Home / ಕವನ / ಕವಿತೆ / ಬಡವನ್ ದೇವ್ರು

ಬಡವನ್ ದೇವ್ರು

ಸಾವರ್ ಜನಕೆ ಸಾವರ್ ದೇವ್ರು !
ಬಡವನ ದೇವ್ರು ವೊಟ್ಟೆ !
ದುಡ್ಡಿನ್ ಡಬ್ಬಿ ! ಯೋಳಾದ್ ಕೇಳು !
ಸತ್ಯಕ್ ನಾ ಬಾಯ್ ಕೊಟ್ಟೆ ! ೧

ತಿನ್ನದ್ ಕಲ್ಲಿನ್ ದೇವರ್ ಮುಂದೆ
ತಿಂಡಿ ತುಂಬಿದ ತಟ್ಟೆ !
ಕಾಲಿ ತಿಂದು ಕಾಲಿ ತಿಂದು
ಕೆರಳುರಳೈತೆ ವೊಟ್ಟೆ ! ೨

ಬಡವನ್ ದೇವ್ರನ್ ಕೆರಳಿಸ್ಬಾರ್‍ದು-
ಲೋಕಕ್ ಒಳ್ಳೇದಲ್ಲ !
ಬಡವನ್ ದೇವ್ರಿಗ್ ನೆರಳಿಸ್ತಿದ್ರೆ-
ಲೋಕಕ್ ಬೆಳಕೇ ಇಲ್ಲ ! ೩

ನೀ ಮುಗ್ದ್ ಪೂಜೇ ಮಾಡೋ ದೇವ್ರು
ಮುನ್ನೂರು ಮುವ್ವತ್ ಕೋಟಿ
ಇದ್ರೂ, ಬಡವನ್ ದೇವ್ರೀಗೂನೆ
ತೋರ್‍ಸು ಆ ಪೈಪೋಟಿ. ೪

ತಿನ್ಲೂನಾರ್‍ವು ದುಡಿಲೂನಾರ್‍ವು
ಕಲ್ಲಿನ್ ದೇವರ್ ಗುಂಪು !
ಬಡವನ್ ದೇವಿರ್‍ಗ್ ನೀನ್ ಇಕ್ಕಿದ್ರೆ
ನಿನ್ಗೆ ಬಾಳ ತಂಪು ! ೫

ನಂ ದೇವರ್‍ಗೆ ಬೋನ ನೀಡು-
ದರ್‍ಮ ಬರತೈತ್ ನಿಂಗೆ ;
ದುಡ್ಡಿನ್ ಡಬ್ಬಿ ಕರಗೀತ್ ಅಂತ
ಸುಂಕೆ ಕುಂತ್ರೆ ಯೆಂಗೆ ? ೬

ಅಗ್ನಾನೀಗೆ ಮೆಲ್ಗ್ ಯೋಳ್ತಾರೆ
ಎಂಟ್ ಅತ್ತ್ ಸಾರಿ ಬುದ್ದಿ;
ಕೇಳ್ದೆ ವೋದ್ರೆ ಗೊತ್ತೈತಲ್ಲ-
ಯಿಡಕೊಂಡ್ ಮಾಡ್ಸೋದ್ ಒದ್ದಿ ! ೭

ಬಡವನ್ ದೇವ್ರನ್ ಕೆಣಕ್ಲೆ ಬಾರ್‍ದು-
ನೀ ಕಂಡಿಲ್ ಅದರ್ ಯೇಟ !
ಬಡವನ್ ದೇವ್ರು, ಲೋಕಾನ್ ನುಂಗೋ
ಜೋಲಾಮುಕಿ ! ಬೇಟ ! ೮

ಬಡವನ್ ದೇವ್ರು ಗರ್‍ಜಿಸ್ತಿದ್ರೆ
ಕೇಳಿಸ್ತಿದ್ರ್, ಆ ಸದ್ದು-
ಕಲ್ಲಿನ್ ದೇವ್ರು ಗಿಲ್ಲಿನ್ ದೇವ್ರು
ಪೇರಿ ಕಿತ್ತಾರ್‌ ಎದ್ದು! ೯

ಬೆನ್ನಿನ್ ಚರ್‍ಮ ಬದ್ರಾಗ್ ಇರಲಿ !
ಬಡವನ್‌ ದೇವ್ರಿಗ್ ಬೊಗ್ಗು !
ಕಲ್ಲಿನ್ ದೇವಿರ್ಗ್ ಉಲ್ನೆ ತಿನ್ಸಿ
ಸದ್ಯಕ್ ಉಳದೇಂತ್‌ ಯಿಗ್ಗು ? ೧೦

ಲೋಕಕ್ ಸಾಂತಿ-ಬಡವನ್ ದೇವ್ರು
ಮಲಗಿರೋವರಗೂನೆ !
ಬಡವನ್ ದೇವ್ರು ಎದ್ದ್ ನಿಂತಾಂದ್ರೆ
ಪ್ರಳಯ ಅದಕೇ ತಾನೆ ! ೧೧

ಪ್ರಳಯ ಬಂದ್ರೆ ಯಾರ್‍ಗ್ ಏನ್ ಸುಕ ?
ನಾಸ-ಅರಸೂ ಆಳೂ !
ಸಾಯೋರ್ ಜತೆಗೇ ಸಾಯೋ ಬದಲು
ಎಲ್ಲಾರ್ ಸಂಗ್ಡ ಬಾಳು ! ೧೨
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...