Home / ಕಥೆ / ಜನಪದ / ಕೊರವಂಜಿಯ ಕಲೆ

ಕೊರವಂಜಿಯ ಕಲೆ

ಅಣ್ಣನ ಮಗಳನ್ನು ಅಕ್ಕರೆಯಿಂದ ಮಗನಿಗೆ ತೆಗೆದುಕೊಂಡು ಮದುವೆಮಾಡಿದ್ದಳು, ನೀಲಗಂಗಮ್ಮ. ಆದರೆ ಮಗನು ಮನೆಗೇ ಹತ್ತಲೊಲ್ಲನಾದನು. ಹೊರಗಿನಿಂದ ಹೊರಗೇ ಇರತೊಡಗಿದನು.

ಬಾಳೆಯ ಬನದಲ್ಲಿ ಮಗನು ಚಂಡಾಡುತ್ತಿರುವನೆಂಬ ಸುದ್ದಿ ಕೇಳಿ ತಾಯಿ ಅಲ್ಲಿಗೆ ಹೋಗಿ ಮಗನನ್ನು ಕೇಳಿಕೊಂಡಳು . “ನನ್ನ ಸೊಸೆ ಬಾಳೆಗಿಂತ ಚಲುವೆಯಾಗಿದ್ದಾಳೆ. ಒಂದು ಸಾರೆ ಮನೆಗೆ ಬಂದು ಮುಖ ತೋರಿಸು.”

“ಬಾಳೆಗಿಂತ ಚಲುವೆಯಾದರೆ ಭಾವಿಯಲ್ಲಿ ನುಗಿಸು. ಇಲ್ಲವೆ ಉಟ್ಟಬಟ್ಟಿ ಕಳಕೊಂಡು ತವರುಮನೆಗೆ ಕಳಿಸು.  ನಾನು ನನಗೆ ತಿಳಿದಂತೆ ವರ್ತಿಸುವೆನು” ಎಂಬುದು ಮಗನ ಮರುನುಡಿ.

ಇನ್ನೊಂದು ಸಾರೆ, ಮಗನು ನಿಂಬಿಯ ಬನದಲ್ಲಿ ಚೆಂಡಾಡುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗಿ . “ನಿಂಬೆಗಿಂತ ನನ್ನ ಸೊಸೆ ಚೆಲುವೆಯಾಗಿದ್ದಾಳೆ ಒಂದೇ ಸಲ ಮನೆಗೆ ಬಂದು ಮೊಗದೋರು” ಎಂದು ಅಂಗಲಾಚಿದಳು.

ಕಟ್ಟಿಗೆ ಮುರಿದು ಕೈಗೆ ಕೊಟ್ಟಂತೆ ಮಗನು ಮರುನುಡಿದನು . “ನಿಂಬೆಗಿಂತ ಚೆಲುವೆಯಾಗಿದ್ದರೆ ಆಕೆಯನ್ನು ಬಾವಿಗೆ ನೂಕು. ಇಲ್ಲವೆ ಕಟ್ಟಿದ ಕರಿಮಣಿಯನ್ನು ಹರಕೊಂಡು ತವರುಮನೆಗೆ ಹಚ್ಚಗೊಡು.  ನಾನು ನನಗೆ ತಿಳಿದಂತೆ ಮಾಡುವೆನು.”

ತಾಯಿ ನಿರಾಶಳಾಗಿ ಮನೆಗೆ ಬಂದು ಸೊಸೆಗೆ ಹೇಳಿದಳು . “ಅಣ್ಣನ ಮಗಳೆಂದು ಹೆಮ್ಮೆಯಿಂದ ನಿನ್ನನ್ನು ತಂದುಕೊಂಡರೆ ಮಗನು ಮಾತೇ ಕೇಳದಾಗಿದ್ದಾನೆ. ಸೊಸೆಮುದ್ದೇ, ಹೋಗಿ ಬಿಡವ್ವ ನಿನ್ನ ತವರುಮನೆಗೆ.”

