Home / ಕವನ / ಕವಿತೆ / ಸಮನ್ವಯ ಸಂತ

ಸಮನ್ವಯ ಸಂತ

ಮುರಿದ ಮೀನಾರುಗಳು, ಕಡಿದ ಮಂದಿರಗಳು
ಹಾಳು ಗೋಡೆ ಅವಶೇಷ ಕೋಟೆ ಕೊತ್ತಳಗಳು
ಗತ ಮರೆತ ಇತಿಹಾಸದ ಪುಟಗಳು
ಸರಸ ಜನನ, ವಿರಸಮರಣವೆಂದೆ
ಸಮರಸವೇ ನಿನ್ನ ಬದುಕಾಯ್ತು ಗೆಳೆಯಾ!

ಲವಲವಿಕೆಯ ನಗುವಿನ ಒಡೆಯ ನೀನು
ಸುನೀಲಾಳ ಬದುಕಿಗೆ ಪ್ರೀತಿ ಸುರಿದಾತ
ಸಮನ್ವಯ ಸಂತನದು ಪ್ರೇಮ ಮಂತ್ರ
ಬದುಕೇ ಬಾನುಲಿ-ಬಾನುಲಿಯೇ ಬದುಕು
ಪ್ರೀತಿಸಿದವಳ ಕೈಬಿಡದ ನಂಟು
ನಿಷ್ಕಲ್ಮಶ ತರಂಗಗಳೆಬ್ಬಿಸಿದ ನಿನ್ನಾ ನಗು
ಜುಳು ಜುಳು ಹರಿವ ನದಿಯ ನೀರು!

ಮಂದಿರ ಮಸೀದಿಗಳೆಂದೂ ನಿನಗೆ ಕಾಡಲಿಲ್ಲ.
ನಿನಗೆ ಕಾಡದಿರುವುದೇ ಅವರ ಸಮಸ್ಯೆಯಾಗಿದೆ ನೋಡು.
ನೀನು ಮಸೀದಿ, ಅವಳು ಮಂದಿರ, ಮುಂದೆ
ನಿನ್ನಂಗಳದಲ್ಲಿ ಮೂರು ಹೂ ಅರಳಿ ನಿಂತವು ನೋಡು.
ಹೂಗಳ ಗಂಧ, ಸುಗಂಧ ಬೀಸೋ ಗಾಳಿಯಲಿ ಸೇರಿ
ಅದಕೆ ಯಾವ ಜಾತಿಯೆಂದು ಕರೆಯಲಿ ಹೇಳು?
ಗಾಳಿಗೆ, ಸುಗಂಧಕೆ ಜಾತಿಯುಂಟೆ ಗೆಳೆಯಾ!

ರಾಮ-ರಹೀಮರ ಸಾಮರಸ್ಯದ ಕುಡಿಯಾದೆ
ಎದೆ ತುಂಬಾ ಬೆಳಕು ಚೆಲ್ಲಿದೆ ನೋಡು
ಅಲ್ಲಾ-ಅಲ್ಲಮರ ಸ್ನೇಹಕ್ಕೆ ಸೇತುವೆಯಾದೆ.
ಸೌಹಾರ್‍ದ ಬದುಕಿಗೊಂದು ಮಾದರಿಯಾದೆ.
ಸಮನ್ವಯದ ಹಾಡಿಗೆ ಮುನ್ನುಡಿ ಬರೆದೆ
ಹೇಳು ಗೆಳೆಯಾ ಸುಗಂಧಕೆ, ಗಾಳಿಗೆ?
ಯಾವ ಜಾತಿ ಹಿಡಿದು ಕರೆಯಲಿ ಹೇಳು ಗೆಳೆಯಾ!
*****
(ಜಿ.ಎಂ.ಶಿರಹಟ್ಟಿಯವರ ಅಭಿನಂದನ ಗ್ರಂಥಕ್ಕಾಗಿ ಬರೆದ ಕವಿತೆ)

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...