Home / ಕಥೆ / ಕಿರು ಕಥೆ / ಅಮೃತ ಹಸ್ತ

ಅಮೃತ ಹಸ್ತ

ಭೂಮಿ ಆ ಅಡಿಗಲ್ಲುಗಳನ್ನು ಎಷ್ಟೋ ದಿನಗಳಿಂದ ನೋಡುತ್ತಲೇ ಇತ್ತು.  ಶಾಲೆ, ಹಾಸ್ಟಲ್ಲು, ಆಸ್ಪತ್ರೆ, ಮಾರ್ಕೆಟ್ಟು, ಕಾಂಪ್ಲೆಕ್ಸ್, ಸಮುದಾಯ ಭವನಗಳ ನಿರ್ಮಾಣಕ್ಕೆಂದು ಶಾಸಕರು, ಸಂಸದರು, ಮಂತ್ರಿಗಳು ಸಂಭ್ರಮದಿಂದ ಅನಾವರಣ ಮಾಡಿದ ಅಡಿಗಲ್ಲುಗಳನ್ನು ಭೂಮಿ ಸಂತೋಷದಿಂದಲೇ ಗಮನಿಸಿತ್ತು.  ಆಗೆಲ್ಲಾ ಅತ್ಯಂತ ಉತ್ಸಾಹದಿಂದ ಬೀಗಿಕೊಂಡಿದ್ದ ಅಡಿಗಲ್ಲುಗಳು ದಿನಗಳೆದಂತೆ ಅನಾಥ ಪ್ರಜ್ಞೆಯಿಂದ ನರಳತೊಡಗಿದ್ದವು.

ಋತುಮಾನದ ವೈಪರೀತ್ಯಗಳಿಗೆ ಸಿಕ್ಕು ಕೆಲವು ಅಡಿಗಲ್ಲಗಳು ಸೊರಗಿದ್ದರೆ ಇನ್ನೂ ಕೆಲವು ವಿಧ್ವಂಸಕರ ದಾಳಿಗೆ ಸಿಕ್ಕು ವಿರೂಪಗೊಂಡಿದ್ದವು.  ಅವುಗಳಿಗೆ ಆಧಾರವಾಗಿದ್ದ ಗೋಡೆಗಳು ಕುಸಿದು ಹೋಗಿದ್ದವು.  ಅಸ್ತಿತ್ವಕ್ಕಾಗಿ ಚಡಪಡಿಸುತ್ತ ಅವಶೇಷಗಳಂತೆ ನಿಂತಿರುವ ಅಡಿಗಲ್ಲುಗಳಿಗೆ ದನಕರುಗಳು ಮೈತಿಕ್ಕಿ ತಮ್ಮ ತುರಿಕೆಯನ್ನು ಶಮನಗೊಳಿಸಿಕೊಳ್ಳುತ್ತಿದ್ದವು.  ನಾಯಿಗಳು ಆರಾಮಾಗಿ ಬಂದು ಉಚ್ಚೆ ಹೊಯ್ದರೆ, ಕಾಗೆಗಳು ಮಲ ವಿಸರ್ಜಿಸುತ್ತಿದ್ದವು.

ಅದನ್ನೆಲ್ಲವನ್ನು ಮೌನವಾಗಿ ಅನುಭವಿಸುತ್ತಿರುವ ಅಡಿಗಲ್ಲುಗಳನ್ನು ಕಂಡು ಭೂಮಿ ಒಂದಿನ “ಅಡಿಗಲ್ಲುಗಳೇ, ಏನಿದು ನಿಮ್ಮ ಅವಸ್ಥೆ?  ನಿಮ್ಮ ಸ್ಥಿತಿ ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ” ಎಂದು ಮರುಕ ವ್ಯಕ್ತಪಡಿಸಿತು.

“ನಮ್ಮ ಹಣೆಯ ಬರಹ ಇದು.  ಎನು ಮಾಡುವುದು?”  ಅಡಿಗಲ್ಲು ತಹತಹಿಸಿದ್ದವು.

“ಬಹಳ ವರ್ಷಗಳ ಹಿಂದೆಯೇ ನೀವು ಭವ್ಯ ಕಟ್ಟಡಗಳ ಭಿತ್ತಿಗಳಲ್ಲಿ ಕಂಗೊಳಿಸಬೇಕಾಗಿತ್ತು.”

“ದೇವರು ನಮಗೆ ಅಂಥ ಭಾಗ್ಯ ನೀಡಲಿಲ್ಲ.”

“ನೀವು ಶಾಸನ ಪ್ರಭುಗಳ ಅಮೃತಹಸ್ತಗಳಿಂದ ಪ್ರತಿಪ್ಠಾಪನೆಗೊಂಡಿದ್ದೀರಿ” ಅಭಿಮಾನ ವ್ಯಕ್ತಪಡಿಸಿತು ಭೂಮಿ.

“ಹೌದು, ನಾವು ಶಾಪಗ್ರಸ್ಥರಾಗಿ ಇಲ್ಲಿ ಬಿದ್ದಿರುವುದಕ್ಕೆ ರಾಜಕಾರಣಿಗಳಮೃತಹಸ್ತಗಳೇ ಕಾರಣ” ನಿಟ್ಟುಸಿರಿದವು ಅಡಿಗಲ್ಲು.

*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...