತ್ತಿರುವ ಅಡಿಗಲ್ಲುಗಳನ್ನು ಕಂಡು ಭೂಮಿ ಒಂದಿನ “ಅಡಿಗಲ್ಲುಗಳೇ, ಏನಿದು ನಿಮ್ಮ ಅವಸ್ಥೆ?  ನಿಮ್ಮ ಸ್ಥಿತಿ ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ” ಎಂದು ಮರುಕ ವ್ಯಕ್ತಪಡಿಸಿತು.

“ನಮ್ಮ ಹಣೆಯ ಬರಹ ಇದು.  ಎನು ಮಾಡುವುದು?”  ಅಡಿಗಲ್ಲು ತಹತಹಿಸಿದ್ದವು.

“ಬಹಳ ವರ್ಷಗಳ ಹಿಂದೆಯೇ ನೀವು ಭವ್ಯ ಕಟ್ಟಡಗಳ ಭಿತ್ತಿಗಳಲ್ಲಿ ಕಂಗೊಳಿಸಬೇಕಾಗಿತ್ತು.”

“ದೇವರು ನಮಗೆ ಅಂಥ ಭಾಗ್ಯ ನೀಡಲಿಲ್ಲ.”

“ನೀವು ಶಾಸನ ಪ್ರಭುಗಳ ಅಮೃತಹಸ್ತಗಳಿಂದ ಪ್ರತಿಪ್ಠಾಪನೆಗೊಂಡಿದ್ದೀರಿ” ಅಭಿಮಾನ ವ್ಯಕ್ತಪಡಿಸಿತು ಭೂಮಿ.

“ಹೌದು, ನಾವು ಶಾಪಗ್ರಸ್ಥರಾಗಿ ಇಲ್ಲಿ ಬಿದ್ದಿರುವುದಕ್ಕೆ ರಾಜಕಾರಣಿಗಳಮೃತಹಸ್ತಗಳೇ ಕಾರಣ” ನಿಟ್ಟುಸಿರಿದವು ಅಡಿಗಲ್ಲು.

*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...