“ಯಾರು ಅಣ್ಣ, ಯಾರು ತಮ್ಮ? ತಾಯಿ ಯಾರು ತಂದೆ ಯಾರು?  ಅಣ್ಣನ ಮದುವೆ ಹೆಂಡಿರಾರು ಅತ್ತೆ? ತವರು ಮನೆಗೆ ಹೋಗಲಾರೆ ಒಂದು, ಹೊನ್ನು ಖರ್ಚುಮಾಡಿ ಮದುವೆ ಮಾಡಿದಿ; ಈಗ ಎರಡು ಹೊನ್ನು ಖರ್ಚುಮಾಡಿ ನನಗೆ ಕೊರವಂಜಿ ಬುಟ್ಟಿ ಕೊಂಡುಕೊಡು. ಅತ್ತೇ, ಗಂಡನನ್ನು ನೋಡಿ ಬರುವೆ. ಆತನ ರಂಡೆಯನ್ನು ನೋಡಿ ಬರುವೆ” ಎಂದಳು ಸೂಸೆ.

ಹೊರಮೈಗೆ ಮುತ್ತು ಹಚ್ಚಿ, ಒಳಮೈಗ ಮಾಣಿಕಹಚ್ಚಿ ಕೋದ ಬುಟ್ಟಿಯನ್ನು ಅತ್ತೆ ಆ ಕೂಡಲೇ ತಂದಿಟ್ಟಳು. ಸೊಸೆಯು ಅದನ್ನು ತಲೆಯಮೇಲೆ ಹೊತ್ತು ಕಾಲಲ್ಲಿ ಚೆಪ್ಪಲಿ ಮೆಟ್ಟಿಕೊಂಡು ತನ್ನ ರಾಯರಿರುವ ರಾಜಪಟ್ಟಣದ ದಾರಿ ಕೇಳುತ್ತ ನಡೆದಳು –

“ದನ ಕಾಯುವ ಅಣ್ಣಗಳಿರಾ, ದನಕಾಯುವ ತಮ್ಮಗಳಿರಾ, ನಮ್ಮ ರಾಯರಿರುವ ರಾಜಪಟ್ಟಣದ ದಾರಿಯಾವುದು?”

ದನಗಾಹಿಗಳು ಹೇಳಿಕೊಟ್ಟರು – “ಬಾಳೆ ಬನದ ಬಲಕ್ಕೆ ನಿಂಬೆ ಬನದ ಎಡಕ್ಕೆ ನಾಗಸಂಪಿಗೆಯ ನಡುವೆ ಹಸಿರು ಸೀರೆಯುಟ್ಟು, ಹಸಿರು ಕುಪ್ಪಸ ತೊಟ್ಟು, ಹಸಿರು ಸೆರಗ ಮರೆಮಾಡಿಕೊಂಡು ಎದುರು ಬರುತ್ತಿರುವ ತನ್ನಂಥ ಹರದಿಯರನ್ನು ಬಲಗೊಂಡಳು.  ಅದರಂತೆ ಕೆಂಪುಸೀರೆಯುಟ್ಟು, ಕೆಂಪು ಕುಪ್ಪಸ ತೊಟ್ಟು, ಕೆಂಪು ಸೆರಗು ಮರೆಮಾಡಿಕೊಂಡು ಎದುರು ಬರುತ್ತಿರುವ ಹರದಿಯರನ್ನೂ ಬಲಗೊಂಡಳು. ಬೀದಿಯಲ್ಲಿ ಸಾಗಿದ ಆನೆಗಳ ಮುಂದೆ, ಆನೆಮರಿಗಳ ಮುಂದೆ, ಆನೆಯನ್ನೇರುವ ಚದುರಮನ್ನೆಯರ ಮಗಳು ರಾಜಬೀದಿಯಲ್ಲಿ ಹೊರಟಳು.  ಒಂಟೆಗಳ ಮುಂದೆ, ಒಂಟೆಗಳನ್ನೇರುವ ಭಂಟಮನ್ನೆಯರ ಮಗಳು ರಾಜಬೀದಿಯಲ್ಲಿ ಸಾಗಿದಳು.

