Home / ಕವನ / ಕವಿತೆ / ಬುದ್ಧನ ಹುಡುಕಾಟ

ಬುದ್ಧನ ಹುಡುಕಾಟ

ಬುದ್ಧನ ಹುಡುಕಿದೆ.
ಉಸಿರುಗಟ್ಟಿಸುವ ನಾಗರೀಕ ತಾಣಗಳಲ್ಲಿ
ಚಿತ್ರಹಿಂಸೆಯ ಗ್ಯಾಸ್ ಛೇಂಬರ್‌ಗಳಲ್ಲಿ
ತೊಟ್ಟಿಲಲ್ಲಿ ಮಲಗಿದ ಮುದ್ದು ಕಂದನ
ಮುಗ್ಧ ಮುಗುಳು ನಗೆಯ ಬೆಳಕಲ್ಲಿ
ದ್ವೇಷವಿಲ್ಲ, ಮಗುವಿನ ಮುಗ್ಧತೆಯಲ್ಲಿ.

ಬುದ್ಧನ ಹುಡುಕಿದೆ.
ಬೆಳಗು ಮುಂಜಾವಿನ ಬಿದ್ದ ಕನಸಿನಲಿ
ಹುಲ್ಲ ಮೇಲಿನ ಇಬ್ಬನಿ ಕರಗಿ ಮೋಡವಾಗುವಲ್ಲಿ
ಅಕ್ಷರಗಳು ಅಜ್ಞಾನ ಸುಡುವ ಸಾಕ್ಷಿ -ಪ್ರಜ್ಞೆ ಅರಳುವಲ್ಲಿ
ಅಹಮ್ಮನ್ನು ಅಗ್ನಿಗರ್‍ಪಿಸಿದ ಆತ್ಮದ ಪ್ರಭೆಯಲ್ಲಿ.

ಬುದ್ಧನ ಹುಡುಕಿದೆ
ಶಬ್ದ ಸಂತೆಯಲ್ಲಿ ನಿಶಬ್ಧ ಗೂಡುಗಳಲ್ಲಿ
ಮಹಾ ಮೌನದ ಘನತೆಯ ನಡೆಯಲ್ಲಿ
ನೆಲದ ತುಂಬ ಬೆಳಕಿನ ಬೀಜ ಬಿತ್ತುವಲ್ಲಿ
ಶಾಂತಿ ಪ್ರಭೆಯ ಚಿಗುರು ಮೊಳೆಯುವಲ್ಲಿ.

ಬುದ್ಧನ ಹುಡುಕಿದೆ.
ಬೋಧಿವೃಕ್ಷದ ನೆರಳಿನಲ್ಲಿ ಜ್ಞಾನ ಬೆಳಕಿಲ್ಲಿ
ಬುದ್ಧಗಯಾದ ಎಲೆ ಮೇಲಿನ ಇಬ್ಬನಿಯಲ್ಲಿ
ಕೋಗಿಲೆಯ ಇಂಪಾದ ಶಾಂತಿ ಸಂದೇಶದಲ್ಲಿ
ಉದಾತ್ತ ನಿಲುವಿನ ಆ ಭವ್ಯ ಭಂಗಿಯಲ್ಲಿ

ಬುದ್ಧನ ಹುಡುಕಿದೆ.
ಊರು ಕೇರಿಯ ವಧಾಸ್ಥಾನಗಳಲ್ಲಿ
ಚಿತ್ತಕ್ಕೆ ಹತ್ತಿದ ಬೆಂಕಿ ಉರಿಯುವಲ್ಲಿ
ಪ್ರೀತಿ ಲೋಕದ ಬೀಜ ಮೊಳೆಯುವಲ್ಲಿ
ಮನದ ಕೋಣೆಯಲಿ ಮಬ್ಬು ಪ್ರಜ್ವಲಿಸುವಲ್ಲಿ
ಕರುಣಾರಸದಲ್ಲಿ ತೊಯ್ದ ಅದ್ದಿದ ಭಾವಗಳಲಿ.

ಬುದ್ಧನ ಹುಡುಕಿದೆ.
ನಿದ್ದೆಯಿಂದೆದ್ದು ನಡೆದ ಬರಿಗಾಲು ನಡಿಗೆಯಲ್ಲಿ
ನಾಡ ತುಂಬ ಮೂಡಿದ ಹೆಜ್ಜೆ ಗುರುತುಗಳಲ್ಲಿ
ಬತ್ತಿಹೋದ ಕರುಳ ಬಳ್ಳಿಯ ಸಂಬಂಧಗಳಲ್ಲಿ
ಇಬ್ಬನಿ ಹನಿಗೆ ಅಮರತ್ವದ ಆಸೆ ಚಿಗುರುವಲ್ಲಿ.

ಬುದ್ಧನ ಹುಡುಕಿದೆ.
ರಸ್ತೆಗಂಟಿದ ರಕ್ತ ಕಲೆಗಳ ತೊಳೆವ ಮಳೆ ಹನಿಗಳಲ್ಲಿ
ಕ್ರೌರ್‍ಯತುಂಬಿರುವಲ್ಲಿ, ಪ್ರೀತಿಯ ಸಾಗರಗಳಲ್ಲಿ
ಟಾರು ರಸ್ತೆಯ ಕಲೆಗಳೇನೋ ತೊಳೆದು ಹೋದವು
ಬಿದ್ದ ಹನಿಗಳ ಹೀರಿಕೊಳ್ಳಲು ನೆಲವೇ ಇಲ್ಲವಲ್ಲ
ಬರೀ ಹಾರ್‍ನು, ಸಿಗ್ನಲ್ಲು, ಟ್ರಾಫಿಕ್ಕು, ಕಾಂಕ್ರೀಟು ಬರೀ ಧೂಳು
ಬರಡು ಕಾಂಕ್ರೀಟು ಕಾಡಿನಲ್ಲಿ ಎಲ್ಲಿ ಹುಡುಕಲಿ ನಿನ್ನ
ಬುದ್ಧ ಎಲ್ಲಿ ಹುಡುಕಲಿ ನಿನ್ನ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...