Home / ಕವನ / ಕವಿತೆ / ಬುದ್ಧನ ಹುಡುಕಾಟ

ಬುದ್ಧನ ಹುಡುಕಾಟ

ಬುದ್ಧನ ಹುಡುಕಿದೆ.
ಉಸಿರುಗಟ್ಟಿಸುವ ನಾಗರೀಕ ತಾಣಗಳಲ್ಲಿ
ಚಿತ್ರಹಿಂಸೆಯ ಗ್ಯಾಸ್ ಛೇಂಬರ್‌ಗಳಲ್ಲಿ
ತೊಟ್ಟಿಲಲ್ಲಿ ಮಲಗಿದ ಮುದ್ದು ಕಂದನ
ಮುಗ್ಧ ಮುಗುಳು ನಗೆಯ ಬೆಳಕಲ್ಲಿ
ದ್ವೇಷವಿಲ್ಲ, ಮಗುವಿನ ಮುಗ್ಧತೆಯಲ್ಲಿ.

ಬುದ್ಧನ ಹುಡುಕಿದೆ.
ಬೆಳಗು ಮುಂಜಾವಿನ ಬಿದ್ದ ಕನಸಿನಲಿ
ಹುಲ್ಲ ಮೇಲಿನ ಇಬ್ಬನಿ ಕರಗಿ ಮೋಡವಾಗುವಲ್ಲಿ
ಅಕ್ಷರಗಳು ಅಜ್ಞಾನ ಸುಡುವ ಸಾಕ್ಷಿ -ಪ್ರಜ್ಞೆ ಅರಳುವಲ್ಲಿ
ಅಹಮ್ಮನ್ನು ಅಗ್ನಿಗರ್‍ಪಿಸಿದ ಆತ್ಮದ ಪ್ರಭೆಯಲ್ಲಿ.

ಬುದ್ಧನ ಹುಡುಕಿದೆ
ಶಬ್ದ ಸಂತೆಯಲ್ಲಿ ನಿಶಬ್ಧ ಗೂಡುಗಳಲ್ಲಿ
ಮಹಾ ಮೌನದ ಘನತೆಯ ನಡೆಯಲ್ಲಿ
ನೆಲದ ತುಂಬ ಬೆಳಕಿನ ಬೀಜ ಬಿತ್ತುವಲ್ಲಿ
ಶಾಂತಿ ಪ್ರಭೆಯ ಚಿಗುರು ಮೊಳೆಯುವಲ್ಲಿ.

ಬುದ್ಧನ ಹುಡುಕಿದೆ.
ಬೋಧಿವೃಕ್ಷದ ನೆರಳಿನಲ್ಲಿ ಜ್ಞಾನ ಬೆಳಕಿಲ್ಲಿ
ಬುದ್ಧಗಯಾದ ಎಲೆ ಮೇಲಿನ ಇಬ್ಬನಿಯಲ್ಲಿ
ಕೋಗಿಲೆಯ ಇಂಪಾದ ಶಾಂತಿ ಸಂದೇಶದಲ್ಲಿ
ಉದಾತ್ತ ನಿಲುವಿನ ಆ ಭವ್ಯ ಭಂಗಿಯಲ್ಲಿ

ಬುದ್ಧನ ಹುಡುಕಿದೆ.
ಊರು ಕೇರಿಯ ವಧಾಸ್ಥಾನಗಳಲ್ಲಿ
ಚಿತ್ತಕ್ಕೆ ಹತ್ತಿದ ಬೆಂಕಿ ಉರಿಯುವಲ್ಲಿ
ಪ್ರೀತಿ ಲೋಕದ ಬೀಜ ಮೊಳೆಯುವಲ್ಲಿ
ಮನದ ಕೋಣೆಯಲಿ ಮಬ್ಬು ಪ್ರಜ್ವಲಿಸುವಲ್ಲಿ
ಕರುಣಾರಸದಲ್ಲಿ ತೊಯ್ದ ಅದ್ದಿದ ಭಾವಗಳಲಿ.

ಬುದ್ಧನ ಹುಡುಕಿದೆ.
ನಿದ್ದೆಯಿಂದೆದ್ದು ನಡೆದ ಬರಿಗಾಲು ನಡಿಗೆಯಲ್ಲಿ
ನಾಡ ತುಂಬ ಮೂಡಿದ ಹೆಜ್ಜೆ ಗುರುತುಗಳಲ್ಲಿ
ಬತ್ತಿಹೋದ ಕರುಳ ಬಳ್ಳಿಯ ಸಂಬಂಧಗಳಲ್ಲಿ
ಇಬ್ಬನಿ ಹನಿಗೆ ಅಮರತ್ವದ ಆಸೆ ಚಿಗುರುವಲ್ಲಿ.

ಬುದ್ಧನ ಹುಡುಕಿದೆ.
ರಸ್ತೆಗಂಟಿದ ರಕ್ತ ಕಲೆಗಳ ತೊಳೆವ ಮಳೆ ಹನಿಗಳಲ್ಲಿ
ಕ್ರೌರ್‍ಯತುಂಬಿರುವಲ್ಲಿ, ಪ್ರೀತಿಯ ಸಾಗರಗಳಲ್ಲಿ
ಟಾರು ರಸ್ತೆಯ ಕಲೆಗಳೇನೋ ತೊಳೆದು ಹೋದವು
ಬಿದ್ದ ಹನಿಗಳ ಹೀರಿಕೊಳ್ಳಲು ನೆಲವೇ ಇಲ್ಲವಲ್ಲ
ಬರೀ ಹಾರ್‍ನು, ಸಿಗ್ನಲ್ಲು, ಟ್ರಾಫಿಕ್ಕು, ಕಾಂಕ್ರೀಟು ಬರೀ ಧೂಳು
ಬರಡು ಕಾಂಕ್ರೀಟು ಕಾಡಿನಲ್ಲಿ ಎಲ್ಲಿ ಹುಡುಕಲಿ ನಿನ್ನ
ಬುದ್ಧ ಎಲ್ಲಿ ಹುಡುಕಲಿ ನಿನ್ನ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...