“ಕಾಲಲ್ಲಿ ಕಂಚಿನಪಿಲ್ಲೆ, ಕಿವಿಯಲ್ಲಿ ಹಿತ್ತಾಳೆಯ ಓಲೆ, ಸರಪಳಿ ಗಂಟಿಸರದಾಳಿ ಧರಿಸಿದ ನೀನು ಯಾವನಾಡಿನ ಕೊರವೆ” ಎಂದು ಕೇಳಿದನು ಒಬ್ಬ ತರುಣ.

“ನಾನು ಈ ನಾಡ ಕೊರವಿಯೂ ಅಲ್ಲ ; ಆ ನಾಡ ಕೊರವಿಯೂ ಅಲ್ಲ.  ದೇವಲೋಕದ ಕೊರವೆ. ಜಾಣ, ನಾನು ದೇವರು ಹೇಳುತ್ತೇನೆ ಕೇಳು-ಸೂಳೆಯರು ನಿನ್ನನ್ನು ಮೋಡಿಮಾಡಿ ಹೊಡೆಯುತ್ತಾರೆ” ಎ೦ದಳು ಕೊರವಿ.

“ಮಡದಿಯನ್ನು ಬಿಟ್ಟು ಹನ್ನೆರಡುವರುಷ ಆಯ್ತು ಕೊರವೀ. ಮಡದಿಯನ್ನು ಕೂಡಿಸು. ಕೈಮುಗಿಯುತ್ತೇನೆ ; ನಿನ್ನ ಕಾಲು ಬೀಳುತ್ತೇನೆ. ಅಷ್ಟು ಮಾಡಿದರೆ ನಿನ್ನನ್ನು ಕರೆತಂದು ಸೀರೆ ಕುಪ್ಪಸ ಉಡುಗೊರೆ ಕೊಡುತ್ತೇನೆ” ಎಂದನು ಆ ಜಾಣ.

“ನನ್ನ ಕಾಲ ಬೀಳುವುದಕ್ಕೆ, ನನ್ನ ಕೈಮುಗಿಯುವುದಕ್ಕೆ ಯಾರಿಗೆ ಯಾವ ತಪ್ಪು ಮಾಡಿರುವಿರಿ ಮಾರಾಯರೇ?  ಹೋಗೋಣ ನಡೆಯಿರಿ” ಎಂದು
ಕೊರವಿ ನುಡಿದು, ಆತನ ದಿಗಿಲನ್ನೆಲ್ಲ ಬಯಲು ಮಾಡಿದಳು.

ಗಂಡಹೆಂಡಿರು ಕೂಡಿಕೊಂಡು ಸಡಗರದಿಂದ ತಮ್ಮೂರ ಹಾದಿ ಹಿಡಿದರು. ಹಿ೦ದೆ ಆ ರಂಡಿ – ಸೂಳೆ ಬೆನ್ನುಹತ್ತಿದ್ದನ್ನು ಕಂಡು, ಆಕೆಯನ್ನು ಹಿಂದಕ್ಕೆ ಹೊಡೆದು ಹಾಕಿದರು.

“ಆರು ವರುಷ ತಿರುಗಿ ಅರಸನನ್ನು ತಂದಿದ್ದೇನೆ ಅತ್ತೇ, ಹೊರಗಡೆ ಬಾ.  ನಿನ್ನ ಮಗನನ್ನು ಒಳಗಡೆ ಕರೆದುಕೋ” ಎಂದು ಸೊಸೆಯು ಕೂಗಿದಾಗ ಅತ್ತೆಗಾದ ಆನಂದಕ್ಕೆ ಅಳತೆಯಿದೆಯೆ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...