Home / ಕವನ / ಕವಿತೆ / ಸಮನ್ವಯ ಸಂತ

ಸಮನ್ವಯ ಸಂತ

ಮುರಿದ ಮೀನಾರುಗಳು, ಕಡಿದ ಮಂದಿರಗಳು
ಹಾಳು ಗೋಡೆ ಅವಶೇಷ ಕೋಟೆ ಕೊತ್ತಳಗಳು
ಗತ ಮರೆತ ಇತಿಹಾಸದ ಪುಟಗಳು
ಸರಸ ಜನನ, ವಿರಸಮರಣವೆಂದೆ
ಸಮರಸವೇ ನಿನ್ನ ಬದುಕಾಯ್ತು ಗೆಳೆಯಾ!

ಲವಲವಿಕೆಯ ನಗುವಿನ ಒಡೆಯ ನೀನು
ಸುನೀಲಾಳ ಬದುಕಿಗೆ ಪ್ರೀತಿ ಸುರಿದಾತ
ಸಮನ್ವಯ ಸಂತನದು ಪ್ರೇಮ ಮಂತ್ರ
ಬದುಕೇ ಬಾನುಲಿ-ಬಾನುಲಿಯೇ ಬದುಕು
ಪ್ರೀತಿಸಿದವಳ ಕೈಬಿಡದ ನಂಟು
ನಿಷ್ಕಲ್ಮಶ ತರಂಗಗಳೆಬ್ಬಿಸಿದ ನಿನ್ನಾ ನಗು
ಜುಳು ಜುಳು ಹರಿವ ನದಿಯ ನೀರು!

ಮಂದಿರ ಮಸೀದಿಗಳೆಂದೂ ನಿನಗೆ ಕಾಡಲಿಲ್ಲ.
ನಿನಗೆ ಕಾಡದಿರುವುದೇ ಅವರ ಸಮಸ್ಯೆಯಾಗಿದೆ ನೋಡು.
ನೀನು ಮಸೀದಿ, ಅವಳು ಮಂದಿರ, ಮುಂದೆ
ನಿನ್ನಂಗಳದಲ್ಲಿ ಮೂರು ಹೂ ಅರಳಿ ನಿಂತವು ನೋಡು.
ಹೂಗಳ ಗಂಧ, ಸುಗಂಧ ಬೀಸೋ ಗಾಳಿಯಲಿ ಸೇರಿ
ಅದಕೆ ಯಾವ ಜಾತಿಯೆಂದು ಕರೆಯಲಿ ಹೇಳು?
ಗಾಳಿಗೆ, ಸುಗಂಧಕೆ ಜಾತಿಯುಂಟೆ ಗೆಳೆಯಾ!

ರಾಮ-ರಹೀಮರ ಸಾಮರಸ್ಯದ ಕುಡಿಯಾದೆ
ಎದೆ ತುಂಬಾ ಬೆಳಕು ಚೆಲ್ಲಿದೆ ನೋಡು
ಅಲ್ಲಾ-ಅಲ್ಲಮರ ಸ್ನೇಹಕ್ಕೆ ಸೇತುವೆಯಾದೆ.
ಸೌಹಾರ್‍ದ ಬದುಕಿಗೊಂದು ಮಾದರಿಯಾದೆ.
ಸಮನ್ವಯದ ಹಾಡಿಗೆ ಮುನ್ನುಡಿ ಬರೆದೆ
ಹೇಳು ಗೆಳೆಯಾ ಸುಗಂಧಕೆ, ಗಾಳಿಗೆ?
ಯಾವ ಜಾತಿ ಹಿಡಿದು ಕರೆಯಲಿ ಹೇಳು ಗೆಳೆಯಾ!
*****
(ಜಿ.ಎಂ.ಶಿರಹಟ್ಟಿಯವರ ಅಭಿನಂದನ ಗ್ರಂಥಕ್ಕಾಗಿ ಬರೆದ ಕವಿತೆ)

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...